<p><strong>ಹುಣಸೂರು</strong>: ರಾಜ್ಯದಲ್ಲಿ ಸಿದ್ದರಾಮಯ್ಯ ಅವಧಿಯಲ್ಲಿ ಭೂಸುಧಾರಣೆ ಕಾಯ್ದೆ 75 (ಬಿ) ತಿದ್ದುಪಡಿ ತಂದು ಬಂಡವಾಳಶಾಹಿಗಳು ಭೂಮಿ ಖರೀದಿಸಲು ಅವಕಾಶ ನೀಡಿ ಕಾಯ್ದೆ ಕೊಲೆ ಮಾಡಿ ಮೌನವಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಚಾಟಿ ಬೀಸಿದರು.</p>.<p>‘ಕಾಂಗ್ರೆಸ್ ಭೂಸುಧಾರಣೆ ಕುರಿತು ಧರಣಿ, ಸತ್ಯಾಗ್ರಹ ನಡೆಸುತ್ತಿದ್ದು, ಸಿದ್ದರಾಮಯ್ಯ ಅವರ ಅಧಿಕಾರದಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ಬಂಡವಾಳ ಶಾಹಿಗಳಿಗೆ ಮಣೆ ಹಾಕಿದ್ದರು. ಇದರಿಂದಾಗಿ ರಾಜ್ಯದಲ್ಲಿ ಭೂಮಿ ಖರೀದಿಸುವವರ ಆದಾಯವನ್ನು ₹ 24 ಲಕ್ಷಕ್ಕೆ ಹೆಚ್ಚಿಸಿ ಬಂಡವಾಳಶಾಹಿಗಳು ಭೂಮಿ ಖರೀದಿಸಲು ಹಾಸಿಗೆ ಹಾಕಿದ್ದನ್ನು ಕಾಂಗ್ರೆಸ್ ಪಕ್ಷದವರು ಮರೆತು, ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿರುವುದು ಹಾಸ್ಯಾಸ್ಪದ’ ಎಂದು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಲೇವಡಿ ಮಾಡಿದರು.</p>.<p>‘ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದಿದ್ದು ಹೋರಾಟಗಾರರು ಕಾಯ್ದೆಯಲ್ಲಿ ಸಾಧಕ– ಬಾಧಕವನ್ನು ಚರ್ಚಿಸಿ ತಪ್ಪು ಸರಿಪಡಿಸಲು ಸಲಹೆ ನೀಡುವ ಬದಲಿಗೆ ಬೀದಿಗಿಳಿದು ಹೋರಾಡುವುದರಿಂದ ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ಈ ಸಣ್ಣ ವಿಚಾರಗಳು ಅರಿಯದ ರೈತ ನಾಯಕರು ಕಾಂಗ್ರೆಸ್ ಪಕ್ಷದ ಕೈಗೊಂಬೆ ಯಾಗಿ ಹೋರಾಟ ನಡೆಸಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.</p>.<p>ಸಿದ್ದರಾಮಯ್ಯ ರಾಜ್ಯದಲ್ಲಿ ಜಾತಿಗಣತಿ ವರದಿ ಕುರಿತು ಧ್ವನಿ ಎತ್ತಿದ್ದಾರೆ. ಅವರ ಅವಧಿಯಲ್ಲೇ ₹ 260 ಕೋಟಿ ವೆಚ್ಚದಲ್ಲಿ ಸಮಿತಿ ರಚಿಸಿ ಅಧ್ಯಯನ ನಡೆಸಿದ್ದರೂ, ಸದನದಲ್ಲಿ ವರದಿ ಮಂಡಿಸಲು ಅವಕಾಶ ನೀಡಲಿಲ್ಲ. ಈಗ ಜಾತಿಗಣತಿ ಕುರಿತು ಚರ್ಚಿಸಿ ರಾಜಕೀಯ ಲೇಪನ ಮಾಡುತ್ತಿದ್ದಾರೆ. ‘ಅವರೇ ಹುಟ್ಟು ಹಾಕಿದ ಕೂಸಿಗೆ ಅವರಿಂದಲೇ ಹಾಲು ಕುಡಿಸಲಾಗಲಿಲ್ಲ’ ಎಂಬ ಬೇಸರವಿದೆ ಎಂದರು.</p>.<p class="Subhead"><strong>ಶಾಲೆ ದತ್ತು: </strong>ವಿಧಾನಪರಿಷತ್ ಸದಸ್ಯರಾದ ಬಳಿಕ ಸರ್ಕಾರದಿಂದ ₹ 50 ಲಕ್ಷ ಅನುದಾನ ಬಂದಿದ್ದು, ಈ ಹಣದಿಂದ ಹುಣಸೂರು, ಪಿರಿಯಾಪಟ್ಟಣ ಮತ್ತು ಕೆ.ಆರ್.ನಗರ ತಾಲ್ಲೂಕಿನಲ್ಲಿ ಕೊಳಚೆ ಪ್ರದೇಶದಲ್ಲಿ ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿಮಾಡಲು ಬಳಸುತ್ತೇನೆ.</p>.<p>ತಾಲ್ಲೂಕಿನ ಕಟ್ಟೆಮಳಲವಾಡಿ ಅಣೆಕಟ್ಟೆ ನಾಲೆ ಆಧುನೀಕರಣಕ್ಕೆ 2019ರಲ್ಲಿ ₹ 60 ಕೋಟಿ ವೆಚ್ಚದಲ್ಲಿ ಯೋಜನೆ ಸಿದ್ಧಪಡಿಸಲಾಗಿತ್ತು. ಅದರಂತೆ ಯೋಜನೆ ಸಿದ್ಧಗೊಂಡಿದ್ದು ಅನುದಾನ ಬಿಡುಗಡೆ ಆದ ಬಳಿಕ ಕಾಮಗಾರಿ ನಡೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ರಾಜ್ಯದಲ್ಲಿ ಸಿದ್ದರಾಮಯ್ಯ ಅವಧಿಯಲ್ಲಿ ಭೂಸುಧಾರಣೆ ಕಾಯ್ದೆ 75 (ಬಿ) ತಿದ್ದುಪಡಿ ತಂದು ಬಂಡವಾಳಶಾಹಿಗಳು ಭೂಮಿ ಖರೀದಿಸಲು ಅವಕಾಶ ನೀಡಿ ಕಾಯ್ದೆ ಕೊಲೆ ಮಾಡಿ ಮೌನವಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಚಾಟಿ ಬೀಸಿದರು.</p>.<p>‘ಕಾಂಗ್ರೆಸ್ ಭೂಸುಧಾರಣೆ ಕುರಿತು ಧರಣಿ, ಸತ್ಯಾಗ್ರಹ ನಡೆಸುತ್ತಿದ್ದು, ಸಿದ್ದರಾಮಯ್ಯ ಅವರ ಅಧಿಕಾರದಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ಬಂಡವಾಳ ಶಾಹಿಗಳಿಗೆ ಮಣೆ ಹಾಕಿದ್ದರು. ಇದರಿಂದಾಗಿ ರಾಜ್ಯದಲ್ಲಿ ಭೂಮಿ ಖರೀದಿಸುವವರ ಆದಾಯವನ್ನು ₹ 24 ಲಕ್ಷಕ್ಕೆ ಹೆಚ್ಚಿಸಿ ಬಂಡವಾಳಶಾಹಿಗಳು ಭೂಮಿ ಖರೀದಿಸಲು ಹಾಸಿಗೆ ಹಾಕಿದ್ದನ್ನು ಕಾಂಗ್ರೆಸ್ ಪಕ್ಷದವರು ಮರೆತು, ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿರುವುದು ಹಾಸ್ಯಾಸ್ಪದ’ ಎಂದು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಲೇವಡಿ ಮಾಡಿದರು.</p>.<p>‘ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದಿದ್ದು ಹೋರಾಟಗಾರರು ಕಾಯ್ದೆಯಲ್ಲಿ ಸಾಧಕ– ಬಾಧಕವನ್ನು ಚರ್ಚಿಸಿ ತಪ್ಪು ಸರಿಪಡಿಸಲು ಸಲಹೆ ನೀಡುವ ಬದಲಿಗೆ ಬೀದಿಗಿಳಿದು ಹೋರಾಡುವುದರಿಂದ ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ಈ ಸಣ್ಣ ವಿಚಾರಗಳು ಅರಿಯದ ರೈತ ನಾಯಕರು ಕಾಂಗ್ರೆಸ್ ಪಕ್ಷದ ಕೈಗೊಂಬೆ ಯಾಗಿ ಹೋರಾಟ ನಡೆಸಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.</p>.<p>ಸಿದ್ದರಾಮಯ್ಯ ರಾಜ್ಯದಲ್ಲಿ ಜಾತಿಗಣತಿ ವರದಿ ಕುರಿತು ಧ್ವನಿ ಎತ್ತಿದ್ದಾರೆ. ಅವರ ಅವಧಿಯಲ್ಲೇ ₹ 260 ಕೋಟಿ ವೆಚ್ಚದಲ್ಲಿ ಸಮಿತಿ ರಚಿಸಿ ಅಧ್ಯಯನ ನಡೆಸಿದ್ದರೂ, ಸದನದಲ್ಲಿ ವರದಿ ಮಂಡಿಸಲು ಅವಕಾಶ ನೀಡಲಿಲ್ಲ. ಈಗ ಜಾತಿಗಣತಿ ಕುರಿತು ಚರ್ಚಿಸಿ ರಾಜಕೀಯ ಲೇಪನ ಮಾಡುತ್ತಿದ್ದಾರೆ. ‘ಅವರೇ ಹುಟ್ಟು ಹಾಕಿದ ಕೂಸಿಗೆ ಅವರಿಂದಲೇ ಹಾಲು ಕುಡಿಸಲಾಗಲಿಲ್ಲ’ ಎಂಬ ಬೇಸರವಿದೆ ಎಂದರು.</p>.<p class="Subhead"><strong>ಶಾಲೆ ದತ್ತು: </strong>ವಿಧಾನಪರಿಷತ್ ಸದಸ್ಯರಾದ ಬಳಿಕ ಸರ್ಕಾರದಿಂದ ₹ 50 ಲಕ್ಷ ಅನುದಾನ ಬಂದಿದ್ದು, ಈ ಹಣದಿಂದ ಹುಣಸೂರು, ಪಿರಿಯಾಪಟ್ಟಣ ಮತ್ತು ಕೆ.ಆರ್.ನಗರ ತಾಲ್ಲೂಕಿನಲ್ಲಿ ಕೊಳಚೆ ಪ್ರದೇಶದಲ್ಲಿ ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿಮಾಡಲು ಬಳಸುತ್ತೇನೆ.</p>.<p>ತಾಲ್ಲೂಕಿನ ಕಟ್ಟೆಮಳಲವಾಡಿ ಅಣೆಕಟ್ಟೆ ನಾಲೆ ಆಧುನೀಕರಣಕ್ಕೆ 2019ರಲ್ಲಿ ₹ 60 ಕೋಟಿ ವೆಚ್ಚದಲ್ಲಿ ಯೋಜನೆ ಸಿದ್ಧಪಡಿಸಲಾಗಿತ್ತು. ಅದರಂತೆ ಯೋಜನೆ ಸಿದ್ಧಗೊಂಡಿದ್ದು ಅನುದಾನ ಬಿಡುಗಡೆ ಆದ ಬಳಿಕ ಕಾಮಗಾರಿ ನಡೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>