<p><strong>ಮೈಸೂರು: </strong>‘ವಿದ್ಯಾರ್ಥಿಗಳು ಉತ್ತಮ ನಡವಳಿಕೆ, ಶಿಸ್ತು ಮೈಗೂಡಿಸಿಕೊಳ್ಳಬೇಕು ಹಾಗೂ ಕೌಶಲ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಗಿರಿಧರ್ ರಾವ್ ಎಂ.ಎಸ್. ಹೇಳಿದರು.</p>.<p>ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಈಚೆಗೆ ನಡೆದ ಪ್ರಥಮ ವರ್ಷದ ಎಂ.ಎ. ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪರಿಶ್ರಮವು ಗುರಿಯನ್ನು ಮುಟ್ಟುವ ಕಡೆಗೆ ಕರೆದೊಯ್ಯುತ್ತದೆ’ ಎಂದರು.</p>.<p>ಪ್ರಾಂಶುಪಾಲ ಡಾ.ಎಸ್.ಮರೀಗೌಡ, ಸಂಸ್ಥೆಯ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಮಾತನಾಡಿದರು.</p>.<p>2020–22ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಾದ ಅನಘಾ ಎಚ್.ಎನ್., ಅರ್ಪಿತಾ ಬಾಯಿ, ಗಯಾನಾ ಎಚ್.ಎನ್., ನಮಿತಾ ಎಸ್., ಪ್ರೀತಿ ಎಚ್.ಎಲ್., ಇನ್ಶಾ ಅಲಿಯಾ, ವೀರೇಂದ್ರಕುಮಾರ್ ಕೆ.ಸಿ. ಅವರನ್ನು ಅಭಿನಂದಿಸಲಾಯಿತು. ಸ್ನಾತಕೋತ್ತರ ಎಂ.ಕಾಂ. ಪದವಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ₹ 25ಸಾವಿರ ಸಹಾಯಧನವನ್ನು ಸಂಸ್ಥೆಯಿಂದ ನೀಡಲಾಯಿತು.</p>.<p>ಸಂಸ್ಥೆಯ ಗೌರವಾಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕೋಶಾಧ್ಯಕ್ಷ ಶ್ರೀಶೈಲ ರಾಮಣ್ಣವರ, ಕಾಲೇಜು ನಿರ್ವಹಣಾ ಮಂಡಳಿ ಅಧ್ಯಕ್ಷ ಟಿ.ನಾಗರಾಜು, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಎಸ್.ಪೂರ್ಣಿಮಾ, ಪ್ರೊ.ಎಂ.ಸಿ.ಅನುಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ವಿದ್ಯಾರ್ಥಿಗಳು ಉತ್ತಮ ನಡವಳಿಕೆ, ಶಿಸ್ತು ಮೈಗೂಡಿಸಿಕೊಳ್ಳಬೇಕು ಹಾಗೂ ಕೌಶಲ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಗಿರಿಧರ್ ರಾವ್ ಎಂ.ಎಸ್. ಹೇಳಿದರು.</p>.<p>ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಈಚೆಗೆ ನಡೆದ ಪ್ರಥಮ ವರ್ಷದ ಎಂ.ಎ. ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪರಿಶ್ರಮವು ಗುರಿಯನ್ನು ಮುಟ್ಟುವ ಕಡೆಗೆ ಕರೆದೊಯ್ಯುತ್ತದೆ’ ಎಂದರು.</p>.<p>ಪ್ರಾಂಶುಪಾಲ ಡಾ.ಎಸ್.ಮರೀಗೌಡ, ಸಂಸ್ಥೆಯ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಮಾತನಾಡಿದರು.</p>.<p>2020–22ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಾದ ಅನಘಾ ಎಚ್.ಎನ್., ಅರ್ಪಿತಾ ಬಾಯಿ, ಗಯಾನಾ ಎಚ್.ಎನ್., ನಮಿತಾ ಎಸ್., ಪ್ರೀತಿ ಎಚ್.ಎಲ್., ಇನ್ಶಾ ಅಲಿಯಾ, ವೀರೇಂದ್ರಕುಮಾರ್ ಕೆ.ಸಿ. ಅವರನ್ನು ಅಭಿನಂದಿಸಲಾಯಿತು. ಸ್ನಾತಕೋತ್ತರ ಎಂ.ಕಾಂ. ಪದವಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ₹ 25ಸಾವಿರ ಸಹಾಯಧನವನ್ನು ಸಂಸ್ಥೆಯಿಂದ ನೀಡಲಾಯಿತು.</p>.<p>ಸಂಸ್ಥೆಯ ಗೌರವಾಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕೋಶಾಧ್ಯಕ್ಷ ಶ್ರೀಶೈಲ ರಾಮಣ್ಣವರ, ಕಾಲೇಜು ನಿರ್ವಹಣಾ ಮಂಡಳಿ ಅಧ್ಯಕ್ಷ ಟಿ.ನಾಗರಾಜು, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಎಸ್.ಪೂರ್ಣಿಮಾ, ಪ್ರೊ.ಎಂ.ಸಿ.ಅನುಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>