<p><strong>ಮೈಸೂರು</strong>: ‘ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡುವ ಕುರಿತು ಸರ್ಕಾರ ನಮ್ಮಜೊತೆ ಚರ್ಚಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಹೋರಾಟ ನಡೆಸಲಾಗುವುದು’ ಎಂದು ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.</p>.<p>‘ಮೂರುವರೆ ವರ್ಷದಿಂದ ನಿರಂತರ ಹೋರಾಟ ನಡೆಸಿದರೂ ಸ್ಪಂದನವಿಲ್ಲ. ಬಿಜೆಪಿ ಅವಧಿಯಲ್ಲಿ ‘2ಡಿ’ ಮೀಸಲಾತಿ ನೀಡಿದ್ದರೂ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. 12 ಜಿಲ್ಲೆಗಳ ಹೆದ್ದಾರಿಯಲ್ಲಿ ಲಿಂಗಪೂಜೆಯ ಮೂಲಕ ಪ್ರತಿಭಟಿಸಿದರೂ ಕಾಂಗ್ರೆಸ್ ಸರ್ಕಾರ ಬೇಡಿಕೆಗೆ ಸ್ಪಂದಿಸಿಲ್ಲ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಸದನದಲ್ಲಿ ಧ್ವನಿ ಎತ್ತದ ಸಮುದಾಯದ ಶಾಸಕರು, ಚರ್ಚೆಗೆ ಸ್ಪೀಕರ್ ಅವಕಾಶ ನೀಡಿಲ್ಲ ಎನ್ನುತ್ತಾರೆ. ಅವರು ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಬೇಕಿತ್ತು’ ಎಂದು ಪ್ರತಿಪಾದಿಸಿದರು.</p>.<p>‘2ಎ ಮೀಸಲಾತಿಗೆ ಒತ್ತಾಯಿಸಿ ಸೆ.22ರಂದು ಬೆಳಗಾವಿಯಲ್ಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಏರ್ಪಡಿಸಿದೆ. ಕಾನೂನು ಹೋರಾಟ ರೂಪಿಸಲು 10 ಹಿರಿಯ ವಕೀಲರ ಸಮಿತಿ ರಚಿಸಲಾಗುವುದು. ಸಮಾವೇಶಕ್ಕೂ ಮುನ್ನ ಸೆ.17ರಂದು ಕಲಬುರಗಿಯಲ್ಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡುವ ಕುರಿತು ಸರ್ಕಾರ ನಮ್ಮಜೊತೆ ಚರ್ಚಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಹೋರಾಟ ನಡೆಸಲಾಗುವುದು’ ಎಂದು ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.</p>.<p>‘ಮೂರುವರೆ ವರ್ಷದಿಂದ ನಿರಂತರ ಹೋರಾಟ ನಡೆಸಿದರೂ ಸ್ಪಂದನವಿಲ್ಲ. ಬಿಜೆಪಿ ಅವಧಿಯಲ್ಲಿ ‘2ಡಿ’ ಮೀಸಲಾತಿ ನೀಡಿದ್ದರೂ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. 12 ಜಿಲ್ಲೆಗಳ ಹೆದ್ದಾರಿಯಲ್ಲಿ ಲಿಂಗಪೂಜೆಯ ಮೂಲಕ ಪ್ರತಿಭಟಿಸಿದರೂ ಕಾಂಗ್ರೆಸ್ ಸರ್ಕಾರ ಬೇಡಿಕೆಗೆ ಸ್ಪಂದಿಸಿಲ್ಲ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಸದನದಲ್ಲಿ ಧ್ವನಿ ಎತ್ತದ ಸಮುದಾಯದ ಶಾಸಕರು, ಚರ್ಚೆಗೆ ಸ್ಪೀಕರ್ ಅವಕಾಶ ನೀಡಿಲ್ಲ ಎನ್ನುತ್ತಾರೆ. ಅವರು ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಬೇಕಿತ್ತು’ ಎಂದು ಪ್ರತಿಪಾದಿಸಿದರು.</p>.<p>‘2ಎ ಮೀಸಲಾತಿಗೆ ಒತ್ತಾಯಿಸಿ ಸೆ.22ರಂದು ಬೆಳಗಾವಿಯಲ್ಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಏರ್ಪಡಿಸಿದೆ. ಕಾನೂನು ಹೋರಾಟ ರೂಪಿಸಲು 10 ಹಿರಿಯ ವಕೀಲರ ಸಮಿತಿ ರಚಿಸಲಾಗುವುದು. ಸಮಾವೇಶಕ್ಕೂ ಮುನ್ನ ಸೆ.17ರಂದು ಕಲಬುರಗಿಯಲ್ಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>