ಮೈಸೂರು: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಬಿ.ರಿಷ್ಯಂತ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಇಲ್ಲಿನ ಎಸ್.ಪಿ ಕಚೇರಿಯಲ್ಲಿ ಎಎಸ್ಪಿ ಸ್ನೇಹಾ ಅವರು ಅಧಿಕಾರ ಹಸ್ತಾಂತರಿಸಿದರು.
2015ನೇ ಬ್ಯಾಚಿನ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಇವರು ಮಂಗಳೂರಿನಲ್ಲಿ ಎಎಸ್ಪಿಯಾಗಿ, ಬಾಗಲಕೋಟೆಯಲ್ಲಿ ಎಸ್.ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಅಧಿಕಾರ ಸ್ವೀಕರಿಸಿದ ತಕ್ಷಣವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿನ ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ಕಲೆ ಹಾಕಿದರು.