<p>ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಕ್ರೀಡಾ ವಿದ್ಯಾರ್ಥಿ ವೇತನದ ಹೆಚ್ಚಳಕ್ಕೆ ಶುಕ್ರವಾರ ನಡೆದ ವಿ.ವಿ.ಯ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ.</p>.<p>‘2020-2021ನೇ ಸಾಲಿನಿಂದ ವಿಶ್ವವಿದ್ಯಾನಿಲಯ ಉತ್ತಮ ಕ್ರೀಡಾಪಟುಗಳಿಗೆ ನೀಡುವ ಕ್ರೀಡಾ ವಿದ್ಯಾರ್ಥಿ ವೇತನವನ್ನು ₹ 3 ಸಾವಿರದಿಂದ ₹ 5 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಸಿಂಡಿಕೇಟ್ ಸದಸ್ಯ ಇ.ಸಿ.ನಿಂಗರಾಜಗೌಡ ಸಭೆಯ ಆರಂಭದಲ್ಲೇ ಸಲಹೆ ನೀಡಿದರು.</p>.<p>ಈ ವಿಷಯದ ಬಗ್ಗೆ ಚರ್ಚೆ ನಡೆಸಿದ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್ ಅಧ್ಯಕ್ಷತೆಯ ಸಿಂಡಿಕೇಟ್ ಸಭೆ ಅನುಮೋದನೆ ನೀಡಿತು.</p>.<p>‘ನೂರನೇ ಘಟಿಕೋತ್ಸವದ ನೆನಪಿಗಾಗಿ ವಿ.ವಿ.ಯ ಸಂಶೋಧನೆ ಮತ್ತು ಶೈಕ್ಷಣಿಕ ಸಾಧನೆಗಳನ್ನು ಪರಿಚಯಿಸಲು ಮಾನಸ-2021 ವಸ್ತು ಪ್ರದರ್ಶನ ಏರ್ಪಡಿಸಲು ಸಹ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ’ ಎಂದು ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಅಂಗ ಕಾಲೇಜು: ಅನುಮೋದನೆ</p>.<p>ಚಾಮರಾಜನಗರ ಜಿಲ್ಲೆಯ ತೆರಕಣಾಂಬಿ ಹಾಗೂ ಹಾಸನ ಜಿಲ್ಲೆಯ ಹೆತ್ತೂರಿನ ಪದವಿ ಕಾಲೇಜುಗಳನ್ನು ಮೈಸೂರು ವಿ.ವಿ.ಯ ಅಂಗ ಕಾಲೇಜುಗಳನ್ನಾಗಿ ಪಡೆಯಲು ಸಹ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ.</p>.<p>ಈ ಎರಡೂ ಕಾಲೇಜುಗಳನ್ನು ಮೈಸೂರು ವಿ.ವಿ. ಅಂಗ ಕಾಲೇಜುಗಳನ್ನಾಗಿ ಮಾಡಿಕೊಳ್ಳುವಂತೆ ಸರ್ಕಾರ ಪತ್ರ ಬರೆದು ಸೂಚಿಸಿತ್ತು. ಸಿಂಡಿಕೇಟ್ ಸಭೆಯಲ್ಲಿ ಈ ಪತ್ರ ಮಂಡಿಸಿ, ಚರ್ಚಿಸಿದ ಬಳಿಕ ಅನುಮೋದನೆ ನೀಡಲಾಗಿದೆ ಎಂದು ಹೇಮಂತ್ಕುಮಾರ್ ತಿಳಿಸಿದರು.</p>.<p>‘ಈ ಎರಡು ಕಾಲೇಜುಗಳನ್ನು ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕೌಶಲ ಅಭಿವೃದ್ಧಿ ಕಾಲೇಜುಗಳಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ತಜ್ಞರ ಸಮಿತಿ ರಚನೆ ಮಾಡಿ, ಈ ಕಾಲೇಜುಗಳಲ್ಲಿ ಕೌಶಲ ಕೋರ್ಸ್ಗಳನ್ನು ಆರಂಭಿಸುವ ಬಗ್ಗೆ ವರದಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ’ ಎಂದು ಕುಲಪತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಕ್ರೀಡಾ ವಿದ್ಯಾರ್ಥಿ ವೇತನದ ಹೆಚ್ಚಳಕ್ಕೆ ಶುಕ್ರವಾರ ನಡೆದ ವಿ.ವಿ.ಯ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ.</p>.<p>‘2020-2021ನೇ ಸಾಲಿನಿಂದ ವಿಶ್ವವಿದ್ಯಾನಿಲಯ ಉತ್ತಮ ಕ್ರೀಡಾಪಟುಗಳಿಗೆ ನೀಡುವ ಕ್ರೀಡಾ ವಿದ್ಯಾರ್ಥಿ ವೇತನವನ್ನು ₹ 3 ಸಾವಿರದಿಂದ ₹ 5 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಸಿಂಡಿಕೇಟ್ ಸದಸ್ಯ ಇ.ಸಿ.ನಿಂಗರಾಜಗೌಡ ಸಭೆಯ ಆರಂಭದಲ್ಲೇ ಸಲಹೆ ನೀಡಿದರು.</p>.<p>ಈ ವಿಷಯದ ಬಗ್ಗೆ ಚರ್ಚೆ ನಡೆಸಿದ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್ ಅಧ್ಯಕ್ಷತೆಯ ಸಿಂಡಿಕೇಟ್ ಸಭೆ ಅನುಮೋದನೆ ನೀಡಿತು.</p>.<p>‘ನೂರನೇ ಘಟಿಕೋತ್ಸವದ ನೆನಪಿಗಾಗಿ ವಿ.ವಿ.ಯ ಸಂಶೋಧನೆ ಮತ್ತು ಶೈಕ್ಷಣಿಕ ಸಾಧನೆಗಳನ್ನು ಪರಿಚಯಿಸಲು ಮಾನಸ-2021 ವಸ್ತು ಪ್ರದರ್ಶನ ಏರ್ಪಡಿಸಲು ಸಹ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ’ ಎಂದು ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಅಂಗ ಕಾಲೇಜು: ಅನುಮೋದನೆ</p>.<p>ಚಾಮರಾಜನಗರ ಜಿಲ್ಲೆಯ ತೆರಕಣಾಂಬಿ ಹಾಗೂ ಹಾಸನ ಜಿಲ್ಲೆಯ ಹೆತ್ತೂರಿನ ಪದವಿ ಕಾಲೇಜುಗಳನ್ನು ಮೈಸೂರು ವಿ.ವಿ.ಯ ಅಂಗ ಕಾಲೇಜುಗಳನ್ನಾಗಿ ಪಡೆಯಲು ಸಹ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ.</p>.<p>ಈ ಎರಡೂ ಕಾಲೇಜುಗಳನ್ನು ಮೈಸೂರು ವಿ.ವಿ. ಅಂಗ ಕಾಲೇಜುಗಳನ್ನಾಗಿ ಮಾಡಿಕೊಳ್ಳುವಂತೆ ಸರ್ಕಾರ ಪತ್ರ ಬರೆದು ಸೂಚಿಸಿತ್ತು. ಸಿಂಡಿಕೇಟ್ ಸಭೆಯಲ್ಲಿ ಈ ಪತ್ರ ಮಂಡಿಸಿ, ಚರ್ಚಿಸಿದ ಬಳಿಕ ಅನುಮೋದನೆ ನೀಡಲಾಗಿದೆ ಎಂದು ಹೇಮಂತ್ಕುಮಾರ್ ತಿಳಿಸಿದರು.</p>.<p>‘ಈ ಎರಡು ಕಾಲೇಜುಗಳನ್ನು ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕೌಶಲ ಅಭಿವೃದ್ಧಿ ಕಾಲೇಜುಗಳಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ತಜ್ಞರ ಸಮಿತಿ ರಚನೆ ಮಾಡಿ, ಈ ಕಾಲೇಜುಗಳಲ್ಲಿ ಕೌಶಲ ಕೋರ್ಸ್ಗಳನ್ನು ಆರಂಭಿಸುವ ಬಗ್ಗೆ ವರದಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ’ ಎಂದು ಕುಲಪತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>