<p><strong>ಮೈಸೂರು: </strong>‘ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಲು ಹೊರಟಿದ್ದಾರೆ. ಏಕೆಂದರೆ ಅವರು ಆರ್ಎಸ್ಎಸ್ನವರು ಅಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಇಲ್ಲಿ ಹೇಳಿದರು.</p>.<p>ಹೊಸ ನಾಯಕತ್ವ ಹಾಗೂ ಹೊಸಮುಖಗಳಿಗೆ ಬಿಜೆಪಿಯಲ್ಲಿ ಆದ್ಯತೆ ಸಿಗಲಿದೆ ಎಂಬ ಬಿ.ಎಲ್.ಸಂತೋಷ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯಲ್ಲಿ ಸಂತೋಷ್ ಮಾತು ನಡೆಯುತ್ತದೆ. ಬಸವರಾಜ ಬೊಮ್ಮಾಯಿ ಈ ಮೊದಲು ನಮ್ಮೊಂದಿಗೆ ಜನತಾ ಪರಿವಾರದಲ್ಲಿ ಇದ್ದರೂ ನಮ್ಮ ರಾಜಕೀಯ ಪಟ್ಟುಗಳನ್ನು ಕಲಿಯಲಿಲ್ಲ’ ಎಂದು ಮಾರ್ಮಿಕವಾಗಿ ನುಡಿದರು.</p>.<p>‘ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಬಂದು ಬಹಳ ದಿನವಾಗಿದೆ. ಬಿಜೆಪಿ ಕಿತ್ತೊಗೆಯಲು ವಿಧಾನಸಭಾ ಚುನಾವಣೆಗಾಗಿ ಜನ ಕಾಯುತ್ತಿದ್ದಾರೆ’ ಎಂದರು.</p>.<p>‘ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದಿಂದ ಹಿಡಿದು ಎಲ್ಲಾ ಪ್ರಕರಣಗಳ ನಿರ್ವಹಣೆಯಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ. ರಾಜ್ಯದಲ್ಲಿ ಈಗ ದುರ್ಬಲ ಗೃಹ ಸಚಿವ ಹಾಗೂ ಮುಖ್ಯಮಂತ್ರಿ ಇದ್ದಾರೆ. ಕಾನೂನು ಸುವ್ಯವಸ್ಥೆಯೇ ಇಲ್ಲದಂತಾಗಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>ಕಾಂಗ್ರೆಸ್ನದ್ದು ವಂಶಪಾರಂಪರ್ಯ ರಾಜಕಾರಣ ಎಂಬ ಸಂತೋಷ್ ಹೇಳಿಕೆಗೆ, ‘ಹಾಗಿದ್ದರೆ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಕ್ಕಳು ಯಾರು? ನಮ್ಮನ್ನು ಟೀಕಿಸಲು ಅವರಿಗೆ ನೈತಿಕತೆ ಇದೆಯೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಲು ಹೊರಟಿದ್ದಾರೆ. ಏಕೆಂದರೆ ಅವರು ಆರ್ಎಸ್ಎಸ್ನವರು ಅಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಇಲ್ಲಿ ಹೇಳಿದರು.</p>.<p>ಹೊಸ ನಾಯಕತ್ವ ಹಾಗೂ ಹೊಸಮುಖಗಳಿಗೆ ಬಿಜೆಪಿಯಲ್ಲಿ ಆದ್ಯತೆ ಸಿಗಲಿದೆ ಎಂಬ ಬಿ.ಎಲ್.ಸಂತೋಷ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯಲ್ಲಿ ಸಂತೋಷ್ ಮಾತು ನಡೆಯುತ್ತದೆ. ಬಸವರಾಜ ಬೊಮ್ಮಾಯಿ ಈ ಮೊದಲು ನಮ್ಮೊಂದಿಗೆ ಜನತಾ ಪರಿವಾರದಲ್ಲಿ ಇದ್ದರೂ ನಮ್ಮ ರಾಜಕೀಯ ಪಟ್ಟುಗಳನ್ನು ಕಲಿಯಲಿಲ್ಲ’ ಎಂದು ಮಾರ್ಮಿಕವಾಗಿ ನುಡಿದರು.</p>.<p>‘ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಬಂದು ಬಹಳ ದಿನವಾಗಿದೆ. ಬಿಜೆಪಿ ಕಿತ್ತೊಗೆಯಲು ವಿಧಾನಸಭಾ ಚುನಾವಣೆಗಾಗಿ ಜನ ಕಾಯುತ್ತಿದ್ದಾರೆ’ ಎಂದರು.</p>.<p>‘ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದಿಂದ ಹಿಡಿದು ಎಲ್ಲಾ ಪ್ರಕರಣಗಳ ನಿರ್ವಹಣೆಯಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ. ರಾಜ್ಯದಲ್ಲಿ ಈಗ ದುರ್ಬಲ ಗೃಹ ಸಚಿವ ಹಾಗೂ ಮುಖ್ಯಮಂತ್ರಿ ಇದ್ದಾರೆ. ಕಾನೂನು ಸುವ್ಯವಸ್ಥೆಯೇ ಇಲ್ಲದಂತಾಗಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>ಕಾಂಗ್ರೆಸ್ನದ್ದು ವಂಶಪಾರಂಪರ್ಯ ರಾಜಕಾರಣ ಎಂಬ ಸಂತೋಷ್ ಹೇಳಿಕೆಗೆ, ‘ಹಾಗಿದ್ದರೆ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಕ್ಕಳು ಯಾರು? ನಮ್ಮನ್ನು ಟೀಕಿಸಲು ಅವರಿಗೆ ನೈತಿಕತೆ ಇದೆಯೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>