<p><strong>ಮೈಸೂರು</strong>: ‘ತಿ.ನರಸೀಪುರದ ರೇಷ್ಮೆ ಕಾರ್ಖಾನೆ ಆವರಣದಲ್ಲಿ ಮರಗಳನ್ನು ಕಡಿದು ಕ್ರೀಡಾಂಗಣ ನಿರ್ಮಿಸುವ ಮೂಲಕ ಕಾರ್ಖಾನೆ ಹಾಗೂ ಪರಿಸರಕ್ಕೆ ಧಕ್ಕೆ ತರುವ ಯತ್ನವನ್ನು ಕೈಬಿಡದಿದ್ದರೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಬೇಕಾಗುತ್ತದೆ’ ಎಂದು ಮೈಸೂರು ಗ್ರಾಹಕರ ಪರಿಷತ್ ಎಚ್ಚರಿಸಿದೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ ಅಧ್ಯಕ್ಷ ದಿನೇಶ್, ‘ನಾವು ಕ್ರೀಡಾಂಗಣ ನಿರ್ಮಾಣದ ವಿರುದ್ಧವಲ್ಲ. ಆದರೆ ಆಯ್ಕೆ ಮಾಡಿರುವ ಜಾಗ ಸೂಕ್ತವಾದುದಲ್ಲ. ಮೈಸೂರು ರೇಷ್ಮೆ ಸೀರೆಗೆ ಉತ್ತಮ ಬೇಡಿಕೆಯಿದ್ದು, ಅದಕ್ಕೆ ಅಗತ್ಯವಾದ ನೂಲು ನೀಡುವ ಈ ಕಾರ್ಖಾನೆಯನ್ನು ಇನ್ನಷ್ಟು ವಿಸ್ತರಿಸಬೇಕಾಗುತ್ತದೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಸಹ ಸಿಗಲಿದೆ. ಕ್ರೀಡಾಂಗಣ ನಿರ್ಮಿಸುವುದರಿಂದ ಇದಕ್ಕೆ ಅಡ್ಡಿಯಾಗುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಸಂಸ್ಥಾಪಕ ಅಧ್ಯಕ್ಷ ಭಾಮಿ ವಿ. ಶೆಣೈ ಮಾತನಾಡಿ, ‘ಕಾರ್ಖಾನೆಯ 12 ಎಕರೆ ಜಾಗದಲ್ಲಿ 5 ಎಕರೆಯನ್ನು ಕ್ರೀಡಾಂಗಣಕ್ಕೆ ನೀಡಲಾಗುತ್ತಿದೆ. ಇದರ ವಿರುದ್ಧ ಹಲವರು ಧ್ವನಿಯೆತ್ತಿದ್ದರೂ ಹಠಕ್ಕೆ ಬಿದ್ದು ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಸುಮಾರು 550 ಮರಗಳನ್ನು ಕಡಿಯಬೇಕಾಗುತ್ತದೆ. ಮರಗಳು ಹವಾಮಾನ ವೈಪರೀತ್ಯ ತಡೆಯುವ ಕೆಲಸ ಮಾಡುತ್ತಿವೆ. ಈ ಕಾರಣ ಪರಿಷತ್ತು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲು ಚಿಂತಿಸಿದೆ’ ಎಂದರು.</p>.<p>ವಕೀಲ ಅರುಣ್ಕುಮಾರ್ ಮಾತನಾಡಿ, ‘ಮೈಸೂರು ರೇಷ್ಮೆ ಸೀರೆಗೆ ತಿ.ನರಸೀಪುರ ಕಾರ್ಖಾನೆಯೇ ಆಧಾರವಾಗಿದೆ. ಇಲ್ಲಿ ನಿತ್ಯ ಆರರಿಂದ ಏಳು ಟನ್ ಕಲ್ಲಿದ್ದಲು ಸುಡುತ್ತಾರೆ. ಇದರಿಂದ ಬರುವ ಹಾರು ಬೂದಿ ಎಲ್ಲೆಡೆ ಹರಡದಂತೆ ಈ ಮರಗಳು ನೋಡಿಕೊಂಡು, ಹವಾಮಾನ ವೈಪರೀತ್ಯ ತಡೆಯುತ್ತಿವೆ. ಇಲ್ಲಿ ಕ್ರೀಡಾಂಗಣ ನಿರ್ಮಿಸಿದರೂ ಕಾರ್ಖಾನೆಯಿಂದ ಬರುವ ಕೆಟ್ಟ ವಾಸನೆ ನಡುವೆ ಕ್ರೀಡೆಗಳು ನಡೆಯವುದು ಅಸಾಧ್ಯ. ಕಾರ್ಖಾನೆಯಲ್ಲಿ ಬಾಯ್ಲರ್ ಸಹ ಇರುವುದರಿಂದ ಅಪಾಯಕಾರಿಯಾಗಿದೆ. ಆದರೂ ಇಲ್ಲಿ ಕ್ರೀಡಾಂಗಣ ನಿರ್ಮಿಸಲು ಹೊರಟಿರುವುದು ಅನುಮಾನ ಮೂಡಿಸುತ್ತದೆ’ ಎಂದು ಹೇಳಿದರು.</p>.<p>ಪರಿಷತ್ನ ಸದಸ್ಯರಾದ ಪ್ರಭಾ ನಂದೀಶ್, ಪ್ರಗ್ಯಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ತಿ.ನರಸೀಪುರದ ರೇಷ್ಮೆ ಕಾರ್ಖಾನೆ ಆವರಣದಲ್ಲಿ ಮರಗಳನ್ನು ಕಡಿದು ಕ್ರೀಡಾಂಗಣ ನಿರ್ಮಿಸುವ ಮೂಲಕ ಕಾರ್ಖಾನೆ ಹಾಗೂ ಪರಿಸರಕ್ಕೆ ಧಕ್ಕೆ ತರುವ ಯತ್ನವನ್ನು ಕೈಬಿಡದಿದ್ದರೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಬೇಕಾಗುತ್ತದೆ’ ಎಂದು ಮೈಸೂರು ಗ್ರಾಹಕರ ಪರಿಷತ್ ಎಚ್ಚರಿಸಿದೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ ಅಧ್ಯಕ್ಷ ದಿನೇಶ್, ‘ನಾವು ಕ್ರೀಡಾಂಗಣ ನಿರ್ಮಾಣದ ವಿರುದ್ಧವಲ್ಲ. ಆದರೆ ಆಯ್ಕೆ ಮಾಡಿರುವ ಜಾಗ ಸೂಕ್ತವಾದುದಲ್ಲ. ಮೈಸೂರು ರೇಷ್ಮೆ ಸೀರೆಗೆ ಉತ್ತಮ ಬೇಡಿಕೆಯಿದ್ದು, ಅದಕ್ಕೆ ಅಗತ್ಯವಾದ ನೂಲು ನೀಡುವ ಈ ಕಾರ್ಖಾನೆಯನ್ನು ಇನ್ನಷ್ಟು ವಿಸ್ತರಿಸಬೇಕಾಗುತ್ತದೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಸಹ ಸಿಗಲಿದೆ. ಕ್ರೀಡಾಂಗಣ ನಿರ್ಮಿಸುವುದರಿಂದ ಇದಕ್ಕೆ ಅಡ್ಡಿಯಾಗುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಸಂಸ್ಥಾಪಕ ಅಧ್ಯಕ್ಷ ಭಾಮಿ ವಿ. ಶೆಣೈ ಮಾತನಾಡಿ, ‘ಕಾರ್ಖಾನೆಯ 12 ಎಕರೆ ಜಾಗದಲ್ಲಿ 5 ಎಕರೆಯನ್ನು ಕ್ರೀಡಾಂಗಣಕ್ಕೆ ನೀಡಲಾಗುತ್ತಿದೆ. ಇದರ ವಿರುದ್ಧ ಹಲವರು ಧ್ವನಿಯೆತ್ತಿದ್ದರೂ ಹಠಕ್ಕೆ ಬಿದ್ದು ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಸುಮಾರು 550 ಮರಗಳನ್ನು ಕಡಿಯಬೇಕಾಗುತ್ತದೆ. ಮರಗಳು ಹವಾಮಾನ ವೈಪರೀತ್ಯ ತಡೆಯುವ ಕೆಲಸ ಮಾಡುತ್ತಿವೆ. ಈ ಕಾರಣ ಪರಿಷತ್ತು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲು ಚಿಂತಿಸಿದೆ’ ಎಂದರು.</p>.<p>ವಕೀಲ ಅರುಣ್ಕುಮಾರ್ ಮಾತನಾಡಿ, ‘ಮೈಸೂರು ರೇಷ್ಮೆ ಸೀರೆಗೆ ತಿ.ನರಸೀಪುರ ಕಾರ್ಖಾನೆಯೇ ಆಧಾರವಾಗಿದೆ. ಇಲ್ಲಿ ನಿತ್ಯ ಆರರಿಂದ ಏಳು ಟನ್ ಕಲ್ಲಿದ್ದಲು ಸುಡುತ್ತಾರೆ. ಇದರಿಂದ ಬರುವ ಹಾರು ಬೂದಿ ಎಲ್ಲೆಡೆ ಹರಡದಂತೆ ಈ ಮರಗಳು ನೋಡಿಕೊಂಡು, ಹವಾಮಾನ ವೈಪರೀತ್ಯ ತಡೆಯುತ್ತಿವೆ. ಇಲ್ಲಿ ಕ್ರೀಡಾಂಗಣ ನಿರ್ಮಿಸಿದರೂ ಕಾರ್ಖಾನೆಯಿಂದ ಬರುವ ಕೆಟ್ಟ ವಾಸನೆ ನಡುವೆ ಕ್ರೀಡೆಗಳು ನಡೆಯವುದು ಅಸಾಧ್ಯ. ಕಾರ್ಖಾನೆಯಲ್ಲಿ ಬಾಯ್ಲರ್ ಸಹ ಇರುವುದರಿಂದ ಅಪಾಯಕಾರಿಯಾಗಿದೆ. ಆದರೂ ಇಲ್ಲಿ ಕ್ರೀಡಾಂಗಣ ನಿರ್ಮಿಸಲು ಹೊರಟಿರುವುದು ಅನುಮಾನ ಮೂಡಿಸುತ್ತದೆ’ ಎಂದು ಹೇಳಿದರು.</p>.<p>ಪರಿಷತ್ನ ಸದಸ್ಯರಾದ ಪ್ರಭಾ ನಂದೀಶ್, ಪ್ರಗ್ಯಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>