<p><strong>ಮೈಸೂರು:</strong> ‘ಮೈಸೂರು ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಸಂಶೋಧನೆ ನಡೆಸಲು ಮಾರ್ಗದರ್ಶಕರ ಕೊರತೆಯಾಗಿದ್ದು, ಹೊಸದಾಗಿ ಪ್ರವೇಶ ಪಡೆಯುವವರಿಗೆ ತೊಡಕಾಗಿದೆ’ ಎಂದು ಆರೋಪಿಸಿ ಸಂಶೋಧನಾ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಕ್ರಾಫರ್ಡ್ ಭವನ ಹಾಗೂ ಮಾನಸಗಂಗೋತ್ರಿ ಕ್ಲಾಕ್ ಟವರ್ ಎದುರು ಜಮಾಯಿಸಿದ ವಿಶ್ವವಿದ್ಯಾಲಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪುರುಷೋತ್ತಮ್ ಮಾತನಾಡಿ, ‘ಪ್ರಾಧ್ಯಾಪಕರ ಕೊರತೆ ಕಾರಣ ಕೆ-ಸೆಟ್, ಯುಜಿಸಿ ಎನ್ಇಟಿ, ಜೆಆರ್ಎಫ್ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯದಲ್ಲಿ ಪಿಎಚ್.ಡಿ ಮಾಡಲು ಅವಕಾಶ ಇಲ್ಲದಂತಾಗಿದೆ. ಹೀಗಾಗಿ ಈಗಿರುವ ಕಾಯಂ ಪ್ರಾಧ್ಯಾಪಕರ ಬಳಿಯೇ ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ಪಿಎಚ್.ಡಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ಸೀಟುಗಳನ್ನು ನೀಡಿ ಸಂಶೋಧನೆ ಮಾಡಲು ಅವಕಾಶ ನೀಡಬೇಕು. ಮಾನವೀಯ ಅಧ್ಯಯನ ವಿಭಾಗಗಳಲ್ಲಿ ಮಾರ್ಗದರ್ಶಕರ ಕೊರತೆ ಇರುವುದರಿಂದ, ಯುಜಿಸಿ ಮಾರ್ಗಸೂಚಿ ಅನ್ವಯ ಕ್ರಮವಹಿಸಬೇಕು. ಇತರ ವಿ.ವಿ ಅಧ್ಯಾಪಕರನ್ನು ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ನಿಯಮದಂತೆ ಕರೆಸಿಕೊಳ್ಳಬೇಕು’ ಎಂದರು.</p>.<p>‘ಆರ್ಥಿಕ ಹೊರೆ ಆಗದು. ಶೈಕ್ಷಣಿಕ ಪ್ರಗತಿ ದೃಷ್ಟಿಯಿಂದ ಸಹ ಪ್ರಾಧ್ಯಾಪಕರಿಗೆ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ನೀಡಬೇಕು’ ಎಂದು ಕೋರಿದರು.</p>.<p>ಸಂಶೋಧನಾ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವ ಪ್ರಸಾದ್, ಉಪಾಧ್ಯಕ್ಷ ಮರಳಿ ಮಹೇಶ್, ರೋಹನ್, ರೋಜಾ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮೈಸೂರು ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಸಂಶೋಧನೆ ನಡೆಸಲು ಮಾರ್ಗದರ್ಶಕರ ಕೊರತೆಯಾಗಿದ್ದು, ಹೊಸದಾಗಿ ಪ್ರವೇಶ ಪಡೆಯುವವರಿಗೆ ತೊಡಕಾಗಿದೆ’ ಎಂದು ಆರೋಪಿಸಿ ಸಂಶೋಧನಾ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಕ್ರಾಫರ್ಡ್ ಭವನ ಹಾಗೂ ಮಾನಸಗಂಗೋತ್ರಿ ಕ್ಲಾಕ್ ಟವರ್ ಎದುರು ಜಮಾಯಿಸಿದ ವಿಶ್ವವಿದ್ಯಾಲಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪುರುಷೋತ್ತಮ್ ಮಾತನಾಡಿ, ‘ಪ್ರಾಧ್ಯಾಪಕರ ಕೊರತೆ ಕಾರಣ ಕೆ-ಸೆಟ್, ಯುಜಿಸಿ ಎನ್ಇಟಿ, ಜೆಆರ್ಎಫ್ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯದಲ್ಲಿ ಪಿಎಚ್.ಡಿ ಮಾಡಲು ಅವಕಾಶ ಇಲ್ಲದಂತಾಗಿದೆ. ಹೀಗಾಗಿ ಈಗಿರುವ ಕಾಯಂ ಪ್ರಾಧ್ಯಾಪಕರ ಬಳಿಯೇ ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ಪಿಎಚ್.ಡಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ಸೀಟುಗಳನ್ನು ನೀಡಿ ಸಂಶೋಧನೆ ಮಾಡಲು ಅವಕಾಶ ನೀಡಬೇಕು. ಮಾನವೀಯ ಅಧ್ಯಯನ ವಿಭಾಗಗಳಲ್ಲಿ ಮಾರ್ಗದರ್ಶಕರ ಕೊರತೆ ಇರುವುದರಿಂದ, ಯುಜಿಸಿ ಮಾರ್ಗಸೂಚಿ ಅನ್ವಯ ಕ್ರಮವಹಿಸಬೇಕು. ಇತರ ವಿ.ವಿ ಅಧ್ಯಾಪಕರನ್ನು ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ನಿಯಮದಂತೆ ಕರೆಸಿಕೊಳ್ಳಬೇಕು’ ಎಂದರು.</p>.<p>‘ಆರ್ಥಿಕ ಹೊರೆ ಆಗದು. ಶೈಕ್ಷಣಿಕ ಪ್ರಗತಿ ದೃಷ್ಟಿಯಿಂದ ಸಹ ಪ್ರಾಧ್ಯಾಪಕರಿಗೆ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ನೀಡಬೇಕು’ ಎಂದು ಕೋರಿದರು.</p>.<p>ಸಂಶೋಧನಾ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವ ಪ್ರಸಾದ್, ಉಪಾಧ್ಯಕ್ಷ ಮರಳಿ ಮಹೇಶ್, ರೋಹನ್, ರೋಜಾ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>