<p>ಎಂಟು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ವಿವಿಧ ಭಾಗ್ಯ, ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುವುದು ಖಾತ್ರಿಯಾಗುತ್ತಿದ್ದಂತೆಯೇ ಗುರುವಾರ ಹುಟ್ಟೂರು ಮೈಸೂರು ಸಿದ್ದರಾಮನಹುಂಡಿಯಲ್ಲಿ ಗುರುವಾರ ಮೌನ ಆವರಿಸಿತ್ತು.</p><p>ಸಿದ್ದರಾಮಯ್ಯ ರಾಜೀನಾಮೆ ನೀಡಿದ ಸುದ್ದಿ ಕೇಳುತ್ತಿದ್ದಂತೆಯೇ ಜನ ಕಣ್ಣೀರಾದರು. ಹೈಕಮಾಂಡ್ ಕಠೋರ ನಿರ್ಧಾರ ಕೈಗೊಂಡಿದ್ದು ಸರಿಯಲ್ಲ ಎಂಬ ಆಕ್ಷೇಪವನ್ನು ವ್ಯಕ್ತಪಡಿಸಿದರು. ಗ್ರಾಮದ ಯುವಜನರಲ್ಲಿ ಹೆಚ್ಚಿನವರು ಬೆಂಗಳೂರಿಗೆ ತೆರಳಿ ಸಿದ್ದರಾಮಯ್ಯ ಭೇಟಿಗೆ ಯತ್ನಿಸಿದರೆ, ಹಿರಿಯರು ಊರಿನಲ್ಲೇ ಉಳಿದು ತಮ್ಮ ನಾಯಕನ ಸಾಧನೆಗಳನ್ನು ಕೊಂಡಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>