<p><strong>ಮೈಸೂರು</strong>: ‘ಕೋವಿಡ್ನ 3ನೇ ಅಲೆ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವುದರಿಂದ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಬಹುಆಯ್ಕೆಯ ಪ್ರಶ್ನೆಗಳ ಮಾದರಿಯಲ್ಲಿ; ಸಿಇಟಿ ಹಾಗೂ ನೀಟ್ ಪರೀಕ್ಷೆಗಳಂತೆ ಒಂದೇ ದಿನ ಎರಡು ಅವಧಿಯಲ್ಲಿ ನಡೆಸುವುದು ಸೂಕ್ತ’ ಎಂದುವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸಲಹೆ ನೀಡಿದ್ದಾರೆ.</p>.<p>ಪರೀಕ್ಷೆಗೂ ಮುನ್ನ ಶಿಕ್ಷಕರು, ಸಿಬ್ಬಂದಿ ಹಾಗೂ 18 ವರ್ಷದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಪರೀಕ್ಷೆ ಆರಂಭವಾಗುವ 72 ಗಂಟೆಗಳಿಗೂ ಮುನ್ನ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿ, ಸೋಂಕಿನ ನೆಗೆಟಿವ್ ದೃಢೀಕರಣದೊಂದಿಗೆ ಪರೀಕ್ಷೆಗೆ ಹಾಜರಾಗಲು ಕ್ರಮವಹಿಸುವುದು ಸೂಕ್ತ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಅನುದಾನರಹಿತ ಸಂಸ್ಥೆಗಳ ಬೋಧಕ– ಬೋಧಕೇತರ ಸಿಬ್ಬಂದಿಗೆ 14 ತಿಂಗಳಿಂದ ವೇತನ ನೀಡಿಲ್ಲ. ಮಾಸಿಕ ₹20 ಸಾವಿರದಂತೆ ವೇತನವನ್ನು ಪರಿಹಾರ ರೂಪದಲ್ಲಿ ಸರ್ಕಾರ ನೀಡಬೇಕು. 2019-20, 2020-21ನೇ ಸಾಲಿನ ಸುಮಾರು ₹750 ಕೋಟಿ ಆರ್ಟಿಇ ಬಾಕಿ ಹಣವನ್ನು ಈ ಸಂಸ್ಥೆಗಳಿಗೆ ಕೂಡಲೇ ಬಿಡುಗಡೆಗೊಳಿಸಬೇಕು. ಶುಲ್ಕ ಮತ್ತು ತೆರಿಗೆಗಳಲ್ಲಿ ಶೇ 30ರಷ್ಟು ವಿನಾಯಿತಿಯನ್ನು ಈ ಶಿಕ್ಷಣ ಸಂಸ್ಥೆಗಳಿಗೆ ನೀಡಬೇಕು ಎಂದಿದ್ದಾರೆ.</p>.<p>ಶಿಕ್ಷಣ ಇಲಾಖೆ ಸಿಬ್ಬಂದಿಯಲ್ಲಿ ಮಹಿಳೆಯರಿಗೆ 45 ವರ್ಷ ಮತ್ತು ಪುರುಷರಿಗೆ 50 ವರ್ಷ ಮೀರಿದವರಿಗೆ ಹಾಗೂ 2 ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ಕೋವಿಡ್ ಕಾರ್ಯದ ನಿಯೋಜನೆಯಿಂದ ವಿನಾಯಿತಿ ನೀಡಬೇಕು. ಕರ್ತವ್ಯದಲ್ಲಿದ್ದಾಗ ಕೋವಿಡ್ನಿಂದ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸಬೇಕು ಎಂದು ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕೋವಿಡ್ನ 3ನೇ ಅಲೆ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವುದರಿಂದ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಬಹುಆಯ್ಕೆಯ ಪ್ರಶ್ನೆಗಳ ಮಾದರಿಯಲ್ಲಿ; ಸಿಇಟಿ ಹಾಗೂ ನೀಟ್ ಪರೀಕ್ಷೆಗಳಂತೆ ಒಂದೇ ದಿನ ಎರಡು ಅವಧಿಯಲ್ಲಿ ನಡೆಸುವುದು ಸೂಕ್ತ’ ಎಂದುವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸಲಹೆ ನೀಡಿದ್ದಾರೆ.</p>.<p>ಪರೀಕ್ಷೆಗೂ ಮುನ್ನ ಶಿಕ್ಷಕರು, ಸಿಬ್ಬಂದಿ ಹಾಗೂ 18 ವರ್ಷದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಪರೀಕ್ಷೆ ಆರಂಭವಾಗುವ 72 ಗಂಟೆಗಳಿಗೂ ಮುನ್ನ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿ, ಸೋಂಕಿನ ನೆಗೆಟಿವ್ ದೃಢೀಕರಣದೊಂದಿಗೆ ಪರೀಕ್ಷೆಗೆ ಹಾಜರಾಗಲು ಕ್ರಮವಹಿಸುವುದು ಸೂಕ್ತ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಅನುದಾನರಹಿತ ಸಂಸ್ಥೆಗಳ ಬೋಧಕ– ಬೋಧಕೇತರ ಸಿಬ್ಬಂದಿಗೆ 14 ತಿಂಗಳಿಂದ ವೇತನ ನೀಡಿಲ್ಲ. ಮಾಸಿಕ ₹20 ಸಾವಿರದಂತೆ ವೇತನವನ್ನು ಪರಿಹಾರ ರೂಪದಲ್ಲಿ ಸರ್ಕಾರ ನೀಡಬೇಕು. 2019-20, 2020-21ನೇ ಸಾಲಿನ ಸುಮಾರು ₹750 ಕೋಟಿ ಆರ್ಟಿಇ ಬಾಕಿ ಹಣವನ್ನು ಈ ಸಂಸ್ಥೆಗಳಿಗೆ ಕೂಡಲೇ ಬಿಡುಗಡೆಗೊಳಿಸಬೇಕು. ಶುಲ್ಕ ಮತ್ತು ತೆರಿಗೆಗಳಲ್ಲಿ ಶೇ 30ರಷ್ಟು ವಿನಾಯಿತಿಯನ್ನು ಈ ಶಿಕ್ಷಣ ಸಂಸ್ಥೆಗಳಿಗೆ ನೀಡಬೇಕು ಎಂದಿದ್ದಾರೆ.</p>.<p>ಶಿಕ್ಷಣ ಇಲಾಖೆ ಸಿಬ್ಬಂದಿಯಲ್ಲಿ ಮಹಿಳೆಯರಿಗೆ 45 ವರ್ಷ ಮತ್ತು ಪುರುಷರಿಗೆ 50 ವರ್ಷ ಮೀರಿದವರಿಗೆ ಹಾಗೂ 2 ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ಕೋವಿಡ್ ಕಾರ್ಯದ ನಿಯೋಜನೆಯಿಂದ ವಿನಾಯಿತಿ ನೀಡಬೇಕು. ಕರ್ತವ್ಯದಲ್ಲಿದ್ದಾಗ ಕೋವಿಡ್ನಿಂದ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸಬೇಕು ಎಂದು ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>