ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಪಲಾಯನ ಮಾಡಿದ್ದೇಕೆ?: ವಿ. ಶ್ರೀನಿವಾಸ ಪ್ರಸಾದ್

Last Updated 28 ಜನವರಿ 2023, 14:54 IST
ಅಕ್ಷರ ಗಾತ್ರ

ನಂಜನಗೂಡು (ಮೈಸೂರು ಜಿಲ್ಲೆ): ‘ಮುಂದಿನ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎನ್ನುವ ಸಿದ್ದರಾಮಯ್ಯ ಬೇರೆಡೆಗೆ ಪಲಾಯನ ಮಾಡಿದ್ದೇಕೆ’ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ಪ್ರಶ್ನಿಸಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಚುನಾವಣೆಯಲ್ಲಿ ಬಾದಾಮಿಯಲ್ಲಿ ಅಲ್ಪ ಮತಗಳಿಂದ ಪ್ರಯಾಸದ ಗೆಲುವು ಪಡೆದಿದ್ದರು. ಚಾಮುಂಡೇಶ್ವರಿಯಲ್ಲಿ 35ಸಾವಿರ ಮತಗಳಿಂದ ಹೀನಾಯ ಸೋಲು ಕಂಡರು. ಮಾಜಿ ಮುಖ್ಯಮಂತ್ರಿಗೆ ತವರಲ್ಲಿ ಸ್ಪರ್ಧಿಸಲು ಕ್ಷೇತ್ರವಿಲ್ಲವೇ, ಜಿಲ್ಲೆಯ ಜನರ ಮೇಲೆ ವಿಶ್ವಾಸವಿಲ್ಲವೇ, ಚಾಮುಂಡೇಶ್ವರಿ ಅಥವಾ ವರುಣಾದಲ್ಲಿ ಗೆಲ್ಲಲಾಗೋಲ್ಲವೇ?’ ಎಂದು ವ್ಯಂಗ್ಯವಾಗಿ ಕೇಳಿದರು.

‘‌ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಗಂಟಲು ಜೋರಾಗಿತ್ತು. ನರೇಂದ್ರ ಮೋದಿ ಪ್ರಧಾನಿ ಆಗೋಲ್ಲ, ರಾಹುಲ್ ಗಾಂಧಿ ಆಗುತ್ತಾರೆ ಎಂದು ಅರಚುತ್ತಿದ್ದರು. ಫಲಿತಾಂಶ ಏನಾಯಿತು? ಸಿದ್ದರಾಮಯ್ಯಗೆ ಸ್ವಂತ ಜಿಲ್ಲೆಯಲ್ಲಿ ಸ್ಪರ್ಧಿಸಲು ಭಯ ಕಾಡುತ್ತಿದೆ’ ಎಂದು ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT