ಹಲವೆಡೆ ಅತಿವೃಷ್ಟಿಯಿಂದ, ಮತ್ತೆ ಕೆಲವೆಡೆ ಬರದಿಂದ ರೈತ ಸಮುದಾಯ ತತ್ತರಿಸಿದೆ. ಈ ಸಂದರ್ಭದಲ್ಲಿ ಸರ್ಕಾರ ಅವರ ನೆರವಿಗೆ ಬರಬೇಕೇ ವಿನಹಾ ಬಲವಂತವಾಗಿ ಸಾಲ ವಸೂಲು ಮಾಡಬಾರದು. ಅವರಾಗೇ ಪಾವತಿಸಿದರೆ ಸ್ವೀಕರಿಸಲಿ, ಅದನ್ನು ಬಿಟ್ಟು ಬಲವಂತದ ವಸೂಲಾತಿ ಏನಾದರೂ ಮಾಡಿದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಇಲ್ಲಿ ಬುಧವಾರ ಎಚ್ಚರಿಕೆ ನೀಡಿದರು.