ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಚುನಾವಣೆಯಲ್ಲಿ ಬಾದಾಮಿಯಲ್ಲಿ ಅಲ್ಪ ಮತಗಳಿಂದ ಪ್ರಯಾಸದ ಗೆಲುವು ಪಡೆದಿದ್ದರು. ಚಾಮುಂಡೇಶ್ವರಿಯಲ್ಲಿ 35ಸಾವಿರ ಮತಗಳಿಂದ ಹೀನಾಯ ಸೋಲು ಕಂಡರು. ಮಾಜಿ ಮುಖ್ಯಮಂತ್ರಿಗೆ ತವರಲ್ಲಿ ಸ್ಪರ್ಧಿಸಲು ಕ್ಷೇತ್ರವಿಲ್ಲವೇ, ಜಿಲ್ಲೆಯ ಜನರ ಮೇಲೆ ವಿಶ್ವಾಸವಿಲ್ಲವೇ, ಚಾಮುಂಡೇಶ್ವರಿ ಅಥವಾ ವರುಣಾದಲ್ಲಿ ಗೆಲ್ಲಲಾಗೋಲ್ಲವೇ?’ ಎಂದು ವ್ಯಂಗ್ಯವಾಗಿ ಕೇಳಿದರು.