<p><strong>ಮೈಸೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಆರ್ಥಿಕ ಶಕ್ತಿ ತುಂಬಿದ್ದು, ಒಳಮೀಸಲಾತಿ ಪರವಾಗಿರುವ ಸಿದ್ದರಾಮಯ್ಯ ಅವರನ್ನು ನಾವು ಬೆಂಬಲಿಸಿ ಶಕ್ತಿ ತುಂಬಬೇಕಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಹೇಳಿದರು.</p>.<p>ನಗರದ ಜಲದರ್ಶಿನಿ ಅತಿಥಿಗೃಹ ಸಭಾಂಗಣದಲ್ಲಿ ಗುರುವಾರ ನಡೆದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮಾದಿಗ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗ್ಯಾರಂಟಿ ಯೋಜನೆಗಳು ದೇಶ, ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದ್ದು, ಶಕ್ತಿ ಯೋಜನೆಯಡಿ ಮಹಿಳೆಯರು 500 ಕೋಟಿ ಬಾರಿ ಪ್ರಯಾಣ ಮಾಡಿದ್ದಾರೆ. ಧಾರ್ಮಿಕ, ಪ್ರವಾಸಿ ತಾಣಗಳಿಗೆ ತೆರಳಿ ದರ್ಶನ ಪಡೆದಿದ್ದಾರೆ. ಈ ಯೋಜನೆಯು ಹೆಣ್ಣು ಮಕ್ಕಳ ಆರ್ಥಿಕ ಅಭಿವೃದ್ಧಿಗೆ ಸಹಾಯವಾಗಿದೆ’ ಎಂದರು.</p>.<p>‘ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿ, ಜೆಡಿಎಸ್ನವರು ಉಚಿತ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತೇನೆ’ ಎಂದು ಮಹಿಳೆಯರಿಂದ ಹೇಳಿಸಲಿ‘ ಎಂದು ಸವಾಲು ಹಾಕಿದರು.</p>.<p>‘ಒಳಮೀಸಲಾತಿ ನೀಡಲು ಸಿದ್ದರಾಮಯ್ಯ ಅವರು ಸದಾ ಉತ್ಸುಕತೆಯಿಂದ ಇದ್ದು, ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ನಾಯಕರಿಂದ ಮಾದಿಗ ಸಮುದಾಯಕ್ಕೆ ನ್ಯಾಯ ಸಿಗುವುದಿಲ್ಲ’ ಎಂದು ನುಡಿದರು.</p>.<p>‘ರಾಜ್ಯದಲ್ಲಿ ಮಾದರ ಮಹಾಸಭಾ ಸದಸ್ಯತ್ವ ಆರಂಭಿಸಿದ್ದು, ತಾಲ್ಲೂಕಿನಿಂದ ಕನಿಷ್ಠ ನೂರು ಮಂದಿ ಸದಸ್ಯರನ್ನು ಮಾಡಬೇಕು. ಸರ್ಕಾರದ ಸವಲತ್ತುಗಳು ಜನಸಂಖ್ಯೆಗೆ ಅನುಗುಣವಾಗಿ ದೊರೆಯಬೇಕಾದರೆ ನಮ್ಮ ಸಂಖ್ಯೆಯನ್ನು ಅರಿಯಬೇಕು. ಸಮಾಜದಲ್ಲೂ ಒಗ್ಗಟ್ಟಿನಿಂದ ಇರಬೇಕು’ ಎಂದರು.</p>.<p>ಮಾಜಿ ಮೇಯರ್ ನಾರಾಯಣ ಮಾತನಾಡಿ, ‘ರಾಜ್ಯದಾದ್ಯಂತ ಸಾಧನಾ ಸವಾವೇಶ ಆಯೋಜಿಸಲಾಗುತ್ತಿದ್ದು, ಮೊದಲ ಹಂತದಲ್ಲಿ ಜು.19ರಂದು ಮೈಸೂರು ವಿಭಾಗದ ಸವಾವೇಶ ನಡೆಯುತ್ತಿದೆ. ಸಮುದಾಯದ ಜನರು ಹೆಚ್ಚಾಗಿ ಸೇರಬೇಕು’ ಎಂದು ಸಲಹೆ ನೀಡಿದರು.</p>.<p>ಮಾದಿಗ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಎಡತೊರೆ ನಿಂಗರಾಜು, ಚಾಮರಾಜನಗರ ಜಿಲ್ಲಾ ಆದಿಜಾಂಬವ ಮಹಾಸಭಾದ ಅಧ್ಯಕ್ಷ ಎಂ.ಶಿವಮೂರ್ತಿ, ವಿಜಯಶಂಕರ್, ರಾಮು, ಶಿವಣ್ಣ, ಪ್ರಕಾಶ್, ನಾಗರಾಜು, ರೇವಣ್ಣ, ಜಯಶಂಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಆರ್ಥಿಕ ಶಕ್ತಿ ತುಂಬಿದ್ದು, ಒಳಮೀಸಲಾತಿ ಪರವಾಗಿರುವ ಸಿದ್ದರಾಮಯ್ಯ ಅವರನ್ನು ನಾವು ಬೆಂಬಲಿಸಿ ಶಕ್ತಿ ತುಂಬಬೇಕಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಹೇಳಿದರು.</p>.<p>ನಗರದ ಜಲದರ್ಶಿನಿ ಅತಿಥಿಗೃಹ ಸಭಾಂಗಣದಲ್ಲಿ ಗುರುವಾರ ನಡೆದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮಾದಿಗ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗ್ಯಾರಂಟಿ ಯೋಜನೆಗಳು ದೇಶ, ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದ್ದು, ಶಕ್ತಿ ಯೋಜನೆಯಡಿ ಮಹಿಳೆಯರು 500 ಕೋಟಿ ಬಾರಿ ಪ್ರಯಾಣ ಮಾಡಿದ್ದಾರೆ. ಧಾರ್ಮಿಕ, ಪ್ರವಾಸಿ ತಾಣಗಳಿಗೆ ತೆರಳಿ ದರ್ಶನ ಪಡೆದಿದ್ದಾರೆ. ಈ ಯೋಜನೆಯು ಹೆಣ್ಣು ಮಕ್ಕಳ ಆರ್ಥಿಕ ಅಭಿವೃದ್ಧಿಗೆ ಸಹಾಯವಾಗಿದೆ’ ಎಂದರು.</p>.<p>‘ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿ, ಜೆಡಿಎಸ್ನವರು ಉಚಿತ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತೇನೆ’ ಎಂದು ಮಹಿಳೆಯರಿಂದ ಹೇಳಿಸಲಿ‘ ಎಂದು ಸವಾಲು ಹಾಕಿದರು.</p>.<p>‘ಒಳಮೀಸಲಾತಿ ನೀಡಲು ಸಿದ್ದರಾಮಯ್ಯ ಅವರು ಸದಾ ಉತ್ಸುಕತೆಯಿಂದ ಇದ್ದು, ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ನಾಯಕರಿಂದ ಮಾದಿಗ ಸಮುದಾಯಕ್ಕೆ ನ್ಯಾಯ ಸಿಗುವುದಿಲ್ಲ’ ಎಂದು ನುಡಿದರು.</p>.<p>‘ರಾಜ್ಯದಲ್ಲಿ ಮಾದರ ಮಹಾಸಭಾ ಸದಸ್ಯತ್ವ ಆರಂಭಿಸಿದ್ದು, ತಾಲ್ಲೂಕಿನಿಂದ ಕನಿಷ್ಠ ನೂರು ಮಂದಿ ಸದಸ್ಯರನ್ನು ಮಾಡಬೇಕು. ಸರ್ಕಾರದ ಸವಲತ್ತುಗಳು ಜನಸಂಖ್ಯೆಗೆ ಅನುಗುಣವಾಗಿ ದೊರೆಯಬೇಕಾದರೆ ನಮ್ಮ ಸಂಖ್ಯೆಯನ್ನು ಅರಿಯಬೇಕು. ಸಮಾಜದಲ್ಲೂ ಒಗ್ಗಟ್ಟಿನಿಂದ ಇರಬೇಕು’ ಎಂದರು.</p>.<p>ಮಾಜಿ ಮೇಯರ್ ನಾರಾಯಣ ಮಾತನಾಡಿ, ‘ರಾಜ್ಯದಾದ್ಯಂತ ಸಾಧನಾ ಸವಾವೇಶ ಆಯೋಜಿಸಲಾಗುತ್ತಿದ್ದು, ಮೊದಲ ಹಂತದಲ್ಲಿ ಜು.19ರಂದು ಮೈಸೂರು ವಿಭಾಗದ ಸವಾವೇಶ ನಡೆಯುತ್ತಿದೆ. ಸಮುದಾಯದ ಜನರು ಹೆಚ್ಚಾಗಿ ಸೇರಬೇಕು’ ಎಂದು ಸಲಹೆ ನೀಡಿದರು.</p>.<p>ಮಾದಿಗ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಎಡತೊರೆ ನಿಂಗರಾಜು, ಚಾಮರಾಜನಗರ ಜಿಲ್ಲಾ ಆದಿಜಾಂಬವ ಮಹಾಸಭಾದ ಅಧ್ಯಕ್ಷ ಎಂ.ಶಿವಮೂರ್ತಿ, ವಿಜಯಶಂಕರ್, ರಾಮು, ಶಿವಣ್ಣ, ಪ್ರಕಾಶ್, ನಾಗರಾಜು, ರೇವಣ್ಣ, ಜಯಶಂಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>