<p><strong>ಮೈಸೂರು:</strong> ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಅವರನ್ನು ಬಿಟ್ಟರೆ ಬೇರೆ ಯಾರೂ ಸೂಪರ್ ಸಿ.ಎಂ. ಇಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.</p>.<p>ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂವಿಧಾನದ ಪ್ರಕಾರ ಸಿ.ಎಂ. ಹುದ್ದೆ ಒಂದೇ ಇರುತ್ತದೆ. ಈಗ ಸಿದ್ದರಾಮಯ್ಯ ಅಲ್ಲಿ ಕುಳಿತಿದ್ದಾರೆ, ಆಡಳಿತ ನಡೆಸುತ್ತಿದ್ದಾರೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಸೂಪರ್ ಸಿ.ಎಂ. ಆಗಿ ನಡೆದುಕೊಂಡಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>‘ಉಸ್ತುವಾರಿಯು ಶಾಸಕರ ಅಭಿಪ್ರಾಯ ಕೇಳಿದ್ದಾರೆ. ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ನಾನೂ ಭೇಟಿಯಾಗಿದ್ದೆ. ಪಕ್ಷದ ನಾಯಕರು ಕರೆದಾಗ ಹೋಗಿ ಚರ್ಚಿಸುವುದು ಸಾಮಾನ್ಯ. ಶಾಸಕರಲ್ಲಿ ಸಚಿವರ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ಸುರ್ಜೇವಾಲ ಭೇಟಿಯಾದಾಗ ಅಪಸ್ವರ ತೆಗೆದಿಲ್ಲ’ ಎಂದರು.</p>.<p>‘ಮೈಸೂರಿನಲ್ಲಿ ಜುಲೈ 19ರಂದು ₹2,569 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಮಾತ್ರ ಆಹ್ವಾನಿಸಲಾಗಿದೆ’ ಎಂದು ತಿಳಿಸಿದರು.</p>.<p><strong>ಶಕ್ತಿ ಪ್ರದರ್ಶನದ ವೇದಿಕೆಯಲ್ಲ:</strong> </p><p>‘ಮೈಸೂರಿನ ಈ ಸಮಾವೇಶ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನದ ವೇದಿಕೆಯಲ್ಲ. ಐದು ವರ್ಷಗಳವರೆಗೆ ಆಡಳಿತ ನಡೆಸಲು ಜನರು ಆಶೀರ್ವದಿಸಿದ್ದಾರೆ. ಅವರ ಬೆಂಬಲ, ಶಕ್ತಿಯಿಂದ ಕೆಲಸ ಮಾಡುತ್ತಿದ್ಧೇವೆಯೇ ಹೊರತು ಬೇರೆ ಯಾವ ಶಕ್ತಿಯೂ ಇಲ್ಲ. ಈ ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು. ನಾಯಕತ್ವ ಬದಲಾವಣೆ, ಅದಲು-ಬದಲು ಮೊದಲಾದ ವಿಚಾರಗಳು ಈಗ ಅನಗತ್ಯವಾಗಿದೆ. ನಮಗೆ ಅಭಿವೃದ್ಧಿಯಷ್ಟೇ ಮುಖ್ಯ’ ಎಂದು ಪ್ರತಿಕ್ರಿಯಿಸಿದರು.</p>.<p>‘ಸಿಗಂದೂರು ಸೇತುವೆಗೆ ಡಿಪಿಆರ್ ಸಿದ್ಧವಾಗಿದ್ದೇ ನಾನು ಲೋಕೋಪಯೋಗಿ ಸಚಿವನಾಗಿದ್ದಾಗ. ಇದರಲ್ಲಿ ನನ್ನ ಪಾಲೂ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಅವರನ್ನು ಬಿಟ್ಟರೆ ಬೇರೆ ಯಾರೂ ಸೂಪರ್ ಸಿ.ಎಂ. ಇಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.</p>.<p>ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂವಿಧಾನದ ಪ್ರಕಾರ ಸಿ.ಎಂ. ಹುದ್ದೆ ಒಂದೇ ಇರುತ್ತದೆ. ಈಗ ಸಿದ್ದರಾಮಯ್ಯ ಅಲ್ಲಿ ಕುಳಿತಿದ್ದಾರೆ, ಆಡಳಿತ ನಡೆಸುತ್ತಿದ್ದಾರೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಸೂಪರ್ ಸಿ.ಎಂ. ಆಗಿ ನಡೆದುಕೊಂಡಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>‘ಉಸ್ತುವಾರಿಯು ಶಾಸಕರ ಅಭಿಪ್ರಾಯ ಕೇಳಿದ್ದಾರೆ. ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ನಾನೂ ಭೇಟಿಯಾಗಿದ್ದೆ. ಪಕ್ಷದ ನಾಯಕರು ಕರೆದಾಗ ಹೋಗಿ ಚರ್ಚಿಸುವುದು ಸಾಮಾನ್ಯ. ಶಾಸಕರಲ್ಲಿ ಸಚಿವರ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ಸುರ್ಜೇವಾಲ ಭೇಟಿಯಾದಾಗ ಅಪಸ್ವರ ತೆಗೆದಿಲ್ಲ’ ಎಂದರು.</p>.<p>‘ಮೈಸೂರಿನಲ್ಲಿ ಜುಲೈ 19ರಂದು ₹2,569 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಮಾತ್ರ ಆಹ್ವಾನಿಸಲಾಗಿದೆ’ ಎಂದು ತಿಳಿಸಿದರು.</p>.<p><strong>ಶಕ್ತಿ ಪ್ರದರ್ಶನದ ವೇದಿಕೆಯಲ್ಲ:</strong> </p><p>‘ಮೈಸೂರಿನ ಈ ಸಮಾವೇಶ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನದ ವೇದಿಕೆಯಲ್ಲ. ಐದು ವರ್ಷಗಳವರೆಗೆ ಆಡಳಿತ ನಡೆಸಲು ಜನರು ಆಶೀರ್ವದಿಸಿದ್ದಾರೆ. ಅವರ ಬೆಂಬಲ, ಶಕ್ತಿಯಿಂದ ಕೆಲಸ ಮಾಡುತ್ತಿದ್ಧೇವೆಯೇ ಹೊರತು ಬೇರೆ ಯಾವ ಶಕ್ತಿಯೂ ಇಲ್ಲ. ಈ ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು. ನಾಯಕತ್ವ ಬದಲಾವಣೆ, ಅದಲು-ಬದಲು ಮೊದಲಾದ ವಿಚಾರಗಳು ಈಗ ಅನಗತ್ಯವಾಗಿದೆ. ನಮಗೆ ಅಭಿವೃದ್ಧಿಯಷ್ಟೇ ಮುಖ್ಯ’ ಎಂದು ಪ್ರತಿಕ್ರಿಯಿಸಿದರು.</p>.<p>‘ಸಿಗಂದೂರು ಸೇತುವೆಗೆ ಡಿಪಿಆರ್ ಸಿದ್ಧವಾಗಿದ್ದೇ ನಾನು ಲೋಕೋಪಯೋಗಿ ಸಚಿವನಾಗಿದ್ದಾಗ. ಇದರಲ್ಲಿ ನನ್ನ ಪಾಲೂ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>