‘ಕಾಂಗ್ರೆಸ್ ನಿಷೇಧಿಸಬೇಕು’ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಒಂದು ವೇಳೆ ಕಾಂಗ್ರೆಸ್ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸದೇ ಕ್ಷಮಾಪಣಾ ಅರ್ಜಿ ಬರೆಯುತ್ತಾ ಕುಳಿತಿದ್ದರೆ ಅವರು ಇಂದಿಗೂ ಬ್ರಿಟಿಷರ ಗುಲಾಮರಾಗಿಯೇ ಇರಬೇಕಾಗಿತ್ತು ಎನ್ನುವುದನ್ನು ಮರೆಯದಿರಲಿ’ ಎಂದು ಖಾರವಾಗಿ ನುಡಿದರು.