<p><strong>ಮೈಸೂರು:</strong> ‘ನಾಯಕತ್ವ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಹೇಳಿದಂತೆ ಕೇಳುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಬಾರಿ ಹೇಳಿಕೆ ನೀಡಿದ್ದು ಅವರ ತವರಾದ ಮೈಸೂರಿನಲ್ಲೇ.</p><p>ಇತ್ತೀಚಿನ ತಿಂಗಳುಗಳಲ್ಲಿ, ಅವರು ಇಲ್ಲಿಗೆ ಆಗಮಿಸಿದಾಗೆಲ್ಲಾ ಮಾಧ್ಯಮದವರ ಪ್ರಶ್ನೆಗೆ ಅವರು ಹೈಕಮಾಂಡ್ನತ್ತ ತೀರ್ಮಾನಿಸಬೇಕಷ್ಟೆ ಎನ್ನುತ್ತಲೇ ಬಂದಿದ್ದರು. </p><p>‘ನಾನು ಹೈಕಮಾಂಡ್ ಮಾತನ್ನು ಮಾತ್ರವೇ ಕೇಳುವುದು, ಅವರು ಹೇಳಿದರೆ ಐದು ವರ್ಷವೂ ಮುಖ್ಯಮಂತ್ರಿ ಆಗಿರುತ್ತೇನೆ’ ಎಂದು ಮೇ 6ರಂದು ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದರು. ‘ಐದು ವರ್ಷವೂ ಕಾಂಗ್ರೆಸ್ ಸರ್ಕಾರ ಇರುತ್ತದೆ. ನೀವೇ ಇರಿ ಎಂದರೆ ಇರುತ್ತೇನೆ. ಎಲ್ಲಾ ತೀರ್ಮಾನವನ್ನೂ ಮಾಡುವುದು ಹೈಕಮಾಂಡ್. ಬೇರೆ ಯಾರೇ ಏನೇ ಹೇಳಿದರೂ ಅವರ ವೈಯಕ್ತಿಕ ಅಭಿಪ್ರಾಯವಷ್ಟೆ’ ಎಂದು ಹೇಳಿದ್ದರು.</p><p>‘ರಾಹುಲ್ ಗಾಂಧಿ ನನ್ನನ್ನು ಈವರೆಗೂ ನವದೆಹಲಿಗೆ ಕರೆದಿಲ್ಲ. ಅವರಾಗಿಯೇ ಕರೆದರೆ ಹೋಗುತ್ತೇನೆ. ನಾನಾಗಿಯೇ ಹೋಗಬೇಕಾದಲ್ಲಿ ರಾಹುಲ್ ಗಾಂಧಿ ಅವರು ಸಮಯ ಕೊಟ್ಟಾಗ ಹೋಗುತ್ತೇನೆ. ಸಚಿವ ಸಂಪುಟ ಪುನರ್ರಚನೆಯೋ, ವಿಸ್ತರಣೆಯೋ ಎಂಬುದನ್ನು ಅವರು ಸಮಯ ಕೊಟ್ಟ ಮೇಲೆ ಚರ್ಚಿಸಿ ತೀರ್ಮಾನಿಸುತ್ತೇನೆ. ಯಾವಾಗ ಕರೆಯುತ್ತಾರೆಯೋ ಗೊತ್ತಿಲ್ಲ’ ಎಂದಿದ್ದರು.</p><p>‘ಸಿಎಂ ಕುರ್ಚಿಯ ವಿಚಾರದ ಗೊಂದಲಕ್ಕೆ ತೆರೆ ಬೀಳುತ್ತದೆಯೇ’ ಎಂಬ ಪ್ರಶ್ನೆಗೆ, ‘ಹೈಕಮಾಂಡ್ ತೀರ್ಮಾನಿಸಬೇಕು, ಅದರಂತೆ ನಡೆದುಕೊಳ್ಳುತ್ತೇನೆ’ ಎಂದು ಹೇಳಿದ್ದರು.</p><p>ಮಾರ್ಚ್ 7ರಂದು ಸ್ವಕ್ಷೇತ್ರ ವರುಣ ವಿಧಾನಸಭಾ ಕ್ಷೇತ್ರದ ವರುಣ ಹೋಬಳಿಯ ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ನಲ್ಲಿ ಮಾತನಾಡಿದ್ದ ಅವರು, ‘ಹೈಕಮಾಂಡ್ ಬಿಡು ಅಂದ್ರೆ ಬಿಡ್ತಿನಿ, ಮುಂದುವರಿಯಿರಿ ಎಂದರೆ ಮುಂದುವರಿಯುತ್ತೇನೆ’ ಎಂದೇ ಸಿದ್ದರಾಮಯ್ಯ ಹೇಳಿದ್ದರು.</p><p>‘ಯಾರೋ ಏನೋ ಹೇಳುವುದು ನನಗೆ ಮುಖ್ಯವಲ್ಲ. ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ. ಅವಕಾಶ ವಿಶ್ವಾಸವಿದೆ. ಹೈಕಮಾಂಡ್ ಮೇಲೆ ನನಗೆ ಯಾವಾಗಲೂ ವಿಶ್ವಾಸವಿದೆ. ಇಡೀ ನಾಡಿನ ಜನರು ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಬಯಸಿದ್ದಾರೆ. ಆದರೆ, ಅಂತಿಮ ತೀರ್ಮಾನಿಸುವುದು ಹೈಕಮಾಂಡ್. ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ. ಅವರ ನಿರ್ಧಾರವೇ ಅಂತಿಮ. ನನಗೆ ಬಜೆಟ್ನ ದಾಖಲೆಗಳನ್ನು ಮುರಿಯುವುದರ ಮೇಲೆ ನಂಬಿಕೆ ಇಲ್ಲ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದೆಯೂ ಮಂಡಿಸುತ್ತೇನೆ. ರಾಹುಲ್ ಗಾಂಧಿ ಹೇಳಿದಂತೆ ಕೇಳುತ್ತೇನೆ’ ಎಂದು ಹೇಳಿದ್ದರು.</p><p>ಮಾರ್ಚ್ 13ರಂದು ತಾಲ್ಲೂಕಿನ ವರುಣ ಹೋಬಳಿಯ ವರಕೋಡು ಗ್ರಾಮದಲ್ಲಿ ಶುಕ್ರವಾರ ಬೀರೇಶ್ವರಸ್ವಾಮಿ ದೇವಸ್ಥಾನವನ್ನು ಉದ್ಘಾಟಿಸಿದ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ರಾಜಕೀಯದಲ್ಲಿ ಗೆಲುವು, ಸೋಲು ಎರಡನ್ನೂ ಕಂಡಿದ್ದೇನೆ. ಆದರೆ, ಜನ ಸೇವೆ ಮಾಡುವುದನ್ನು ಮರೆತಿಲ್ಲ. ಕೈಲಾದಷ್ಟು ಜನ ಸೇವೆ ಮಾಡಿಕೊಂಡು ಬರುತ್ತಿದ್ದೇನೆ’ ಎಂದು ಹೇಳಿದ್ದರು.</p><p>‘ನಾನು ಕ್ಷೇತ್ರಕ್ಕೆ ಈಗ ಜಾಸ್ತಿ ಬರಲು ಆಗುತ್ತಿಲ್ಲ. ಪುತ್ರ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಕ್ಷೇತ್ರವನ್ನು ನೋಡಿಕೊಳ್ಳುತ್ತಾನೆ. ಅಭಿವೃದ್ಧಿಗಾಗಿ ಅವನು ಹೇಳಿದ ಕೆಲಸವನ್ನೆಲ್ಲ ಮಾಡಿಕೊಡುತ್ತೇನೆ. ನೀವೆಲ್ಲರೂ ನನ್ನನ್ನು ಬೆಳೆಸಿದಂತೆಯೇ ಯತೀಂದ್ರನನ್ನೂ ಮುಂದೆಯೂ ಬೆಳೆಸಬೇಕು. ಬೆಳೆಸುತ್ತೀರಿ ಎಂಬ ವಿಶ್ವಾಸವಿದೆ’ ಎಂಬ ಹೇಳಿಕೆಯನ್ನೂ ನೀಡಿದ್ದರು.</p>.ಸಿಎಂ ಸಿದ್ದರಾಮಯ್ಯ ಪದತ್ಯಾಗ, ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿ.ಮಧ್ಯಾಹ್ನ 02.30ಕ್ಕೆ ಲೋಕಭವನಕ್ಕೆ ಸಿಎಂ ಭೇಟಿ, 3ಕ್ಕೆ ಸುದ್ದಿಗೋಷ್ಠಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಾಯಕತ್ವ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಹೇಳಿದಂತೆ ಕೇಳುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಬಾರಿ ಹೇಳಿಕೆ ನೀಡಿದ್ದು ಅವರ ತವರಾದ ಮೈಸೂರಿನಲ್ಲೇ.</p><p>ಇತ್ತೀಚಿನ ತಿಂಗಳುಗಳಲ್ಲಿ, ಅವರು ಇಲ್ಲಿಗೆ ಆಗಮಿಸಿದಾಗೆಲ್ಲಾ ಮಾಧ್ಯಮದವರ ಪ್ರಶ್ನೆಗೆ ಅವರು ಹೈಕಮಾಂಡ್ನತ್ತ ತೀರ್ಮಾನಿಸಬೇಕಷ್ಟೆ ಎನ್ನುತ್ತಲೇ ಬಂದಿದ್ದರು. </p><p>‘ನಾನು ಹೈಕಮಾಂಡ್ ಮಾತನ್ನು ಮಾತ್ರವೇ ಕೇಳುವುದು, ಅವರು ಹೇಳಿದರೆ ಐದು ವರ್ಷವೂ ಮುಖ್ಯಮಂತ್ರಿ ಆಗಿರುತ್ತೇನೆ’ ಎಂದು ಮೇ 6ರಂದು ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದರು. ‘ಐದು ವರ್ಷವೂ ಕಾಂಗ್ರೆಸ್ ಸರ್ಕಾರ ಇರುತ್ತದೆ. ನೀವೇ ಇರಿ ಎಂದರೆ ಇರುತ್ತೇನೆ. ಎಲ್ಲಾ ತೀರ್ಮಾನವನ್ನೂ ಮಾಡುವುದು ಹೈಕಮಾಂಡ್. ಬೇರೆ ಯಾರೇ ಏನೇ ಹೇಳಿದರೂ ಅವರ ವೈಯಕ್ತಿಕ ಅಭಿಪ್ರಾಯವಷ್ಟೆ’ ಎಂದು ಹೇಳಿದ್ದರು.</p><p>‘ರಾಹುಲ್ ಗಾಂಧಿ ನನ್ನನ್ನು ಈವರೆಗೂ ನವದೆಹಲಿಗೆ ಕರೆದಿಲ್ಲ. ಅವರಾಗಿಯೇ ಕರೆದರೆ ಹೋಗುತ್ತೇನೆ. ನಾನಾಗಿಯೇ ಹೋಗಬೇಕಾದಲ್ಲಿ ರಾಹುಲ್ ಗಾಂಧಿ ಅವರು ಸಮಯ ಕೊಟ್ಟಾಗ ಹೋಗುತ್ತೇನೆ. ಸಚಿವ ಸಂಪುಟ ಪುನರ್ರಚನೆಯೋ, ವಿಸ್ತರಣೆಯೋ ಎಂಬುದನ್ನು ಅವರು ಸಮಯ ಕೊಟ್ಟ ಮೇಲೆ ಚರ್ಚಿಸಿ ತೀರ್ಮಾನಿಸುತ್ತೇನೆ. ಯಾವಾಗ ಕರೆಯುತ್ತಾರೆಯೋ ಗೊತ್ತಿಲ್ಲ’ ಎಂದಿದ್ದರು.</p><p>‘ಸಿಎಂ ಕುರ್ಚಿಯ ವಿಚಾರದ ಗೊಂದಲಕ್ಕೆ ತೆರೆ ಬೀಳುತ್ತದೆಯೇ’ ಎಂಬ ಪ್ರಶ್ನೆಗೆ, ‘ಹೈಕಮಾಂಡ್ ತೀರ್ಮಾನಿಸಬೇಕು, ಅದರಂತೆ ನಡೆದುಕೊಳ್ಳುತ್ತೇನೆ’ ಎಂದು ಹೇಳಿದ್ದರು.</p><p>ಮಾರ್ಚ್ 7ರಂದು ಸ್ವಕ್ಷೇತ್ರ ವರುಣ ವಿಧಾನಸಭಾ ಕ್ಷೇತ್ರದ ವರುಣ ಹೋಬಳಿಯ ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ನಲ್ಲಿ ಮಾತನಾಡಿದ್ದ ಅವರು, ‘ಹೈಕಮಾಂಡ್ ಬಿಡು ಅಂದ್ರೆ ಬಿಡ್ತಿನಿ, ಮುಂದುವರಿಯಿರಿ ಎಂದರೆ ಮುಂದುವರಿಯುತ್ತೇನೆ’ ಎಂದೇ ಸಿದ್ದರಾಮಯ್ಯ ಹೇಳಿದ್ದರು.</p><p>‘ಯಾರೋ ಏನೋ ಹೇಳುವುದು ನನಗೆ ಮುಖ್ಯವಲ್ಲ. ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ. ಅವಕಾಶ ವಿಶ್ವಾಸವಿದೆ. ಹೈಕಮಾಂಡ್ ಮೇಲೆ ನನಗೆ ಯಾವಾಗಲೂ ವಿಶ್ವಾಸವಿದೆ. ಇಡೀ ನಾಡಿನ ಜನರು ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಬಯಸಿದ್ದಾರೆ. ಆದರೆ, ಅಂತಿಮ ತೀರ್ಮಾನಿಸುವುದು ಹೈಕಮಾಂಡ್. ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ. ಅವರ ನಿರ್ಧಾರವೇ ಅಂತಿಮ. ನನಗೆ ಬಜೆಟ್ನ ದಾಖಲೆಗಳನ್ನು ಮುರಿಯುವುದರ ಮೇಲೆ ನಂಬಿಕೆ ಇಲ್ಲ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದೆಯೂ ಮಂಡಿಸುತ್ತೇನೆ. ರಾಹುಲ್ ಗಾಂಧಿ ಹೇಳಿದಂತೆ ಕೇಳುತ್ತೇನೆ’ ಎಂದು ಹೇಳಿದ್ದರು.</p><p>ಮಾರ್ಚ್ 13ರಂದು ತಾಲ್ಲೂಕಿನ ವರುಣ ಹೋಬಳಿಯ ವರಕೋಡು ಗ್ರಾಮದಲ್ಲಿ ಶುಕ್ರವಾರ ಬೀರೇಶ್ವರಸ್ವಾಮಿ ದೇವಸ್ಥಾನವನ್ನು ಉದ್ಘಾಟಿಸಿದ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ರಾಜಕೀಯದಲ್ಲಿ ಗೆಲುವು, ಸೋಲು ಎರಡನ್ನೂ ಕಂಡಿದ್ದೇನೆ. ಆದರೆ, ಜನ ಸೇವೆ ಮಾಡುವುದನ್ನು ಮರೆತಿಲ್ಲ. ಕೈಲಾದಷ್ಟು ಜನ ಸೇವೆ ಮಾಡಿಕೊಂಡು ಬರುತ್ತಿದ್ದೇನೆ’ ಎಂದು ಹೇಳಿದ್ದರು.</p><p>‘ನಾನು ಕ್ಷೇತ್ರಕ್ಕೆ ಈಗ ಜಾಸ್ತಿ ಬರಲು ಆಗುತ್ತಿಲ್ಲ. ಪುತ್ರ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಕ್ಷೇತ್ರವನ್ನು ನೋಡಿಕೊಳ್ಳುತ್ತಾನೆ. ಅಭಿವೃದ್ಧಿಗಾಗಿ ಅವನು ಹೇಳಿದ ಕೆಲಸವನ್ನೆಲ್ಲ ಮಾಡಿಕೊಡುತ್ತೇನೆ. ನೀವೆಲ್ಲರೂ ನನ್ನನ್ನು ಬೆಳೆಸಿದಂತೆಯೇ ಯತೀಂದ್ರನನ್ನೂ ಮುಂದೆಯೂ ಬೆಳೆಸಬೇಕು. ಬೆಳೆಸುತ್ತೀರಿ ಎಂಬ ವಿಶ್ವಾಸವಿದೆ’ ಎಂಬ ಹೇಳಿಕೆಯನ್ನೂ ನೀಡಿದ್ದರು.</p>.ಸಿಎಂ ಸಿದ್ದರಾಮಯ್ಯ ಪದತ್ಯಾಗ, ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿ.ಮಧ್ಯಾಹ್ನ 02.30ಕ್ಕೆ ಲೋಕಭವನಕ್ಕೆ ಸಿಎಂ ಭೇಟಿ, 3ಕ್ಕೆ ಸುದ್ದಿಗೋಷ್ಠಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>