<p><strong>ಎಚ್.ಡಿ.ಕೋಟೆ</strong>: ‘ಸಾಧನಾ ಸಮಾವೇಶ ಸಮಾರಂಭದಲ್ಲಿ ನಾನು ಮಾತನಾಡುವಾಗ ಡಿ.ಕೆ.ಶಿವಕುಮಾರ್ ವೇದಿಕೆಯಲ್ಲಿ ಇರಲಿಲ್ಲ. ಹೀಗಾಗಿ, ಅವರ ಹೆಸರು ತೆಗೆದುಕೊಳ್ಳಲಿಲ್ಲ. ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ತಾಲ್ಲೂಕಿನ ಬೀಚನಹಳ್ಳಿಯಲ್ಲಿ ಕಬಿನಿ ಜಲಾಶಯಕ್ಕೆ ಭಾನುವಾರ ಬಾಗಿನ ಅರ್ಪಿಸುವುದಕ್ಕೆ ಮುನ್ನ ಸುದ್ದಿಗಾರರೊಂದಿಗೆ ಅವರು, ‘ಡಿ.ಕೆ.ಶಿವಕುಮಾರ್ ಅವರನ್ನು ಅವಮಾನಿಸುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು. </p>.<p>‘ನನ್ನ ಹಾಗೂ ಶಿವಕುಮಾರ್ ನಡುವೆ ಒಡಕು ಮೂಡಿಸಲು ಬಿಜೆಪಿಯವರು ಇಂಥ ಹೇಳಿಕೆ ನೀಡುತ್ತಾರೆ. ಅವರು ರಾಜಕೀಯ ಲಾಭ ಪಡೆಯುವ ಭ್ರಮೆಯಲ್ಲೇ ಇರುತ್ತಾರೆ’ ಎಂದರು.</p>.<p>ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ವಕೀಲರನ್ನು ಭೇಟಿಯಾಗಲು ಸಮಯ ತೆಗೆದುಕೊಂಡಿದ್ದ ತುರ್ತು ಕಾರ್ಯ ನಿಮಿತ್ತ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ತಿಳಿಸಿ ದೆಹಲಿಗೆ ಹೋಗಿದ್ದೆ. ಯಾವುದೇ ರಾಜಕೀಯದ ಕಾರಣದಿಂದ ಹೋಗಿರಲಿಲ್ಲ’ ಎಂದು ಹೇಳಿದರು. </p>.<p>ಸಿಎಂ–ಡಿಸಿಎಂ ಜೊತೆಯಲ್ಲೇ ನಿಂತು ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>ಕಾಪಿ ಮಾಡುತ್ತಾರೆ: ‘ಸರ್ಕಾರದ ಸಾಧನೆಗಳ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಅಲ್ಲದೆ, ನಮ್ಮ ಗ್ಯಾರಂಟಿ ಯೋಜನೆಗಳನ್ನೇ ಅವರು ಇತರ ರಾಜ್ಯದಲ್ಲಿ ಅನುಕರಿಸುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ</strong>: ‘ಸಾಧನಾ ಸಮಾವೇಶ ಸಮಾರಂಭದಲ್ಲಿ ನಾನು ಮಾತನಾಡುವಾಗ ಡಿ.ಕೆ.ಶಿವಕುಮಾರ್ ವೇದಿಕೆಯಲ್ಲಿ ಇರಲಿಲ್ಲ. ಹೀಗಾಗಿ, ಅವರ ಹೆಸರು ತೆಗೆದುಕೊಳ್ಳಲಿಲ್ಲ. ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ತಾಲ್ಲೂಕಿನ ಬೀಚನಹಳ್ಳಿಯಲ್ಲಿ ಕಬಿನಿ ಜಲಾಶಯಕ್ಕೆ ಭಾನುವಾರ ಬಾಗಿನ ಅರ್ಪಿಸುವುದಕ್ಕೆ ಮುನ್ನ ಸುದ್ದಿಗಾರರೊಂದಿಗೆ ಅವರು, ‘ಡಿ.ಕೆ.ಶಿವಕುಮಾರ್ ಅವರನ್ನು ಅವಮಾನಿಸುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು. </p>.<p>‘ನನ್ನ ಹಾಗೂ ಶಿವಕುಮಾರ್ ನಡುವೆ ಒಡಕು ಮೂಡಿಸಲು ಬಿಜೆಪಿಯವರು ಇಂಥ ಹೇಳಿಕೆ ನೀಡುತ್ತಾರೆ. ಅವರು ರಾಜಕೀಯ ಲಾಭ ಪಡೆಯುವ ಭ್ರಮೆಯಲ್ಲೇ ಇರುತ್ತಾರೆ’ ಎಂದರು.</p>.<p>ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ವಕೀಲರನ್ನು ಭೇಟಿಯಾಗಲು ಸಮಯ ತೆಗೆದುಕೊಂಡಿದ್ದ ತುರ್ತು ಕಾರ್ಯ ನಿಮಿತ್ತ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ತಿಳಿಸಿ ದೆಹಲಿಗೆ ಹೋಗಿದ್ದೆ. ಯಾವುದೇ ರಾಜಕೀಯದ ಕಾರಣದಿಂದ ಹೋಗಿರಲಿಲ್ಲ’ ಎಂದು ಹೇಳಿದರು. </p>.<p>ಸಿಎಂ–ಡಿಸಿಎಂ ಜೊತೆಯಲ್ಲೇ ನಿಂತು ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>ಕಾಪಿ ಮಾಡುತ್ತಾರೆ: ‘ಸರ್ಕಾರದ ಸಾಧನೆಗಳ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಅಲ್ಲದೆ, ನಮ್ಮ ಗ್ಯಾರಂಟಿ ಯೋಜನೆಗಳನ್ನೇ ಅವರು ಇತರ ರಾಜ್ಯದಲ್ಲಿ ಅನುಕರಿಸುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>