<p><strong>ಮೈಸೂರು:</strong> ನಗರದ ವಿವಿಧೆಡೆ ಶಂಕರಾಚಾರ್ಯರ 1,231ನೇ ಜಯಂತಿ ಹಾಗೂ ರಾಮಾನುಜಾಚಾರ್ಯರ 1,002ನೇ ಜಯಂತಿಯನ್ನು ಗುರುವಾರ ವೈಶಿಷ್ಟ್ಯಪೂರ್ಣವಾಗಿ ಆಚರಣೆ ಮಾಡಲಾಯಿತು.</p>.<p>ರಾಮಾನುಜ ಸಹಸ್ರಮಾನೋತ್ಸವ ಸಮಿತಿಯ ವತಿಯಿಂದ ಅಗ್ರಹಾರದ ತ್ಯಾಗರಾಜ ರಸ್ತೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಜಯಂತಿ ಅಂಗವಾಗಿ ‘ಆಧ್ಯಾತ್ಮಿಕ ಜಗತ್ತು’ ಕಾರ್ಯಕ್ರಮಕ್ಕೆ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.</p>.<p>‘ಶಂಕರಾಚಾರ್ಯರ ಕೊಡುಗೆ ಅಪಾರ. 32 ವರ್ಷವಷ್ಟೇ ಬದುಕಿದ್ದರೂ ಅವರು ಮಾಡಿದ ಕೆಲಸ ಸ್ಮರಣೀಯ. ಹಿಂದೂ ಧರ್ಮದ ಜಾಗೃತಿ ಕೆಲಸವನ್ನು ಯಾವುದೇ ಮಾಧ್ಯಮ ಸಂಪರ್ಕವಿಲ್ಲದೆ ಮಾಡಿರುವುದು ಇವತ್ತಿನ ಹಿಂದೂಪರ ಸಂಘಟನೆಗಳಿಗೆ ಮಾದರಿಯಾಗಿದೆ’ ಎಂದು ಹೇಳಿದರು.</p>.<p>ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಮಾತನಾಡಿ, ‘ಜನರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೇವರಲ್ಲಿ ಭಕ್ತಿ ಭಾವ ಬೆಳೆಸಿಕೊಳ್ಳಬೇಕು. ಆಗ ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ಮೂಡುತ್ತದೆ’ ಎಂದರು.</p>.<p>ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ‘ರಾಜ್ಯ ಸರ್ಕಾರ ಶಂಕರ ಜಯಂತಿಯನ್ನು ಆಚರಿಸುತ್ತಿರುವುದು ಮತ್ತು ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಿರುವುದು ಶ್ಲಾಘನೀಯ. ಹಾಗೆಯೇ, ಮುಂದಿನ ದಿನಗಳಲ್ಲಿ ಶಂಕರ ಜಯಂತಿ ಜೊತೆಯಲ್ಲೇ ರಾಮಾನುಜರ– ಮಧ್ವರ ಜಯಂತಿ ಆಚರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್, ಮುಖಂಡರಾದ ಆರ್.ಜೆ.ನರಸಿಂಹ ಅಯ್ಯಂಗಾರ್,ಎಂ.ಡಿ.ಪಾರ್ಥಸಾರಥಿ,ಸೌಭಾಗ್ಯಮೂರ್ತಿ, ಪುಟ್ಟಸ್ವಾಮಿ, ಬ್ರಾಹ್ಮಣ ಯುವ ವೇದಿಕೆಯ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್, ರಾಜಗೋಪಾಲ್ ಕಡಕೊಳ ಜಗದೀಶ್, ರಂಗನಾಥ್, ಸುಚೀಂದ್ರ, ಪ್ರಶಾಂತ್, ಅರುಣ್, ಚಕ್ರಪಾಣಿ ಭಾಗವಹಿಸಿದ್ದರು.</p>.<p>ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಮೃತಿ ಇಲಾಖೆ ವತಿಯಿಂದ ಕಲಾಮಂದಿರದ ಮನೆಯಂಗಳದಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಜ್ಯೋತಿ ಪುಷ್ಪಾರ್ಚನೆ ಮಾಡಿದರು.</p>.<p>ಶಂಕರಾಚಾರ್ಯರ ಮೂರ್ತಿ, ಭಾವಚಿತ್ರಗಳನ್ನು ನಗರದ ಬೀದಿಗಳಲ್ಲಿ ಮಂಗಳವಾದ್ಯ, ಭಜನೆ, ವೇದ ಘೋಷಗಳೊಂದಿಗೆ ಮೆರವಣಿಗೆ ನಡೆಸಲಾಯಿತು.</p>.<p>ಅಭಿನವ ಶಂಕರಾಲಯ ವತಿಯಿಂದ ಖಿಲ್ಲೆ ಮೊಹಲ್ಲಾದ ಶೃಂಗೇರಿ ಶಂಕರಮಠದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಯಿತು. ಸಂಜೆ ಶಂಕರಾಚಾರ್ಯರ ರಥೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಎಸ್.ಎ.ರಾಮದಾಸ್, ಕಾಂಗ್ರೆಸ್ ಮುಖಂಡ ಸಿ.ಎಚ್.ವಿಜಯಶಂಕರ್, ಡಿ.ಟಿ.ಪ್ರಕಾಶ್, ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್ ಪಾಲ್ಗೊಂಡಿದ್ದರು.</p>.<p>ವಿಪ್ರ ಜಾಗೃತಿ ವೇದಿಕೆ ವತಿಯಿಂದ ವಿದ್ಯಾರಣ್ಯಪುರಂನಲ್ಲಿರುವ ಅವನಿ ಶೃಂಗೇರಿ ಶಂಕರಮಠದಲ್ಲಿ ಸಂಜೆ ಆದಿಶಂಕರಾಚಾರ್ಯರ ಭವ್ಯ ಮೆರವಣಿಗೆ ನಡೆಯಿತು. ವಿಪ್ರ ಮುಖಂಡರು ಭಾಗವಹಿಸಿದ್ದರು. ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯ, ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿತ್ತು.</p>.<p>ಯಾಜ್ಞವಲ್ಕ್ಯ ಶುಕ್ಲ ಯಜುರ್ವೇದ ಮಹಾಸಭಾ ವತಿಯಿಂದ ಬೋಗಾದಿ 2ನೇ ಹಂತದ ಆಯಿಷ್ ಕಾಲೊನಿಯಲ್ಲಿ ಶಂಕರ ಜಯಂತಿ ಆಚರಿಸಲಾಯಿತು.</p>.<p>ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿಪೂರ್ವ ಕಾಲೇಜು ವತಿಯಿಂದ ಜಯಂತಿ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಂಸ್ಕೃತ ಉಪನ್ಯಾಸಕ ವಿದ್ವಾನ್ ರಾಘವೇಂದ್ರ ಭಟ್ ಅವರು ಶಂಕರರ ಜೀವನ ಚರಿತ್ರೆ ತಿಳಿಸಿದರು. ಪ್ರಾಂಶುಪಾಲ ಟಿ.ಎಸ್.ಶ್ರೀಕಂಠಶರ್ಮ, ಜಂಟಿ ಕಾರ್ಯದರ್ಶಿ ಟಿ.ಎಸ್.ಸತ್ಯನಾರಾಯಣರಾವ್ ಇದ್ದರು.</p>.<p>ಶಂಕರ ಜಯಂತಿ ಸಭಾದ ವತಿಯಿಂದ ಸರಸ್ವತಿಪುರಂನ ಸಮುದಾಯ ಭವನದಲ್ಲಿ ಶಂಕರ ಭಜನಾ ಮಂಡಳಿಯ ಸದಸ್ಯರು ಭಕ್ತಿಗೀತೆಗಳ ಗಾಯನವನ್ನು ಪ್ರಸ್ತುತಪಡಿಸಿದರು. ಸಂಜೆ ವಿದ್ವಾನ್ ಹರೀಶ್ ಪಾಂಡವ್ ಅವರು ಸ್ಯಾಕ್ಸೋಫೋನ್ ವಾದನ ನುಡಿಸಿದರು.</p>.<p>ವಿವೇಕಾನಂದನಗರ ಬ್ರಾಹ್ಮಣ ಮಹಾಸಭಾವು ಶಂಕರ ಜಯಂತಿ, ರಾಮಾನುಜಾಚಾರ್ಯರ ಜಯಂತಿ ಆಚರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದ ವಿವಿಧೆಡೆ ಶಂಕರಾಚಾರ್ಯರ 1,231ನೇ ಜಯಂತಿ ಹಾಗೂ ರಾಮಾನುಜಾಚಾರ್ಯರ 1,002ನೇ ಜಯಂತಿಯನ್ನು ಗುರುವಾರ ವೈಶಿಷ್ಟ್ಯಪೂರ್ಣವಾಗಿ ಆಚರಣೆ ಮಾಡಲಾಯಿತು.</p>.<p>ರಾಮಾನುಜ ಸಹಸ್ರಮಾನೋತ್ಸವ ಸಮಿತಿಯ ವತಿಯಿಂದ ಅಗ್ರಹಾರದ ತ್ಯಾಗರಾಜ ರಸ್ತೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಜಯಂತಿ ಅಂಗವಾಗಿ ‘ಆಧ್ಯಾತ್ಮಿಕ ಜಗತ್ತು’ ಕಾರ್ಯಕ್ರಮಕ್ಕೆ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.</p>.<p>‘ಶಂಕರಾಚಾರ್ಯರ ಕೊಡುಗೆ ಅಪಾರ. 32 ವರ್ಷವಷ್ಟೇ ಬದುಕಿದ್ದರೂ ಅವರು ಮಾಡಿದ ಕೆಲಸ ಸ್ಮರಣೀಯ. ಹಿಂದೂ ಧರ್ಮದ ಜಾಗೃತಿ ಕೆಲಸವನ್ನು ಯಾವುದೇ ಮಾಧ್ಯಮ ಸಂಪರ್ಕವಿಲ್ಲದೆ ಮಾಡಿರುವುದು ಇವತ್ತಿನ ಹಿಂದೂಪರ ಸಂಘಟನೆಗಳಿಗೆ ಮಾದರಿಯಾಗಿದೆ’ ಎಂದು ಹೇಳಿದರು.</p>.<p>ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಮಾತನಾಡಿ, ‘ಜನರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೇವರಲ್ಲಿ ಭಕ್ತಿ ಭಾವ ಬೆಳೆಸಿಕೊಳ್ಳಬೇಕು. ಆಗ ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ಮೂಡುತ್ತದೆ’ ಎಂದರು.</p>.<p>ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ‘ರಾಜ್ಯ ಸರ್ಕಾರ ಶಂಕರ ಜಯಂತಿಯನ್ನು ಆಚರಿಸುತ್ತಿರುವುದು ಮತ್ತು ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಿರುವುದು ಶ್ಲಾಘನೀಯ. ಹಾಗೆಯೇ, ಮುಂದಿನ ದಿನಗಳಲ್ಲಿ ಶಂಕರ ಜಯಂತಿ ಜೊತೆಯಲ್ಲೇ ರಾಮಾನುಜರ– ಮಧ್ವರ ಜಯಂತಿ ಆಚರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್, ಮುಖಂಡರಾದ ಆರ್.ಜೆ.ನರಸಿಂಹ ಅಯ್ಯಂಗಾರ್,ಎಂ.ಡಿ.ಪಾರ್ಥಸಾರಥಿ,ಸೌಭಾಗ್ಯಮೂರ್ತಿ, ಪುಟ್ಟಸ್ವಾಮಿ, ಬ್ರಾಹ್ಮಣ ಯುವ ವೇದಿಕೆಯ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್, ರಾಜಗೋಪಾಲ್ ಕಡಕೊಳ ಜಗದೀಶ್, ರಂಗನಾಥ್, ಸುಚೀಂದ್ರ, ಪ್ರಶಾಂತ್, ಅರುಣ್, ಚಕ್ರಪಾಣಿ ಭಾಗವಹಿಸಿದ್ದರು.</p>.<p>ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಮೃತಿ ಇಲಾಖೆ ವತಿಯಿಂದ ಕಲಾಮಂದಿರದ ಮನೆಯಂಗಳದಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಜ್ಯೋತಿ ಪುಷ್ಪಾರ್ಚನೆ ಮಾಡಿದರು.</p>.<p>ಶಂಕರಾಚಾರ್ಯರ ಮೂರ್ತಿ, ಭಾವಚಿತ್ರಗಳನ್ನು ನಗರದ ಬೀದಿಗಳಲ್ಲಿ ಮಂಗಳವಾದ್ಯ, ಭಜನೆ, ವೇದ ಘೋಷಗಳೊಂದಿಗೆ ಮೆರವಣಿಗೆ ನಡೆಸಲಾಯಿತು.</p>.<p>ಅಭಿನವ ಶಂಕರಾಲಯ ವತಿಯಿಂದ ಖಿಲ್ಲೆ ಮೊಹಲ್ಲಾದ ಶೃಂಗೇರಿ ಶಂಕರಮಠದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಯಿತು. ಸಂಜೆ ಶಂಕರಾಚಾರ್ಯರ ರಥೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಎಸ್.ಎ.ರಾಮದಾಸ್, ಕಾಂಗ್ರೆಸ್ ಮುಖಂಡ ಸಿ.ಎಚ್.ವಿಜಯಶಂಕರ್, ಡಿ.ಟಿ.ಪ್ರಕಾಶ್, ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್ ಪಾಲ್ಗೊಂಡಿದ್ದರು.</p>.<p>ವಿಪ್ರ ಜಾಗೃತಿ ವೇದಿಕೆ ವತಿಯಿಂದ ವಿದ್ಯಾರಣ್ಯಪುರಂನಲ್ಲಿರುವ ಅವನಿ ಶೃಂಗೇರಿ ಶಂಕರಮಠದಲ್ಲಿ ಸಂಜೆ ಆದಿಶಂಕರಾಚಾರ್ಯರ ಭವ್ಯ ಮೆರವಣಿಗೆ ನಡೆಯಿತು. ವಿಪ್ರ ಮುಖಂಡರು ಭಾಗವಹಿಸಿದ್ದರು. ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯ, ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿತ್ತು.</p>.<p>ಯಾಜ್ಞವಲ್ಕ್ಯ ಶುಕ್ಲ ಯಜುರ್ವೇದ ಮಹಾಸಭಾ ವತಿಯಿಂದ ಬೋಗಾದಿ 2ನೇ ಹಂತದ ಆಯಿಷ್ ಕಾಲೊನಿಯಲ್ಲಿ ಶಂಕರ ಜಯಂತಿ ಆಚರಿಸಲಾಯಿತು.</p>.<p>ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿಪೂರ್ವ ಕಾಲೇಜು ವತಿಯಿಂದ ಜಯಂತಿ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಂಸ್ಕೃತ ಉಪನ್ಯಾಸಕ ವಿದ್ವಾನ್ ರಾಘವೇಂದ್ರ ಭಟ್ ಅವರು ಶಂಕರರ ಜೀವನ ಚರಿತ್ರೆ ತಿಳಿಸಿದರು. ಪ್ರಾಂಶುಪಾಲ ಟಿ.ಎಸ್.ಶ್ರೀಕಂಠಶರ್ಮ, ಜಂಟಿ ಕಾರ್ಯದರ್ಶಿ ಟಿ.ಎಸ್.ಸತ್ಯನಾರಾಯಣರಾವ್ ಇದ್ದರು.</p>.<p>ಶಂಕರ ಜಯಂತಿ ಸಭಾದ ವತಿಯಿಂದ ಸರಸ್ವತಿಪುರಂನ ಸಮುದಾಯ ಭವನದಲ್ಲಿ ಶಂಕರ ಭಜನಾ ಮಂಡಳಿಯ ಸದಸ್ಯರು ಭಕ್ತಿಗೀತೆಗಳ ಗಾಯನವನ್ನು ಪ್ರಸ್ತುತಪಡಿಸಿದರು. ಸಂಜೆ ವಿದ್ವಾನ್ ಹರೀಶ್ ಪಾಂಡವ್ ಅವರು ಸ್ಯಾಕ್ಸೋಫೋನ್ ವಾದನ ನುಡಿಸಿದರು.</p>.<p>ವಿವೇಕಾನಂದನಗರ ಬ್ರಾಹ್ಮಣ ಮಹಾಸಭಾವು ಶಂಕರ ಜಯಂತಿ, ರಾಮಾನುಜಾಚಾರ್ಯರ ಜಯಂತಿ ಆಚರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>