<p><strong>ಮೈಸೂರು</strong>: ‘ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.</p>.<p>ಸೋಮವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ‘ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು. </p>.<p>‘ಸಮಾಜದಲ್ಲಿ ಶಾಂತಿ ಹಾಗೂ ಸಹೋದರತ್ವ ರಕ್ಷಣೆಗೆ ಕಾಯ್ದೆ ರೂಪಿಸಲಾಗಿದೆ. ದ್ವೇಷ ಭಾಷಣ ನಿಯಂತ್ರಿಸಲೆಂದೇ ಕ್ರಮ ಕೈಗೊಂಡಿದ್ದೇವೆ. ತಾವು ದ್ವೇಷಭಾಷಣ ಮಾಡುತ್ತೇವೆಂಬ ಕಾರಣಕ್ಕೇ ಬಿಜೆಪಿಯವರು ಅದನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ’ ಎಂದು ಪ್ರತಿಪಾದಿಸಿದರು. </p>.<p>‘ಕೆಲವರನ್ನು ಗುರಿಯಾಗಿಸಿ ದ್ವೇಷ ಭಾಷಣ ತಡೆ ಮಸೂದೆ ರೂಪಿಸಲಾಗಿದೆ’ ಎಂಬ ಬಿಜೆಪಿ ಆರೋಪಕ್ಕೆ, ‘ಕಾಯ್ದೆ ಎಲ್ಲರಿಗೂ ಅನ್ವಯವಾಗುತ್ತದೆ. ಬಿಜೆಪಿಯವರಷ್ಟೇ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲಸುತ್ತದೆಯೇ’ ಎಂದು ಪ್ರಶ್ನಿಸಿದರು. </p>.<p>ಲಪಟಾಯಿಸೋದಲ್ಲ, ಹಣ ಬಿಡುಗಡೆಯಾಗಿಲ್ಲ: </p>.<p>‘ಗೃಹಲಕ್ಷ್ಮಿ ಯೋಜನೆಯ ಹಣ ಲಪಟಾಯಿಸಲಾಗಿದೆ’ ಎಂಬ ಬಿಜೆಪಿಯವರ ಆರೋಪಕ್ಕೆ, ‘ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಬರುತ್ತದೆ? ಆ ಹಣವನ್ನು ಬೇರಾರೂ ತೆಗೆದುಕೊಳ್ಳಲಾಗುವುದಿಲ್ಲ’ ಎಂದು ತಿಳಿಸಿದರು. </p>.<p>‘ಫೆಬ್ರುವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು. ಈವರೆಗೆ 23 ತಿಂಗಳ ಹಣವನ್ನು ಕೊಟ್ಟಿದ್ದೇವೆ. ಹಣವಿಲ್ಲದಿದ್ದರೆ ಇಷ್ಟೆಲ್ಲ ಕೊಡುವುದಕ್ಕೆ ಸಾಧ್ಯವಾಗುತ್ತಿತ್ತೇ?’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.</p>.<p>ಸೋಮವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ‘ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು. </p>.<p>‘ಸಮಾಜದಲ್ಲಿ ಶಾಂತಿ ಹಾಗೂ ಸಹೋದರತ್ವ ರಕ್ಷಣೆಗೆ ಕಾಯ್ದೆ ರೂಪಿಸಲಾಗಿದೆ. ದ್ವೇಷ ಭಾಷಣ ನಿಯಂತ್ರಿಸಲೆಂದೇ ಕ್ರಮ ಕೈಗೊಂಡಿದ್ದೇವೆ. ತಾವು ದ್ವೇಷಭಾಷಣ ಮಾಡುತ್ತೇವೆಂಬ ಕಾರಣಕ್ಕೇ ಬಿಜೆಪಿಯವರು ಅದನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ’ ಎಂದು ಪ್ರತಿಪಾದಿಸಿದರು. </p>.<p>‘ಕೆಲವರನ್ನು ಗುರಿಯಾಗಿಸಿ ದ್ವೇಷ ಭಾಷಣ ತಡೆ ಮಸೂದೆ ರೂಪಿಸಲಾಗಿದೆ’ ಎಂಬ ಬಿಜೆಪಿ ಆರೋಪಕ್ಕೆ, ‘ಕಾಯ್ದೆ ಎಲ್ಲರಿಗೂ ಅನ್ವಯವಾಗುತ್ತದೆ. ಬಿಜೆಪಿಯವರಷ್ಟೇ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲಸುತ್ತದೆಯೇ’ ಎಂದು ಪ್ರಶ್ನಿಸಿದರು. </p>.<p>ಲಪಟಾಯಿಸೋದಲ್ಲ, ಹಣ ಬಿಡುಗಡೆಯಾಗಿಲ್ಲ: </p>.<p>‘ಗೃಹಲಕ್ಷ್ಮಿ ಯೋಜನೆಯ ಹಣ ಲಪಟಾಯಿಸಲಾಗಿದೆ’ ಎಂಬ ಬಿಜೆಪಿಯವರ ಆರೋಪಕ್ಕೆ, ‘ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಬರುತ್ತದೆ? ಆ ಹಣವನ್ನು ಬೇರಾರೂ ತೆಗೆದುಕೊಳ್ಳಲಾಗುವುದಿಲ್ಲ’ ಎಂದು ತಿಳಿಸಿದರು. </p>.<p>‘ಫೆಬ್ರುವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು. ಈವರೆಗೆ 23 ತಿಂಗಳ ಹಣವನ್ನು ಕೊಟ್ಟಿದ್ದೇವೆ. ಹಣವಿಲ್ಲದಿದ್ದರೆ ಇಷ್ಟೆಲ್ಲ ಕೊಡುವುದಕ್ಕೆ ಸಾಧ್ಯವಾಗುತ್ತಿತ್ತೇ?’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>