ಪಿರಿಯಾಪಟ್ಟಣ (ಮೈಸೂರು ಜಿಲ್ಲೆ): ‘ಬಿಜೆಪಿ–ಜೆಡಿಎಸ್ ಹೊಂದಾಣಿಕೆಯು ಅನ್ನ ಹಳಸಿತ್ತು-ನಾಯಿ ಹಸಿದಿತ್ತು ಎನ್ನುವಂತಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಣಕವಾಡಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಶನಿವಾರ ಆಯೋಜಿಸಿದ್ದ ‘ಪ್ರಜಾಧ್ವನಿ–2’ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಜಾತ್ಯತೀತ ಎಂದು ಹೆಸರಿಟ್ಟುಕೊಂಡು ಬಿಜೆಪಿ ಜೊತೆ ಬೆರೆತಿರುವ ಜೆಡಿಎಸ್ಗೆ ಮಾನ– ಮರ್ಯಾದೆ ಇದೆಯೇ? ಕೇವಲ ಕುಟುಂಬದ ಹಿತಾಸಕ್ತಿಗಾಗಿ ಯಾರ ಜತೆಗೆ ಬೇಕಾದರೂ ಹೋಗಲು ಜೆಡಿಎಸ್ ಸಿದ್ಧವಾಗಿ ಬಿಡುತ್ತದೆ. ಯಾವುದೇ ಸಿದ್ದಾಂತವಿಲ್ಲ, ಜನಪರವಾದ ಬದ್ಧತೆಯೂ ಇಲ್ಲ’ ಎಂದು ಟೀಕಿಸಿದರು.