<p><strong>ಎಚ್.ಡಿ.ಕೋಟೆ</strong>: ‘ಕಾಡಿನ ಕುರಿತು ಅತ್ಯಂತ ಕಾಳಜಿ ಹೊಂದಿದ್ದರು. ನಿಷ್ಠಾವಂತರಾಗಿದ್ದ ಮಣಿಕಂಠನ್ ತಮ್ಮ ಪ್ರಾಣವನ್ನು ಅರಣ್ಯದ ಸೇವೆಗೆ ಮುಡಿಪಾಗಿ ಇಟ್ಟಿದ್ದರು’ ಎಂದು ಡಿಸಿಎಫ್ ಪಿ.ಎ.ಸೀಮಾ ತಿಳಿಸಿದರು.</p>.<p>ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಳ್ಳೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಐಎಫ್ಎಸ್ ಅಧಿಕಾರಿ ಮಣಿಕಂಠನ್ ಅವರ ಪ್ರತಿಮೆಯನ್ನು ವಿಶ್ವ ವನ್ಯಜೀವಿ ದಿನದ ಅಂಗವಾಗಿ ಸೋಮವಾರ ಅನಾವರಣಗೊಳಿಸಿ ಮಾತನಾಡಿದರು.</p>.<p>‘ಕಳೆದ ಏಳು ವರ್ಷದ ಹಿಂದೆ ತಾಲ್ಲೂಕಿನ ಬಳ್ಳೆ ಅರಣ್ಯ ವಲಯದಲ್ಲಿ ಕಾಡಿನ ಒಳಭಾಗದಲ್ಲಿ ಫೈರ್ ಲೈನ್ ಕಾಮಗಾರಿ ಪರಿಶೀಲಿಸುತ್ತಾ ಕರ್ತವ್ಯದಲ್ಲಿದ್ದಾಗ ಕಾಡಾನೆ ಏಕಾಏಕಿ ದಾಳಿ ನಡೆಸಿತ್ತು. ಇದರಿಂದಾಗಿ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಮೃತಪಟ್ಟಿದ್ದರು’ ಎಂದರು.</p>.<p>‘ಕಾಡಿನ ಒಳಭಾಗದಲ್ಲಿ ಸಣ್ಣದೊಂದು ಬೆಂಕಿ ಅವಘಡ ಸಂಭವಿಸಿದ್ದನ್ನು ಪರಿಗಣಿಸಿ ಸ್ಥಳಕ್ಕೆ ಭೇಟಿ ನೀಡಿ ಕರ್ತವ್ಯದಲ್ಲಿದ್ದಾಗ ಆನೆ ದಾಳಿ ನಡೆಸಿ ಅವಘಡ ನಡೆದಿದೆ’ ಎಂದರು.</p>.<p>‘ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳೇ ಆಗಲಿ, ಸಿಬ್ಬಂದಿಗಳೇ ಆಗಲಿ ಕಾಡಿನ ಒಳಭಾಗದಲ್ಲಿ ಓಡಾಡುವಾಗ ತಮ್ಮ ರಕ್ಷಣೆ ಬಗ್ಗೆ ಗಮನ ಹರಿಸಬೇಕು. ಕೆಲಸ ಮಾಡುವಾಗ ನಮ್ಮನ್ನು ನಾವು ಕಾಪಾಡಿಕೊಂಡು ಕೆಲಸ ಮಾಡಬೇಕಾಗಿದೆ’ ಎಂದರು.</p>.<p>‘ಅಕ್ಕಪಕ್ಕದಲ್ಲಿ ಕಾಡುಪ್ರಾಣಿಗಳು ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಸರಿಯಾದ ರೀತಿಯಲ್ಲಿ ಗಮನಿಸಿ, ನಂತರವೇ ಕಾರ್ಯ ಪ್ರವೃತ್ತರಾಗಬೇಕು’ ಎಂದು ಸಲಹೆ ನೀಡಿದರು. ಮೃತ ಡಿಸಿಎಫ್ ಮಣಿಕಂಠನ್ ಗೌರವಾರ್ಥ ಮೌನ ಆಚರಿಸಲಾಯಿತು. ಎಸಿಎಫ್ ಎಸ್.ಡಿ.ಮಧು, ಎನ್.ಲಕ್ಷ್ಮಿಕಾಂತ್, ಅಂತರಸಂತೆ ವಲಯ ಅರಣ್ಯಾಧಿಕಾರಿ ಸಿದ್ದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ</strong>: ‘ಕಾಡಿನ ಕುರಿತು ಅತ್ಯಂತ ಕಾಳಜಿ ಹೊಂದಿದ್ದರು. ನಿಷ್ಠಾವಂತರಾಗಿದ್ದ ಮಣಿಕಂಠನ್ ತಮ್ಮ ಪ್ರಾಣವನ್ನು ಅರಣ್ಯದ ಸೇವೆಗೆ ಮುಡಿಪಾಗಿ ಇಟ್ಟಿದ್ದರು’ ಎಂದು ಡಿಸಿಎಫ್ ಪಿ.ಎ.ಸೀಮಾ ತಿಳಿಸಿದರು.</p>.<p>ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಳ್ಳೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಐಎಫ್ಎಸ್ ಅಧಿಕಾರಿ ಮಣಿಕಂಠನ್ ಅವರ ಪ್ರತಿಮೆಯನ್ನು ವಿಶ್ವ ವನ್ಯಜೀವಿ ದಿನದ ಅಂಗವಾಗಿ ಸೋಮವಾರ ಅನಾವರಣಗೊಳಿಸಿ ಮಾತನಾಡಿದರು.</p>.<p>‘ಕಳೆದ ಏಳು ವರ್ಷದ ಹಿಂದೆ ತಾಲ್ಲೂಕಿನ ಬಳ್ಳೆ ಅರಣ್ಯ ವಲಯದಲ್ಲಿ ಕಾಡಿನ ಒಳಭಾಗದಲ್ಲಿ ಫೈರ್ ಲೈನ್ ಕಾಮಗಾರಿ ಪರಿಶೀಲಿಸುತ್ತಾ ಕರ್ತವ್ಯದಲ್ಲಿದ್ದಾಗ ಕಾಡಾನೆ ಏಕಾಏಕಿ ದಾಳಿ ನಡೆಸಿತ್ತು. ಇದರಿಂದಾಗಿ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಮೃತಪಟ್ಟಿದ್ದರು’ ಎಂದರು.</p>.<p>‘ಕಾಡಿನ ಒಳಭಾಗದಲ್ಲಿ ಸಣ್ಣದೊಂದು ಬೆಂಕಿ ಅವಘಡ ಸಂಭವಿಸಿದ್ದನ್ನು ಪರಿಗಣಿಸಿ ಸ್ಥಳಕ್ಕೆ ಭೇಟಿ ನೀಡಿ ಕರ್ತವ್ಯದಲ್ಲಿದ್ದಾಗ ಆನೆ ದಾಳಿ ನಡೆಸಿ ಅವಘಡ ನಡೆದಿದೆ’ ಎಂದರು.</p>.<p>‘ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳೇ ಆಗಲಿ, ಸಿಬ್ಬಂದಿಗಳೇ ಆಗಲಿ ಕಾಡಿನ ಒಳಭಾಗದಲ್ಲಿ ಓಡಾಡುವಾಗ ತಮ್ಮ ರಕ್ಷಣೆ ಬಗ್ಗೆ ಗಮನ ಹರಿಸಬೇಕು. ಕೆಲಸ ಮಾಡುವಾಗ ನಮ್ಮನ್ನು ನಾವು ಕಾಪಾಡಿಕೊಂಡು ಕೆಲಸ ಮಾಡಬೇಕಾಗಿದೆ’ ಎಂದರು.</p>.<p>‘ಅಕ್ಕಪಕ್ಕದಲ್ಲಿ ಕಾಡುಪ್ರಾಣಿಗಳು ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಸರಿಯಾದ ರೀತಿಯಲ್ಲಿ ಗಮನಿಸಿ, ನಂತರವೇ ಕಾರ್ಯ ಪ್ರವೃತ್ತರಾಗಬೇಕು’ ಎಂದು ಸಲಹೆ ನೀಡಿದರು. ಮೃತ ಡಿಸಿಎಫ್ ಮಣಿಕಂಠನ್ ಗೌರವಾರ್ಥ ಮೌನ ಆಚರಿಸಲಾಯಿತು. ಎಸಿಎಫ್ ಎಸ್.ಡಿ.ಮಧು, ಎನ್.ಲಕ್ಷ್ಮಿಕಾಂತ್, ಅಂತರಸಂತೆ ವಲಯ ಅರಣ್ಯಾಧಿಕಾರಿ ಸಿದ್ದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>