‘ಕ್ರೆಸ್ಟ್’ನವರು ಸೌರವಿದ್ಯುತ್ ಮತ್ತು ಜೈವಿಕ ಇಂಧನ ಬಳಸಿ ವಿದ್ಯುತ್ ಉತ್ಪಾದಿಸುವ ತಂತ್ರಜ್ಞಾನವನ್ನು ಇಲ್ಲಿ ಬಳಸಿದೆ. ಅರಣ್ಯದಲ್ಲಿ ಹೇರಳವಾಗಿ ಸಿಗುವ ಹೊಂಗೆ, ಬೇವು, ಹಿಪ್ಪೆ, ಅರಳಿ ಬೀಜಗಳಿಂದ ಜೈವಿಕ ಇಂಧನ ತಯಾರಿಸಿ ಅದನ್ನು ಜನರೇಟರ್ಗೆ ಪೂರೈಸಿ ವಿದ್ಯುತ್ ಉತ್ಪಾದಿಸಲಾಗುತ್ತದೆ. ಇದನ್ನು ಪ್ರಾಯೋಗಿಕವಾಗಿ ಹುಣಸೂರಿನ ಹೆಮ್ಮಿಗೆ ಹಾಡಿಯಲ್ಲಿ ಎನ್ಐಇ ಪ್ರಾಧ್ಯಾಪಕ ಶ್ಯಾಮಸುಂದರ್ ನೇತೃತ್ವದಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಡೀಡ್ ಸಂಸ್ಥೆ ನಿರ್ದೇಶಕ ಶ್ರೀಕಾಂತ್ ಅವರ ಪ್ರಯತ್ನದಿಂದ ನಾಗರಹೊಳೆ ಅರಣ್ಯದಂಚಿನ ಗಿರಿಜನ ಹಾಡಿಗಳಲ್ಲಿ ಈ ಯೋಜನೆ ಜಾರಿಗೊಂಡಿದೆ.