<p><strong>ಮೈಸೂರು</strong>: ಶಿವಮೊಗ್ಗ ಜಿಲ್ಲೆಯ ಶ್ರೀಕ್ಷೇತ್ರ ಹೊಂಬುಜ ಜೈನ ಮಠದಿಂದ ಕೊಡಮಾಡುವ ಈ ವರ್ಷದ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಗೆ ಮೈಸೂರಿನ ಜೈನಶಾಸ್ತ್ರ ಮತ್ತು ಪ್ರಾಕೃತ ವಿದ್ವಾಂಸ ಪ್ರೊ.ಶುಭಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಪ್ರಶಸ್ತಿಯು ₹ 51ಸಾವಿರ ನಗದು, ಪ್ರಶಸ್ತಿಪತ್ರವನ್ನು ಒಳಗೊಂಡಿದೆ.</p>.<p>ಜೈನಶಾಸ್ತ್ರ, ಪ್ರಾಕೃತ, ಸಾಹಿತ್ಯ, ಸಂಸ್ಕೃತಿಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾರ್ಚ್ 14ರಂದು ಸಂಜೆ 6ಕ್ಕೆ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.</p>.<p>ಶುಭಚಂದ್ರ ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ ಮತ್ತು ಪ್ರಾಕೃತ ವಿಭಾಗದಲ್ಲಿ ಸಂಶೋಧಕ, ಬೋಧಕರಾಗಿ ಕಾರ್ಯನಿರ್ವಹಿಸಿ 2006ರಲ್ಲಿ ನಿವೃತ್ತರಾಗಿದ್ದಾರೆ. ಜೈನ ಸಾಹಿತ್ಯ ಮತ್ತು ಸಂಸ್ಕೃತಿ, ಪ್ರಾಕೃತ ಸಾಹಿತ್ಯ ಕೈಪಿಡಿ, ಅಹಿಂಸೆ, ಯಶೋಧರ ಚರಿತೆ ಅವರ ಪ್ರಮುಖ ಕೃತಿಗಳಾಗಿವೆ. ಹಲವು ಸಂಶೋಧನಾ ಲೇಖನಗಳನ್ನೂ ಬರೆದಿದ್ದಾರೆ. ಹಲವು ಪ್ರಶಸ್ತಿ–ಪುರಸ್ಕಾರಗಳಿಗೆ ಭಾಜನವಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಶಿವಮೊಗ್ಗ ಜಿಲ್ಲೆಯ ಶ್ರೀಕ್ಷೇತ್ರ ಹೊಂಬುಜ ಜೈನ ಮಠದಿಂದ ಕೊಡಮಾಡುವ ಈ ವರ್ಷದ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಗೆ ಮೈಸೂರಿನ ಜೈನಶಾಸ್ತ್ರ ಮತ್ತು ಪ್ರಾಕೃತ ವಿದ್ವಾಂಸ ಪ್ರೊ.ಶುಭಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಪ್ರಶಸ್ತಿಯು ₹ 51ಸಾವಿರ ನಗದು, ಪ್ರಶಸ್ತಿಪತ್ರವನ್ನು ಒಳಗೊಂಡಿದೆ.</p>.<p>ಜೈನಶಾಸ್ತ್ರ, ಪ್ರಾಕೃತ, ಸಾಹಿತ್ಯ, ಸಂಸ್ಕೃತಿಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾರ್ಚ್ 14ರಂದು ಸಂಜೆ 6ಕ್ಕೆ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.</p>.<p>ಶುಭಚಂದ್ರ ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ ಮತ್ತು ಪ್ರಾಕೃತ ವಿಭಾಗದಲ್ಲಿ ಸಂಶೋಧಕ, ಬೋಧಕರಾಗಿ ಕಾರ್ಯನಿರ್ವಹಿಸಿ 2006ರಲ್ಲಿ ನಿವೃತ್ತರಾಗಿದ್ದಾರೆ. ಜೈನ ಸಾಹಿತ್ಯ ಮತ್ತು ಸಂಸ್ಕೃತಿ, ಪ್ರಾಕೃತ ಸಾಹಿತ್ಯ ಕೈಪಿಡಿ, ಅಹಿಂಸೆ, ಯಶೋಧರ ಚರಿತೆ ಅವರ ಪ್ರಮುಖ ಕೃತಿಗಳಾಗಿವೆ. ಹಲವು ಸಂಶೋಧನಾ ಲೇಖನಗಳನ್ನೂ ಬರೆದಿದ್ದಾರೆ. ಹಲವು ಪ್ರಶಸ್ತಿ–ಪುರಸ್ಕಾರಗಳಿಗೆ ಭಾಜನವಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>