1,580 ವಿದ್ಯಾರ್ಥಿಗಳು ಲಿಖಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗಿಯಾದರು. ತಂಡೋಪತಂಡವಾಗಿ ಕಲಾಮಂದಿರಕ್ಕೆ ಬಂದಿದ್ದ ವಿದ್ಯಾರ್ಥಿ ಸಮೂಹ ಒಂದೆಡೆ ಕುಳಿತು ‘ಪ್ರಜಾವಾಣಿ’ ಪತ್ರಿಕೆ ಓದಿದರು. ಸ್ನೇಹಿತರು ಒಟ್ಟಾಗಿ ಗುಂಪು ಚರ್ಚೆ ನಡೆಸಿದರು.ಮೈಸೂರು ನಗರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶ, ನೆರೆಯ ಚಾಮರಾಜನಗರ, ಹಾಸನ, ಮಡಿಕೇರಿ, ಮಂಡ್ಯ ಜಿಲ್ಲೆಯ 150ಕ್ಕೂ ಹೆಚ್ಚು ಶಾಲೆಗಳ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.