<p><strong>ಮೈಸೂರು</strong>: ‘ಆಟೋಟಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನೀಡುತ್ತವೆ. ಕ್ರೀಡಾಪಟುಗಳು ಸ್ಪರ್ಧಾ ಸ್ಫೂರ್ತಿಯಿಂದ ಪಾಲ್ಗೊಳ್ಳಿ’ ಎಂದು ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಹೇಳಿದರು.</p>.<p>ಕಾಲೇಜಿನಲ್ಲಿ ಗುರುವಾರ ಶಿವರಾತ್ರಿ ರಾಜೇಂದ್ರ ಶ್ರೀಗಳ 109ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಅಂತರ ಕಾಲೇಜು ಪುರುಷರ ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಮಹಿಳೆಯರ ಥ್ರೋಬಾಲ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ನಗರ ವಲಯದಲ್ಲಿ ಕೇಂದ್ರೀಕೃತವಾಗಿದ್ದ ಶಿಕ್ಷಣ ವ್ಯವಸ್ಥೆಯನ್ನು ಗ್ರಾಮೀಣ ವಲಯಕ್ಕೆ ಕೊಂಡೊಯ್ದು ಶಿಕ್ಷಣ ಕ್ರಾಂತಿ ಮಾಡಿದ್ದು ರಾಜೇಂದ್ರ ಶ್ರೀಗಳು. ಇದರಿಂದ ಗ್ರಾಮೀಣ ಪ್ರದೇಶಗಳಲ್ಲೂ ಉತ್ತಮ ಶಿಕ್ಷಣ ದೊರೆಯುವಂತಾಯಿತು’ ಎಂದು ಸ್ಮರಿಸಿದರು.</p>.<p>ಕ್ರೀಡಾಕೂಟದ ವಾಲಿಬಾಲ್ ಟೂರ್ನಿಯಲ್ಲಿ 25, ಬಾಲ್ ಬ್ಯಾಡ್ಮಿಂಟನ್ನಲ್ಲಿ 12 ಹಾಗೂ ಥ್ರೋಬಾಲ್ನಲ್ಲಿ 19 ತಂಡಗಳು ಪಾಲ್ಗೊಂಡವು.</p>.<p>ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಪ್ರಭು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್. ಸೋಮಶೇಖರ, ಪರೀಕ್ಷಾ ನಿಯಂತ್ರಣಾಧಿಕಾರಿ ಬಿ. ಪ್ರಭುಸ್ವಾಮಿ, ಎನ್ಸಿಸಿ ಅಧಿಕಾರಿ ಎಲ್. ವಿನಯ್ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಎಂ. ಕಾರ್ತಿಕ್, ನಿರಂಜನ್, ಅರವಿಂದ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಆಟೋಟಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನೀಡುತ್ತವೆ. ಕ್ರೀಡಾಪಟುಗಳು ಸ್ಪರ್ಧಾ ಸ್ಫೂರ್ತಿಯಿಂದ ಪಾಲ್ಗೊಳ್ಳಿ’ ಎಂದು ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಹೇಳಿದರು.</p>.<p>ಕಾಲೇಜಿನಲ್ಲಿ ಗುರುವಾರ ಶಿವರಾತ್ರಿ ರಾಜೇಂದ್ರ ಶ್ರೀಗಳ 109ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಅಂತರ ಕಾಲೇಜು ಪುರುಷರ ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಮಹಿಳೆಯರ ಥ್ರೋಬಾಲ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ನಗರ ವಲಯದಲ್ಲಿ ಕೇಂದ್ರೀಕೃತವಾಗಿದ್ದ ಶಿಕ್ಷಣ ವ್ಯವಸ್ಥೆಯನ್ನು ಗ್ರಾಮೀಣ ವಲಯಕ್ಕೆ ಕೊಂಡೊಯ್ದು ಶಿಕ್ಷಣ ಕ್ರಾಂತಿ ಮಾಡಿದ್ದು ರಾಜೇಂದ್ರ ಶ್ರೀಗಳು. ಇದರಿಂದ ಗ್ರಾಮೀಣ ಪ್ರದೇಶಗಳಲ್ಲೂ ಉತ್ತಮ ಶಿಕ್ಷಣ ದೊರೆಯುವಂತಾಯಿತು’ ಎಂದು ಸ್ಮರಿಸಿದರು.</p>.<p>ಕ್ರೀಡಾಕೂಟದ ವಾಲಿಬಾಲ್ ಟೂರ್ನಿಯಲ್ಲಿ 25, ಬಾಲ್ ಬ್ಯಾಡ್ಮಿಂಟನ್ನಲ್ಲಿ 12 ಹಾಗೂ ಥ್ರೋಬಾಲ್ನಲ್ಲಿ 19 ತಂಡಗಳು ಪಾಲ್ಗೊಂಡವು.</p>.<p>ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಪ್ರಭು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್. ಸೋಮಶೇಖರ, ಪರೀಕ್ಷಾ ನಿಯಂತ್ರಣಾಧಿಕಾರಿ ಬಿ. ಪ್ರಭುಸ್ವಾಮಿ, ಎನ್ಸಿಸಿ ಅಧಿಕಾರಿ ಎಲ್. ವಿನಯ್ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಎಂ. ಕಾರ್ತಿಕ್, ನಿರಂಜನ್, ಅರವಿಂದ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>