<p><strong>ಸರಗೂರು</strong>: ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿರುವ ತಾಯಿ ಚಿಕ್ಕದೇವಮ್ಮ ದೇವತೆಗೆ ಹೊಸ ವರ್ಷದ ಹಿನ್ನೆಲೆಯಲ್ಲಿ ಗುರುವಾರ ವಿಶೇಷ ಪೂಜೆ ನಡೆಯಿತು. ಇದಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.</p>.<p>ಬೆಳಿಗ್ಗೆ ಧನುರ್ಮಾಸ ಪೂಜೆ ನಡೆದ ಬಳಿಕ ದೇವತೆಗೆ ವಿಶೇಷ ಅಭಿಷೇಕ ಮಾಡಲಾಯಿತು. ದೇವತೆಯನ್ನು ವಿವಿಧ ಹೂವುಗಳಿಂದ ಮಧುವಣಗಿತ್ತಿಯಂತೆ ಅಲಂಕರಿಸಲಾಯಿತು. ಭಕ್ತರು ದೇವರ ದರ್ಶನ ಪಡೆದರು.</p>.<p>ದೇವಸ್ಥಾನದ ಪಾದದ ಬಳಿಯಲ್ಲಿ ದೇವತೆಗೆ ಮೊದಲಿಗೆ ಪೂಜೆ ಸಲ್ಲಿಸಿದ ಭಕ್ತರು ಮೆಟ್ಟಿಲುಗಳನ್ನು ಏರಿ ದೇವತೆಯ ಬಳಿ ಬಂದು, ಚಿಕ್ಕಮ್ಮ ಚಿಕ್ಕದೇವಿಗೆ ವಿಶೇಷ ಪೂಜೆ ಸಲ್ಲಿಸಿ, ದೇವತೆಯನ್ನು ಕಣ್ತುಂಬಿಕೊಂಡರು. ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಹರಕೆ ತೀರಿಸಿ ದೇವರ ಕೃಪೆಗೆ ಪಾತ್ರರಾದರು.</p>.<p>ವರ್ಷದಿಂದ ವರ್ಷಕ್ಕೆ ಹೊಸ ವರುಷವಂತೂ ಜನದಟ್ಟಣೆ ಹೆಚ್ಚಾಗುತ್ತಿದೆ ಎನ್ನುತ್ತಾರೆ ಚಿಕ್ಕದೇವಮ್ಮ ಬೆಟ್ಟದ ಪಾರುಪತ್ತೇದಾರ ಶಾಂತಿಪುರ ಮಹದೇವಸ್ವಾಮಿ.</p>.<p>ಹೊಸ ವರ್ಷದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರಗೂರು ಪೊಲೀಸ್ ಠಾಣೆಯ ಸಿಬ್ಬಂದಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರೂ ಟ್ರಾಫಿಕ್ ಜಾಮ್ನಿಂದಾಗಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು.</p>.<p>ದೇವಸ್ಥಾನದ ಪಾರುಪತ್ತೇದಾರ ಶಾಂತಿಪುರ ಮಹದೇವಸ್ವಾಮಿ, ಅರ್ಚಕರಾದ ಮನು, ಪ್ರಸನ್ನ, ಮಣಿ, ಸಂತೋಷ್, ಶಿವಕುಮಾರ್, ಲಿಂಗಪ್ಪ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು</strong>: ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿರುವ ತಾಯಿ ಚಿಕ್ಕದೇವಮ್ಮ ದೇವತೆಗೆ ಹೊಸ ವರ್ಷದ ಹಿನ್ನೆಲೆಯಲ್ಲಿ ಗುರುವಾರ ವಿಶೇಷ ಪೂಜೆ ನಡೆಯಿತು. ಇದಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.</p>.<p>ಬೆಳಿಗ್ಗೆ ಧನುರ್ಮಾಸ ಪೂಜೆ ನಡೆದ ಬಳಿಕ ದೇವತೆಗೆ ವಿಶೇಷ ಅಭಿಷೇಕ ಮಾಡಲಾಯಿತು. ದೇವತೆಯನ್ನು ವಿವಿಧ ಹೂವುಗಳಿಂದ ಮಧುವಣಗಿತ್ತಿಯಂತೆ ಅಲಂಕರಿಸಲಾಯಿತು. ಭಕ್ತರು ದೇವರ ದರ್ಶನ ಪಡೆದರು.</p>.<p>ದೇವಸ್ಥಾನದ ಪಾದದ ಬಳಿಯಲ್ಲಿ ದೇವತೆಗೆ ಮೊದಲಿಗೆ ಪೂಜೆ ಸಲ್ಲಿಸಿದ ಭಕ್ತರು ಮೆಟ್ಟಿಲುಗಳನ್ನು ಏರಿ ದೇವತೆಯ ಬಳಿ ಬಂದು, ಚಿಕ್ಕಮ್ಮ ಚಿಕ್ಕದೇವಿಗೆ ವಿಶೇಷ ಪೂಜೆ ಸಲ್ಲಿಸಿ, ದೇವತೆಯನ್ನು ಕಣ್ತುಂಬಿಕೊಂಡರು. ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಹರಕೆ ತೀರಿಸಿ ದೇವರ ಕೃಪೆಗೆ ಪಾತ್ರರಾದರು.</p>.<p>ವರ್ಷದಿಂದ ವರ್ಷಕ್ಕೆ ಹೊಸ ವರುಷವಂತೂ ಜನದಟ್ಟಣೆ ಹೆಚ್ಚಾಗುತ್ತಿದೆ ಎನ್ನುತ್ತಾರೆ ಚಿಕ್ಕದೇವಮ್ಮ ಬೆಟ್ಟದ ಪಾರುಪತ್ತೇದಾರ ಶಾಂತಿಪುರ ಮಹದೇವಸ್ವಾಮಿ.</p>.<p>ಹೊಸ ವರ್ಷದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರಗೂರು ಪೊಲೀಸ್ ಠಾಣೆಯ ಸಿಬ್ಬಂದಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರೂ ಟ್ರಾಫಿಕ್ ಜಾಮ್ನಿಂದಾಗಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು.</p>.<p>ದೇವಸ್ಥಾನದ ಪಾರುಪತ್ತೇದಾರ ಶಾಂತಿಪುರ ಮಹದೇವಸ್ವಾಮಿ, ಅರ್ಚಕರಾದ ಮನು, ಪ್ರಸನ್ನ, ಮಣಿ, ಸಂತೋಷ್, ಶಿವಕುಮಾರ್, ಲಿಂಗಪ್ಪ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>