<p><strong>ಮೈಸೂರು:</strong> ನಗರ ಗೋಪಾಲಕರ ಸಂಘದ 20ನೇ ವಾರ್ಷಿಕೋತ್ಸವ ಪ್ರಯುಕ್ತ ಜ.24 ಮತ್ತು 25ರಂದು ಇಲ್ಲಿನ ಜೆ.ಕೆ.ಮೈದಾನದಲ್ಲಿ ರಾಜ್ಯಮಟ್ಟದ ಹಾಲು ಕರೆಯುವ ಸ್ಫರ್ಧೆ ನಡೆಯಲಿದೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಡಿ.ನಾಗಭೂಷಣ್, ‘ಎರಡೂ ದಿನ ಬೆಳಿಗ್ಗೆ 6.30 ಹಾಗೂ ಸಂಜೆ 5.30ಕ್ಕೆ ಸ್ಪರ್ಧೆ ನಡೆಯಲಿದೆ’ ಎಂದರು.</p>.<p>‘1ನೇ ಬಹುಮಾನವಾಗಿ ₹1.50 ಲಕ್ಷ, 2ನೇ ಬಹುಮಾನವಾಗಿ ₹1 ಲಕ್ಷ, 3ನೇ ಬಹುಮಾನವಾಗಿ ₹75 ಸಾವಿರ, 4ನೇ ಬಹುಮಾನವಾಗಿ ₹50 ಸಾವಿರ ಹಾಗೂ 5ನೇ ಬಹುಮಾನವಾಗಿ ₹25 ಸಾವಿರ ಮತ್ತು ಟ್ರೋಫಿಗಳನ್ನು ನೀಡಲಾಗುವುದು. ಜ.23ರ ಸಂಜೆ 4ರವರೆಗೆ ಗೋಪಾಲಕರ ಹೆಸರು ನೋಂದಣಿಗೆ ಅವಕಾಶವಿದೆ. ಅಂದು ಎಲ್ಲ ಹಸುಗಳನ್ನು ಮೈದಾನಕ್ಕೆ ಕರೆತರಬೇಕು. ಮಾಹಿತಿ ಹಾಗೂ ನೋಂದಣಿಗೆ ಮೊ.ಸಂ. 99864 16956 ಸಂಪರ್ಕಿಸಿ’ ಎಂದರು.</p>.<p>‘23ರಂದು ಮಧ್ಯಾಹ್ನ 12ಕ್ಕೆ ನಗರದಲ್ಲಿಕೃಷ್ಣನ ಮೂರ್ತಿ ಮೆರವಣಿಗೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡುವರು. 25ರ ಸಂಜೆ 6.30ಕ್ಕೆ ವಿಜೇತ ಹಸುಗಳ ಮಾಲೀಕರಿಗೆ ಬಹುಮಾನ ವಿತರಿಸಲಾಗುವುದು. ಶಾಸಕ ಕೆ.ಹರೀಶ್ಗೌಡ ಅಧ್ಯಕ್ಷತೆ ವಹಿಸುವರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರ ಗೋಪಾಲಕರ ಸಂಘದ 20ನೇ ವಾರ್ಷಿಕೋತ್ಸವ ಪ್ರಯುಕ್ತ ಜ.24 ಮತ್ತು 25ರಂದು ಇಲ್ಲಿನ ಜೆ.ಕೆ.ಮೈದಾನದಲ್ಲಿ ರಾಜ್ಯಮಟ್ಟದ ಹಾಲು ಕರೆಯುವ ಸ್ಫರ್ಧೆ ನಡೆಯಲಿದೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಡಿ.ನಾಗಭೂಷಣ್, ‘ಎರಡೂ ದಿನ ಬೆಳಿಗ್ಗೆ 6.30 ಹಾಗೂ ಸಂಜೆ 5.30ಕ್ಕೆ ಸ್ಪರ್ಧೆ ನಡೆಯಲಿದೆ’ ಎಂದರು.</p>.<p>‘1ನೇ ಬಹುಮಾನವಾಗಿ ₹1.50 ಲಕ್ಷ, 2ನೇ ಬಹುಮಾನವಾಗಿ ₹1 ಲಕ್ಷ, 3ನೇ ಬಹುಮಾನವಾಗಿ ₹75 ಸಾವಿರ, 4ನೇ ಬಹುಮಾನವಾಗಿ ₹50 ಸಾವಿರ ಹಾಗೂ 5ನೇ ಬಹುಮಾನವಾಗಿ ₹25 ಸಾವಿರ ಮತ್ತು ಟ್ರೋಫಿಗಳನ್ನು ನೀಡಲಾಗುವುದು. ಜ.23ರ ಸಂಜೆ 4ರವರೆಗೆ ಗೋಪಾಲಕರ ಹೆಸರು ನೋಂದಣಿಗೆ ಅವಕಾಶವಿದೆ. ಅಂದು ಎಲ್ಲ ಹಸುಗಳನ್ನು ಮೈದಾನಕ್ಕೆ ಕರೆತರಬೇಕು. ಮಾಹಿತಿ ಹಾಗೂ ನೋಂದಣಿಗೆ ಮೊ.ಸಂ. 99864 16956 ಸಂಪರ್ಕಿಸಿ’ ಎಂದರು.</p>.<p>‘23ರಂದು ಮಧ್ಯಾಹ್ನ 12ಕ್ಕೆ ನಗರದಲ್ಲಿಕೃಷ್ಣನ ಮೂರ್ತಿ ಮೆರವಣಿಗೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡುವರು. 25ರ ಸಂಜೆ 6.30ಕ್ಕೆ ವಿಜೇತ ಹಸುಗಳ ಮಾಲೀಕರಿಗೆ ಬಹುಮಾನ ವಿತರಿಸಲಾಗುವುದು. ಶಾಸಕ ಕೆ.ಹರೀಶ್ಗೌಡ ಅಧ್ಯಕ್ಷತೆ ವಹಿಸುವರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>