<p><strong>ಮೈಸೂರು</strong>: ಜಾನಪದ ಕಲಾವಿದೆ ಸೋಬಾನೆ ಚನ್ನಾಜಮ್ಮ ಅವರು 2025ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕಾಡೆಮಿಯು ಮಂಗಳವಾರ ಆಯ್ಕೆ ಘೋಷಿಸಿದೆ.</p>.<p>ತಿ.ನರಸೀಪುರ ತಾಲ್ಲೂಕಿನ ಯಾಚೇನಹಳ್ಳಿಯ ಚನ್ನಾಜಮ್ಮ ಅವರ ನಾಲಿಗೆಯಲ್ಲಿ ಸೋಬಾನೆ ಪದಗಳು ನಲಿಯುತ್ತವೆ. ಹುಟ್ಟಿನಿಂದ ಸಾವಿನವರೆಗಿನ ಎಲ್ಲ ಕಾರ್ಯಗಳಿಗೆ ಸುತ್ತಲಿನ ಗ್ರಾಮಸ್ಥರಿಗೆ ಅವರ ಪದಗಳು ಬೇಕು.</p>.<p>ರಾಗಿ ಬೀಸುವುದು, ಕಳೆ ಕೀಳುವುದು ಸೇರಿದಂತೆ ಕೃಷಿ ಕಾಯಕ ಮಾಡುವಾಗ ಹಾಡುವ ಅವರು, ಮಲೆ ಮಹದೇಶ್ವರ, ಪಾರ್ವತಮ್ಮ, ಭೈರವೇಶ್ವರ, ವೆಂಕಟರಮಣ ಸೇರಿ ಎಲ್ಲ ದೇವರ ಹಾಡುಗಳನ್ನು ಹಾಡುತ್ತಾರೆ.</p>.<p>ಆಕಾಶವಾಣಿಯಲ್ಲೂ ಕಾರ್ಯಕ್ರಮಗಳನ್ನು ನಿರಂತರವಾಗಿ ನೀಡಿರುವ ಅವರು, ದಸರೆ, ಸುತ್ತೂರು ಜಾತ್ರೆ, ರಾಮನಗರದ ಜಾನಪದ ಲೋಕ ಸೇರಿದಂತೆ ರಾಜ್ಯದ ವಿವಿಧೆಡೆ ಕಾರ್ಯಕ್ರಮ ನೀಡಿದ್ದಾರೆ. </p>.<p>ತಮಗಿರುವ 7 ಕುಂಟೆ ಗದ್ದೆಯಲ್ಲಿ ಭತ್ತ ಬೆಳೆಯುವ ಅವರು, ಈಗಲೂ ಪತಿ ಸಿದ್ದಯ್ಯ ಅವರೊಂದಿಗೆ ಕೂಲಿ ಕೆಲಸಕ್ಕೆ ಹೋಗುತ್ತಾರೆ. 2015–20ರ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಅವರು, ಜನಸೇವೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. </p>.<p>‘ಚಿಕ್ಕವಯಸ್ಸಿನಲ್ಲಿ ದೊಡ್ಡಮ್ಮ ಪುಟ್ಟನಂಜಮ್ಮ ಅವ್ರೇ ಪದ ಕಲಿಸಿದ್ರು. 30–35 ವರ್ಷದಿಂದ ಹಾಡುತ್ತಿದ್ದೇನೆ. ಕೂಲಿ ಮಾಡಿ, ಹಾಡಿ ಮಕ್ಕಳನ್ನು ಡಿಗ್ರಿ ಓದಿಸಿವ್ನಿ. ಈಗ ಪ್ರಶಸ್ತಿ ಕೊಟ್ಟಿರೋದಕ್ಕೆ ಸಂತೋಷ ಆಗುತ್ತಿದೆ’ ಎಂದು ಚನ್ನಾಜಮ್ಮ ‘ಪ್ರಜಾವಾಣಿ’ಯೊಂದಿಗೆ ಖುಷಿ ಹಂಚಿಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಜಾನಪದ ಕಲಾವಿದೆ ಸೋಬಾನೆ ಚನ್ನಾಜಮ್ಮ ಅವರು 2025ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕಾಡೆಮಿಯು ಮಂಗಳವಾರ ಆಯ್ಕೆ ಘೋಷಿಸಿದೆ.</p>.<p>ತಿ.ನರಸೀಪುರ ತಾಲ್ಲೂಕಿನ ಯಾಚೇನಹಳ್ಳಿಯ ಚನ್ನಾಜಮ್ಮ ಅವರ ನಾಲಿಗೆಯಲ್ಲಿ ಸೋಬಾನೆ ಪದಗಳು ನಲಿಯುತ್ತವೆ. ಹುಟ್ಟಿನಿಂದ ಸಾವಿನವರೆಗಿನ ಎಲ್ಲ ಕಾರ್ಯಗಳಿಗೆ ಸುತ್ತಲಿನ ಗ್ರಾಮಸ್ಥರಿಗೆ ಅವರ ಪದಗಳು ಬೇಕು.</p>.<p>ರಾಗಿ ಬೀಸುವುದು, ಕಳೆ ಕೀಳುವುದು ಸೇರಿದಂತೆ ಕೃಷಿ ಕಾಯಕ ಮಾಡುವಾಗ ಹಾಡುವ ಅವರು, ಮಲೆ ಮಹದೇಶ್ವರ, ಪಾರ್ವತಮ್ಮ, ಭೈರವೇಶ್ವರ, ವೆಂಕಟರಮಣ ಸೇರಿ ಎಲ್ಲ ದೇವರ ಹಾಡುಗಳನ್ನು ಹಾಡುತ್ತಾರೆ.</p>.<p>ಆಕಾಶವಾಣಿಯಲ್ಲೂ ಕಾರ್ಯಕ್ರಮಗಳನ್ನು ನಿರಂತರವಾಗಿ ನೀಡಿರುವ ಅವರು, ದಸರೆ, ಸುತ್ತೂರು ಜಾತ್ರೆ, ರಾಮನಗರದ ಜಾನಪದ ಲೋಕ ಸೇರಿದಂತೆ ರಾಜ್ಯದ ವಿವಿಧೆಡೆ ಕಾರ್ಯಕ್ರಮ ನೀಡಿದ್ದಾರೆ. </p>.<p>ತಮಗಿರುವ 7 ಕುಂಟೆ ಗದ್ದೆಯಲ್ಲಿ ಭತ್ತ ಬೆಳೆಯುವ ಅವರು, ಈಗಲೂ ಪತಿ ಸಿದ್ದಯ್ಯ ಅವರೊಂದಿಗೆ ಕೂಲಿ ಕೆಲಸಕ್ಕೆ ಹೋಗುತ್ತಾರೆ. 2015–20ರ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಅವರು, ಜನಸೇವೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. </p>.<p>‘ಚಿಕ್ಕವಯಸ್ಸಿನಲ್ಲಿ ದೊಡ್ಡಮ್ಮ ಪುಟ್ಟನಂಜಮ್ಮ ಅವ್ರೇ ಪದ ಕಲಿಸಿದ್ರು. 30–35 ವರ್ಷದಿಂದ ಹಾಡುತ್ತಿದ್ದೇನೆ. ಕೂಲಿ ಮಾಡಿ, ಹಾಡಿ ಮಕ್ಕಳನ್ನು ಡಿಗ್ರಿ ಓದಿಸಿವ್ನಿ. ಈಗ ಪ್ರಶಸ್ತಿ ಕೊಟ್ಟಿರೋದಕ್ಕೆ ಸಂತೋಷ ಆಗುತ್ತಿದೆ’ ಎಂದು ಚನ್ನಾಜಮ್ಮ ‘ಪ್ರಜಾವಾಣಿ’ಯೊಂದಿಗೆ ಖುಷಿ ಹಂಚಿಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>