ಮೈಸೂರು: ಶಾಸಕ ಜಿ.ಟಿ.ದೇವೇಗೌಡರನಡೆ, ಮೀನಿನ ಹೆಜ್ಜೆ ಎರಡನ್ನೂ ಕಂಡು ಹಿಡಿಯಲು ಆಗವುದಿಲ್ಲ ಎಂದು ನಾನು ಹಿಂದೆಯೇ ಹೇಳಿದ್ದೆ.
- ಜೆಡಿಎಸ್ನಲ್ಲೇ ಇರುವುದಾಗಿ ಹೇಳಿರುವ ಜಿಟಿಡಿ ಅವರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೇಲಿನಂತೆ ಪ್ರತಿಕ್ರಿಯಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, 'ಜಿಟಿಡಿಜೆಡಿಎಸ್ನಲ್ಲೇ ಉಳಿದಿದ್ದರಲ್ಲಿ ವಿಶೇಷತೆ ಏನೂ ಇಲ್ಲ. ಬಿಜೆಪಿಯವರು ಪಕ್ಷಕ್ಕೆ ಬರುವಂತೆ ಅವರನ್ನು ಕರೆದಿರಲಿಲ್ಲ. ಕಾಂಗ್ರೆಸ್ನವರು ಕರೆದಿದ್ದರೋ, ಇಲ್ಲವೋ ನನಗೆ ಗೊತ್ತಿಲ್ಲ. ಆದರೆ, ನಾನಂತೂ ಅವರನ್ನು ಬಿಜೆಪಿಗೆ ಕರೆದಿರಲಿಲ್ಲ' ಎಂದರು.
'ಜಿಲ್ಲಾ ಉಸ್ತುವಾರಿ ಸಚಿವನಾಗಿ ಎಲ್ಲ ಶಾಸಕರೊಂದಿಗೂ ಆತ್ಮೀಯವಾಗಿ ಇದ್ದೇನೆ' ಎಂದು ಪ್ರತಿಕ್ರಿಯಿಸಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರವಲ್ಲ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ನಮಗೆ ಸಮರ್ಥ ಅಭ್ಯರ್ಥಿಗಳು ಇದ್ದಾರೆ. ಮುಂದಿನ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.