ನಂಜನಗೂಡು: ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಬುಧವಾರ 34 ಹುಂಡಿಗಳ ಎಣಿಕೆ ಕಾರ್ಯ ನಡೆಸಿದ್ದು, ₹1.77 ಕೋಟಿ ಸಂಗ್ರಹವಾಗಿದೆ.
ನಗದು ₹1,77,08,710, 65 ಗ್ರಾಂ ಚಿನ್ನಾಭರಣ, 3.5 ಕೆ.ಜಿ ಬೆಳ್ಳಿ ಹಾಗೂ 64 ವಿದೇಶಿ ಕರೆನ್ಸಿಗಳು ದೊರೆತಿವೆ.
ಕೆನರಾ ಬ್ಯಾಂಕ್ ಹಾಗೂ ದೇವಾಲಯದ ಸಿಬ್ಬಂದಿ, ಸ್ವಸಹಾಯ ಸಂಘದ ನೂರಕ್ಕೂ ಹೆಚ್ಚು ಸದಸ್ಯೆಯರು ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು.
ದೇವಾಲಯದ ಇಒ ಜಗದೀಶ್ ಕುಮಾರ್, ಲೆಕ್ಕಾಧಿಕಾರಿ ಗುರುಮಲ್ಲಯ್ಯ, ಕೆನರಾ ಬ್ಯಾಕ್ ವ್ಯವಸ್ಥಾಪಕಿ ಲಕ್ಷ್ಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.