ಮೈಸೂರು: ಅಯೋಧ್ಯೆಯ ರಾಮಜನ್ಮ ಸ್ಥಳದಿಂದ ಬಂದಿರುವ ಮಂತ್ರಾಕ್ಷತೆಯನ್ನು ಮಾಜಿ ಮೇಯರ್ ಶಿವಕುಮಾರ್ ಸಾರ್ವಜನಿಕರಿಗೆ ಗುರುವಾರ ವಿತರಿಸಿದರು.
ಕುವೆಂಪುನಗರದ ನವಿಲು ರಸ್ತೆ ಸೇರಿದಂತೆ ಸುತ್ತಮುತ್ತಲಿನ ನಿವಾಸಿಗಳ ಮನೆಗೆ ಖುದ್ದಾಗಿ ತೆರಳಿ ಮನೆಯ ಎಲ್ಲ ಸದಸ್ಯರಿಗೂ ಮಂತ್ರಾಕ್ಷತೆ ವಿತರಿಸಿ ಶುಭ ಕೋರಿದರು.
ಈ ವೇಳೆ ಮಾತನಾಡಿ, ‘ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಇದು ದೇಶದ ಪಾಲಿಗೆ ಸುದಿನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಇಂತಹ ಮಹತ್ಕಾರ್ಯ ನಡೆಯುತ್ತಿರುವುದು ಎಲ್ಲರ ಸುದೈವ. ಇಂತಹ ಹೊಸತನವನ್ನು ಬಿಜೆಪಿಯಿಂದ ಮಾತ್ರ ನಿರೀಕ್ಷಿಸಬಹುದು’ ಎಂದು ಹೇಳಿದರು.