<p><strong>ಮೈಸೂರು:</strong> ‘ಯುವನಿಧಿ ಯೋಜನೆಗೆ ರಾಜ್ಯದ 2.77 ಲಕ್ಷ ಜನ ನೋಂದಾಯಿಸಿಕೊಂಡಿದ್ದರೂ ಕೌಶಲ ತರಬೇತಿಗೆ ಮಾತ್ರ 1500 ಮಂದಿ ಹಾಜರಾಗಿದ್ದಾರೆ. ಹಣ ಪಡೆಯುವವರೆಲ್ಲ ತರಬೇತಿಗೆ ಬರುತ್ತಿಲ್ಲ’ ಎಂದು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ ವಿಷಾದಿಸಿದರು. </p>.ಬಂಗಾರಪೇಟೆ | 'ಯುವನಿಧಿ: ನಿರುದ್ಯೋಗಿಗಳ ನಿರಾಸಕ್ತಿ'.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು ‘ ಕೌಶಲ ತರಬೇತಿ ಪಡೆದರೆ ಸರ್ಕಾರವು ಪದವೀಧರರಿಗೆ ನೀಡುವ ಹಣ ಯುವನಿಧಿ ಹಣ ಬಂದ್ ಆಗುತ್ತದೆ ಎಂಬ ತಪ್ಪುಕಲ್ಪನೆ ಬಹುತೇಕರಲ್ಲಿ ಇದೆ. ಈ ಬಗ್ಗೆ ಯಾರೂ ಆತಂಕ ಪಡೆಬೇಕಾದ ಅಗತ್ಯ ಇಲ್ಲ. ನೋಂದಣಿ ಆದವರಿಗೆ ಮುಂದಿನ 2 ವರ್ಷ ಅಥವಾ ಉದ್ಯೋಗ ಸಿಗುವವರೆಗೂ ಹಣ ಸಿಗಲಿದೆ’ ಎಂದು ಸ್ಪಷ್ಟನೆ ನೀಡಿದರು. </p><p>‘ರಾಜ್ಯ ಸರ್ಕಾರ ಯುವನಿಧಿ ಪ್ಲಸ್ ಯೋಜನೆ ಜಾರಿಗೆ ಬಂದಿದ್ದು, ಈ ವರ್ಷ 25 ಸಾವಿರ ಜನರಿಗೆ ಕೌಶಲ ತರಬೇತಿ ಗುರಿ ಇದೆ. ರಾಜ್ಯದ ಕಲಬುರಗಿ, ಕೊಪ್ಪಳ ಹಾಗೂ ಮೈಸೂರು ಜಿಲ್ಲೆಯ ವರುಣದಲ್ಲಿ ಬಹುಕೌಶಲ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದರು. </p>.ಯುವನಿಧಿ: ರಾಜ್ಯಕ್ಕೆ ರಾಯಚೂರು ಜಿಲ್ಲೆ 3ನೇ ಸ್ಥಾನ.<h2>ಪಿಪಿಪಿ ಮಾದರಿ: </h2><p>‘ರಾಜ್ಯದಲ್ಲಿ ಪಿಪಿಪಿ ಮಾದರಿಯಲ್ಲಿ 6 ಹೊಸ ಮೆಡಿಕಲ್ ಕಾಲೇಜುಗಳನ್ನು ಸರ್ಕಾರ ಸ್ಥಾಪಿಸಲಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವರೂ ಆದ ಶರಣಪ್ರಕಾಶ ಪಾಟೀಲ ಮಾಹಿತಿ ನೀಡಿದರು. </p><p>‘ಪ್ರಸ್ತುತ ರಾಜ್ಯದಲ್ಲಿ 22 ಸರ್ಕಾರಿ ಮೆಡಿಕಲ್ ಕಾಲೇಜುಗಳಿದ್ದು, 3900 ಮೆರಿಟ್ ಸೀಟುಗಳು ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿಯೂ ರಾಜ್ಯ ಕೋಟಾ ಅಡಿಯಲ್ಲೇ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಪ್ರಯತ್ನಿಸುತ್ತಿದ್ದು, ಇದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೀಟು ಸಿಗಲಿವೆ’ ಎಂದರು</p>.ಅಳ್ನಾವರ: ಪದವಿ ವಿದ್ಯಾರ್ಥಿಗಳಿಗೆ ‘ಯುವನಿಧಿ’ ಅರಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಯುವನಿಧಿ ಯೋಜನೆಗೆ ರಾಜ್ಯದ 2.77 ಲಕ್ಷ ಜನ ನೋಂದಾಯಿಸಿಕೊಂಡಿದ್ದರೂ ಕೌಶಲ ತರಬೇತಿಗೆ ಮಾತ್ರ 1500 ಮಂದಿ ಹಾಜರಾಗಿದ್ದಾರೆ. ಹಣ ಪಡೆಯುವವರೆಲ್ಲ ತರಬೇತಿಗೆ ಬರುತ್ತಿಲ್ಲ’ ಎಂದು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ ವಿಷಾದಿಸಿದರು. </p>.ಬಂಗಾರಪೇಟೆ | 'ಯುವನಿಧಿ: ನಿರುದ್ಯೋಗಿಗಳ ನಿರಾಸಕ್ತಿ'.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು ‘ ಕೌಶಲ ತರಬೇತಿ ಪಡೆದರೆ ಸರ್ಕಾರವು ಪದವೀಧರರಿಗೆ ನೀಡುವ ಹಣ ಯುವನಿಧಿ ಹಣ ಬಂದ್ ಆಗುತ್ತದೆ ಎಂಬ ತಪ್ಪುಕಲ್ಪನೆ ಬಹುತೇಕರಲ್ಲಿ ಇದೆ. ಈ ಬಗ್ಗೆ ಯಾರೂ ಆತಂಕ ಪಡೆಬೇಕಾದ ಅಗತ್ಯ ಇಲ್ಲ. ನೋಂದಣಿ ಆದವರಿಗೆ ಮುಂದಿನ 2 ವರ್ಷ ಅಥವಾ ಉದ್ಯೋಗ ಸಿಗುವವರೆಗೂ ಹಣ ಸಿಗಲಿದೆ’ ಎಂದು ಸ್ಪಷ್ಟನೆ ನೀಡಿದರು. </p><p>‘ರಾಜ್ಯ ಸರ್ಕಾರ ಯುವನಿಧಿ ಪ್ಲಸ್ ಯೋಜನೆ ಜಾರಿಗೆ ಬಂದಿದ್ದು, ಈ ವರ್ಷ 25 ಸಾವಿರ ಜನರಿಗೆ ಕೌಶಲ ತರಬೇತಿ ಗುರಿ ಇದೆ. ರಾಜ್ಯದ ಕಲಬುರಗಿ, ಕೊಪ್ಪಳ ಹಾಗೂ ಮೈಸೂರು ಜಿಲ್ಲೆಯ ವರುಣದಲ್ಲಿ ಬಹುಕೌಶಲ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದರು. </p>.ಯುವನಿಧಿ: ರಾಜ್ಯಕ್ಕೆ ರಾಯಚೂರು ಜಿಲ್ಲೆ 3ನೇ ಸ್ಥಾನ.<h2>ಪಿಪಿಪಿ ಮಾದರಿ: </h2><p>‘ರಾಜ್ಯದಲ್ಲಿ ಪಿಪಿಪಿ ಮಾದರಿಯಲ್ಲಿ 6 ಹೊಸ ಮೆಡಿಕಲ್ ಕಾಲೇಜುಗಳನ್ನು ಸರ್ಕಾರ ಸ್ಥಾಪಿಸಲಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವರೂ ಆದ ಶರಣಪ್ರಕಾಶ ಪಾಟೀಲ ಮಾಹಿತಿ ನೀಡಿದರು. </p><p>‘ಪ್ರಸ್ತುತ ರಾಜ್ಯದಲ್ಲಿ 22 ಸರ್ಕಾರಿ ಮೆಡಿಕಲ್ ಕಾಲೇಜುಗಳಿದ್ದು, 3900 ಮೆರಿಟ್ ಸೀಟುಗಳು ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿಯೂ ರಾಜ್ಯ ಕೋಟಾ ಅಡಿಯಲ್ಲೇ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಪ್ರಯತ್ನಿಸುತ್ತಿದ್ದು, ಇದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೀಟು ಸಿಗಲಿವೆ’ ಎಂದರು</p>.ಅಳ್ನಾವರ: ಪದವಿ ವಿದ್ಯಾರ್ಥಿಗಳಿಗೆ ‘ಯುವನಿಧಿ’ ಅರಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>