ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಮಾಧ್ಯಮದೊಂದಿಗೆ ಗುರುವಾರ ಮಾತನಾಡಿದ ಅವರು, ‘ದೂರು ದಾಖಲಾಗಿರುವುದರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ಒಂದಲ್ಲ, ಎರಡು ದಿನ ನಿಧಾನವಾಗಬಹುದು. ಆತುರ ಬೇಕಿಲ್ಲ. ಪ್ರಕರಣ ಮುಚ್ಚಿ ಹಾಕಲಾಗುವುದಿಲ್ಲ; ಅಂತಹ ಪ್ರಯತ್ನವೂ ನಡೆದಿಲ್ಲ ಎಂದು ಸರ್ಕಾರವೂ ಹೇಳಿದೆ. ತನಿಖೆ ನಡೆಯಲೇಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಲೇಬೇಕು’ ಎಂದು ತಿಳಿಸಿದ್ದಾರೆ.