ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ (ಚೀನಿ) ಇನ್ನಿಲ್ಲ

Last Updated 25 ಜನವರಿ 2023, 22:00 IST
ಅಕ್ಷರ ಗಾತ್ರ

ಮೈಸೂರು: ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ್‌ ಭಟ್‌ (63) ಬುಧವಾರ ರಾತ್ರಿ ಹೃದಯಾಘಾತದಿಂದ ಇಲ್ಲಿನ ವಿವೇಕಾನಂದನಗರದ ನಿವಾಸದಲ್ಲಿ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಇದ್ದಾರೆ. ರಂಗಾಯಣದ ಸಂಗೀತ ನಿರ್ದೇಶಕರಾಗಿ 30 ವರ್ಷ ಸೇವೆ ಸಲ್ಲಿಸಿದ್ದ ಅವರು, ನೂರಾರು ನಾಟಕಗಳಿಗೆ ಸಂಗೀತ ನೀಡಿದ್ದರು.

ರಂಗಭೀಷ್ಮ ಬಿ.ವಿ.ಕಾರಂತರ ಮೆಚ್ಚಿನ ಶಿಷ್ಯರಾಗಿದ್ದ ಅವರು ‘ಚೀನಿ’ ಎಂದೇ ರಂಗವಲ ಯದಲ್ಲಿ ಹೆಸರಾ
ಗಿದ್ದರು. ‘ಕಾರಂತ ಸಂಗೀತ’ ಮಾದರಿ ಯನ್ನು ರಂಗಭೂಮಿಯಲ್ಲಿ ಮುಂದುವರಿಸಿದ್ದರು.

ರಂಗಾಯಣಕ್ಕೆ ಬರುವ ಮುಂಚೆ ಉಡುಪಿ ರಥಬೀದಿ ಗೆಳೆಯರ ನಾಟಕ ಗಳಿಗೆ ರಂಗ ಸಂಗೀತ ನೀಡಿದ್ದರು.

ಹೆಗ್ಗೋಡಿನ ನೀನಾಸಂನಲ್ಲೂ ಕೆಲಸ ಮಾಡಿದ್ದರು. ನಾಡಿನ ವಿವಿಧ ಹವ್ಯಾಸಿ ರಂಗ ತಂಡಗಳ ನಾಟಕಗಳಿಗೂ ಸಂಗೀತ ನೀಡಿದ್ದರು. ಗಿಟಾರ್, ಹಾರ್ಮೊನಿಯಂ ಹಾಗೂ ತಾಳವಾದ್ಯಗಳಲ್ಲೂ ಪರಿಣತರಾಗಿದ್ದರು. ಅಂತ್ಯಕ್ರಿಯೆ ಮೈಸೂರಿನಲ್ಲಿ ಗುರುವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT