ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು 1994ರಲ್ಲಿ ಹಣಕಾಸು ಸಚಿವನಾಗಿದ್ದಾಗ, ಸಾರಾಯಿ ಅಂಗಡಿ ಬೇಡ, ಹೆಂಡದಂಗಡಿ ಬೇಡ, ವಸತಿ ಶಾಲೆ ಬೇಕು ಎನ್ನುವುದು ದಸಂಸದವರ ಬೇಡಿಕೆ ಹಾಗೂ ಘೋಷಣೆಯಾಗಿತ್ತು. ನಾನು ಅವರ ಸಂಪರ್ಕದಲ್ಲಿ ಇದ್ದಿದ್ದರಿಂದ ಹಾಗೂ ಗ್ರಾಮೀಣ ಪ್ರದೇಶದಿಂದ ಬಂದವನಾಗಿದ್ದರಿಂದ, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ರೈತರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಕಾರಣದಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಯಿತು’ ಎಂದು ನೆನೆದರು.