<p><strong>ಮೈಸೂರು:</strong> ‘ಯಾವುದೇ ಯಾತ್ರೆಗಳಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. </p><p>ಸ್ವಗ್ರಾಮವಾದ ಮೈಸೂರು ತಾಲ್ಲೂಕಿನ ಸಿದ್ದರಾಮನಹುಂಡಿಯಲ್ಲಿ ಸೋಮವಾರ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು.</p><p>ಬಿಜೆಪಿಯವರ ಧರ್ಮಸ್ಥಳ ಯಾತ್ರೆ ಹಾಗೂ ಮೈಸೂರು ಚಲೋ ಯಾತ್ರೆಗಳ ಕುರಿತು ಪ್ರತಿಕ್ರಿಯಿಸಿ ‘ಬಿಜೆಪಿಯವರು ಈ ಯಾತ್ರೆಗಳಿಂದ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ’ ಎಂದು ಟೀಕಿಸಿದರು.</p><p>‘ಯಾತ್ರೆ ಮಾಡುವುದರಿಂದ ಹಿಂದುತ್ವ ಗಟ್ಟಿಯಾಗುತ್ತದೆ, ಹಿಂದೂಗಳೆಲ್ಲ ಒಟ್ಟಾಗುತ್ತಾರೆ ಎಂದು ಬಿಜೆಪಿಯವರು ತಿಳಿದಿದ್ದಾರೆ. ನಾನೂ ಕೂಡ ಹಿಂದೂವೇ. ನಮ್ಮೂರಿನಲ್ಲಿ ರಾಮಮಂದಿರ ಕಟ್ಟಿದ್ದೇವೆ. ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು’ ಎಂದರು.</p><p>‘ಬಿಜೆಪಿಯವರು ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಬಾನು ಮುಷ್ತಾಕ್ ಅವರಿಗೆ ಬುಕರ್ ಪ್ರಶಸ್ತಿ ದೊರಕಿದ್ದು, ಎಷ್ಟು ಜನಕ್ಕೆ ಈ ಪ್ರಶಸ್ತಿ ಲಭಿಸಿದೆ’ ಎಂದು ಪ್ರಶ್ನಿಸಿದ ಅವರು, ‘ದಸರಾ ಮೇಲೆ ರಾಜಕಾರಣ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದರು. </p><p>‘ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯೇ ಇರಬಹುದು. ದಸರಾ ಹಬ್ಬ ನಾಡ ಹಬ್ಬವಲ್ಲವೇ? ನಾಡ ಹಬ್ಬ ಎಂದರೆ ಎಲ್ಲರೂ ಸೇರಿ ಮಾಡುವುದು. ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರು, ಬೌದ್ಧರು ಸೇರಿ ಆಚರಿಸುವ ಹಬ್ಬ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಯಾವುದೇ ಯಾತ್ರೆಗಳಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. </p><p>ಸ್ವಗ್ರಾಮವಾದ ಮೈಸೂರು ತಾಲ್ಲೂಕಿನ ಸಿದ್ದರಾಮನಹುಂಡಿಯಲ್ಲಿ ಸೋಮವಾರ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು.</p><p>ಬಿಜೆಪಿಯವರ ಧರ್ಮಸ್ಥಳ ಯಾತ್ರೆ ಹಾಗೂ ಮೈಸೂರು ಚಲೋ ಯಾತ್ರೆಗಳ ಕುರಿತು ಪ್ರತಿಕ್ರಿಯಿಸಿ ‘ಬಿಜೆಪಿಯವರು ಈ ಯಾತ್ರೆಗಳಿಂದ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ’ ಎಂದು ಟೀಕಿಸಿದರು.</p><p>‘ಯಾತ್ರೆ ಮಾಡುವುದರಿಂದ ಹಿಂದುತ್ವ ಗಟ್ಟಿಯಾಗುತ್ತದೆ, ಹಿಂದೂಗಳೆಲ್ಲ ಒಟ್ಟಾಗುತ್ತಾರೆ ಎಂದು ಬಿಜೆಪಿಯವರು ತಿಳಿದಿದ್ದಾರೆ. ನಾನೂ ಕೂಡ ಹಿಂದೂವೇ. ನಮ್ಮೂರಿನಲ್ಲಿ ರಾಮಮಂದಿರ ಕಟ್ಟಿದ್ದೇವೆ. ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು’ ಎಂದರು.</p><p>‘ಬಿಜೆಪಿಯವರು ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಬಾನು ಮುಷ್ತಾಕ್ ಅವರಿಗೆ ಬುಕರ್ ಪ್ರಶಸ್ತಿ ದೊರಕಿದ್ದು, ಎಷ್ಟು ಜನಕ್ಕೆ ಈ ಪ್ರಶಸ್ತಿ ಲಭಿಸಿದೆ’ ಎಂದು ಪ್ರಶ್ನಿಸಿದ ಅವರು, ‘ದಸರಾ ಮೇಲೆ ರಾಜಕಾರಣ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದರು. </p><p>‘ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯೇ ಇರಬಹುದು. ದಸರಾ ಹಬ್ಬ ನಾಡ ಹಬ್ಬವಲ್ಲವೇ? ನಾಡ ಹಬ್ಬ ಎಂದರೆ ಎಲ್ಲರೂ ಸೇರಿ ಮಾಡುವುದು. ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರು, ಬೌದ್ಧರು ಸೇರಿ ಆಚರಿಸುವ ಹಬ್ಬ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>