<p><strong>ಮೈಸೂರು</strong>: ‘ಸೀಗೆಕಾಯಿ ಉತ್ಪನ್ನಗಳನ್ನು ತಯಾರಿಸಿ ಪ್ಯಾಕಿಂಗ್ ಮಾಡಿ, ಮಾರಾಟಕ್ಕೆ ರೈತ ಮಹಿಳೆಯರು ಮುಂದಾಗಬೇಕು’ ಎಂದು ಜಾಗೃತಕೋಶದ ಉಪ ಕೃಷಿ ನಿರ್ದೇಶಕಿ ಮಮತಾ ಎಚ್.ಎನ್. ಸಲಹೆ ನೀಡಿದರು.</p>.<p>ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಎನ್.ಆರ್.ಎಲ್.ಎಂ. ಸಹಯೋಗದಲ್ಲಿ ರಾಜ್ಯವಲಯ ಯೋಜನೆಯಡಿ ಈಚೆಗೆ ಪಿರಿಯಾಪಟ್ಟಣ ತಾಲ್ಲೂಕಿನ ರೈತ ಮಹಿಳೆಯರಿಗೆ ಸೀಗೆಕಾಯಿ ಉತ್ಪನ್ನಗಳು, ಅರಣ್ಯ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಮೌಲ್ಯವರ್ಧನೆ ಕುರಿತು ಏರ್ಪಡಿಸಿದ್ದ ಮೂರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರಸ್ತುತ ಸೀಗೆಪುಡಿ ಉತ್ಪನ್ನಗಳನ್ನು ತಯಾರಿಸುವ ಮಹಿಳೆಯರು ಇಲ್ಲ. ಈ ಅವಕಾಶ ಬಳಸಿಕೊಂಡು ಮಾರುಕಟ್ಟೆ ಸೃಷ್ಟಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಚಾಮರಾಜನಗರ ಜಿಲ್ಲೆಯ ರೈತ ಮುಖಂಡ ಹೊನ್ನೂರು ಪ್ರಕಾಶ್, ‘ಸಿರಿಧಾನ್ಯ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ. ತರಕಾರಿ, ಹಣ್ಣು ಮತ್ತು ಬೆಳೆಗಳನ್ನು ನಮ್ಮ ಜಮೀನಿನಲ್ಲಿಯೇ ಬೆಳೆದು ತಿನ್ನುವುದರಿಂದ ರೈತರು ಸ್ವಾವಲಂಬಿಗಳಾಗಬಹುದು’ ಎಂದು ಹೇಳಿದರು.</p>.<p>ಸಂಪನ್ಮೂಲ ವ್ಯಕ್ತಿ ಅಭಿಜಿತ್ ‘ಸೀಗೆಪುಡಿ, ಅಂಟವಾಳ ಕಾಯಿ, ಇತರ ಸೊಪ್ಪು, ಗಿಡಮರಗಳ ತೊಗಟೆ, ಎಲೆಗಳು, ಬೇರುಗಳು ಮತ್ತು ಹುತ್ತದ ಮಣ್ಣಿನಿಂದ ಶಾಂಪು, ಸೋಪು ಮತ್ತು ಹಲ್ಲು ಪುಡಿ ತಯಾರಿಕೆ ಕುರಿತು ಮಾಹಿತಿ ನೀಡಿದರು.</p>.<p>ಸಾವಯವ ಕೃಷಿ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕಿ ಭಾಗೀರಥಿ, ಸಹಾಯಕ ಪ್ರಾಧ್ಯಾಪಕ ಗಣೇಶ್ಪ್ರಸಾದ್, ಮಂಡ್ಯ ವಿ.ಸಿ. ಫಾರಂನ ಸಹಾಯಕ ಪ್ರಾಧ್ಯಾಪಕ ಮಹದೇವು ಜೆ., ಹನುಮನಹಳ್ಳಿ ಪ್ರಗತಿಪರ ರೈತ ಮಹಿಳೆ ಇಂದ್ರಮ್ಮ ಮಾತನಾಡಿದರು.</p>.<p>ಕುಶಾಲನಗರ ತಾಲ್ಲೂಕು ಬಸವನಹಳ್ಳಿಯ ಯಶವಂತ್ ಅವರ ಜಮೀನಿನಲ್ಲಿ ಕ್ಷೇತ್ರ ಭೇಟಿ ಕಾರ್ಯಕ್ರಮ ನಡೆಯಿತು.</p>.<p>ಸಹಾಯಕ ಕೃಷಿ ನಿರ್ದೇಶಕಿ ಮಧುಲತಾ ಎಚ್.ಬಿ., ತರಬೇತಿ ಸಂಯೋಜಕಿ ಗೌರವ್ವ ಅಗಸೀಬಾಗಿಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸೀಗೆಕಾಯಿ ಉತ್ಪನ್ನಗಳನ್ನು ತಯಾರಿಸಿ ಪ್ಯಾಕಿಂಗ್ ಮಾಡಿ, ಮಾರಾಟಕ್ಕೆ ರೈತ ಮಹಿಳೆಯರು ಮುಂದಾಗಬೇಕು’ ಎಂದು ಜಾಗೃತಕೋಶದ ಉಪ ಕೃಷಿ ನಿರ್ದೇಶಕಿ ಮಮತಾ ಎಚ್.ಎನ್. ಸಲಹೆ ನೀಡಿದರು.</p>.<p>ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಎನ್.ಆರ್.ಎಲ್.ಎಂ. ಸಹಯೋಗದಲ್ಲಿ ರಾಜ್ಯವಲಯ ಯೋಜನೆಯಡಿ ಈಚೆಗೆ ಪಿರಿಯಾಪಟ್ಟಣ ತಾಲ್ಲೂಕಿನ ರೈತ ಮಹಿಳೆಯರಿಗೆ ಸೀಗೆಕಾಯಿ ಉತ್ಪನ್ನಗಳು, ಅರಣ್ಯ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಮೌಲ್ಯವರ್ಧನೆ ಕುರಿತು ಏರ್ಪಡಿಸಿದ್ದ ಮೂರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರಸ್ತುತ ಸೀಗೆಪುಡಿ ಉತ್ಪನ್ನಗಳನ್ನು ತಯಾರಿಸುವ ಮಹಿಳೆಯರು ಇಲ್ಲ. ಈ ಅವಕಾಶ ಬಳಸಿಕೊಂಡು ಮಾರುಕಟ್ಟೆ ಸೃಷ್ಟಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಚಾಮರಾಜನಗರ ಜಿಲ್ಲೆಯ ರೈತ ಮುಖಂಡ ಹೊನ್ನೂರು ಪ್ರಕಾಶ್, ‘ಸಿರಿಧಾನ್ಯ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ. ತರಕಾರಿ, ಹಣ್ಣು ಮತ್ತು ಬೆಳೆಗಳನ್ನು ನಮ್ಮ ಜಮೀನಿನಲ್ಲಿಯೇ ಬೆಳೆದು ತಿನ್ನುವುದರಿಂದ ರೈತರು ಸ್ವಾವಲಂಬಿಗಳಾಗಬಹುದು’ ಎಂದು ಹೇಳಿದರು.</p>.<p>ಸಂಪನ್ಮೂಲ ವ್ಯಕ್ತಿ ಅಭಿಜಿತ್ ‘ಸೀಗೆಪುಡಿ, ಅಂಟವಾಳ ಕಾಯಿ, ಇತರ ಸೊಪ್ಪು, ಗಿಡಮರಗಳ ತೊಗಟೆ, ಎಲೆಗಳು, ಬೇರುಗಳು ಮತ್ತು ಹುತ್ತದ ಮಣ್ಣಿನಿಂದ ಶಾಂಪು, ಸೋಪು ಮತ್ತು ಹಲ್ಲು ಪುಡಿ ತಯಾರಿಕೆ ಕುರಿತು ಮಾಹಿತಿ ನೀಡಿದರು.</p>.<p>ಸಾವಯವ ಕೃಷಿ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕಿ ಭಾಗೀರಥಿ, ಸಹಾಯಕ ಪ್ರಾಧ್ಯಾಪಕ ಗಣೇಶ್ಪ್ರಸಾದ್, ಮಂಡ್ಯ ವಿ.ಸಿ. ಫಾರಂನ ಸಹಾಯಕ ಪ್ರಾಧ್ಯಾಪಕ ಮಹದೇವು ಜೆ., ಹನುಮನಹಳ್ಳಿ ಪ್ರಗತಿಪರ ರೈತ ಮಹಿಳೆ ಇಂದ್ರಮ್ಮ ಮಾತನಾಡಿದರು.</p>.<p>ಕುಶಾಲನಗರ ತಾಲ್ಲೂಕು ಬಸವನಹಳ್ಳಿಯ ಯಶವಂತ್ ಅವರ ಜಮೀನಿನಲ್ಲಿ ಕ್ಷೇತ್ರ ಭೇಟಿ ಕಾರ್ಯಕ್ರಮ ನಡೆಯಿತು.</p>.<p>ಸಹಾಯಕ ಕೃಷಿ ನಿರ್ದೇಶಕಿ ಮಧುಲತಾ ಎಚ್.ಬಿ., ತರಬೇತಿ ಸಂಯೋಜಕಿ ಗೌರವ್ವ ಅಗಸೀಬಾಗಿಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>