<p><strong>ಮೈಸೂರು:</strong> ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯಲ್ಲಿ ಮಂಗಳವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು.</p>.<p>ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್ಒ), ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ) ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘದ ನೇತೃತ್ವದಲ್ಲಿ ಸುಮಾರು 500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯ ‘ಕ್ಲಾಕ್ ಟವರ್’ನಿಂದ ಕುವೆಂಪು ಪ್ರತಿಮೆವರೆಗೆ ಪ್ರತಿಭಟನಾ ಜಾಥಾ ನಡೆಸಿದರು.</p>.<p>ಜಾಮೀಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ನಡೆಸಿದ ಲಾಠಿಪ್ರಹಾರವನ್ನು ಇದೇ ವೇಳೆ ವಿದ್ಯಾರ್ಥಿಗಳು ಖಂಡಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ‘ನಿಜಕ್ಕೂ ನಾವೀಗ ದುರ್ಬರ ಪರಿಸ್ಥಿತಿಯಲ್ಲಿದ್ದೇವೆ. ತಪ್ಪನ್ನು ತಪ್ಪು ಎಂದು ಹೇಳಿದರೆ ಲಾಠಿ ಏಟು ತಿನ್ನುವ ಸ್ಥಿತಿ ನಮ್ಮದಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಜಾಮಿಯ ವಿ.ವಿ ವಿದ್ಯಾರ್ಥಿಗಳು ಮಾಡಿದ ತಪ್ಪಾದರೂ ಏನು’ ಎಂದು ಪ್ರಶ್ನಿಸಿದ ಅವರು, ‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಲಾಯಿತು. ಗ್ರಂಥಾಲಯಗಳಲ್ಲಿ, ಹಾಸ್ಟೆಲ್ಗಳಲ್ಲಿ ಇದ್ದ ವಿದ್ಯಾರ್ಥಿಗಳನ್ನೂ ಹೊರಗೆ ಎಳೆದುಕೊಂಡು ಬಂದು ಥಳಿಸಲಾಯಿತು’ ಎಂದು ಕಿಡಿಕಾರಿದರು.</p>.<p>ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯಬೇಡಿ ಎಂದು ಹೇಳುವುದು ತಪ್ಪು ಎನ್ನುವುದಾದರೇ ಬೇರೆ ಇನ್ನೇನು ಮಾಡಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಕೂಡಲೇ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳಬೇಕು. ಧರ್ಮ ಆಧಾರದ ಮೇಲೆ ಪೌರತ್ವವನ್ನು ನಿರ್ಣಯಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.</p>.<p>ಎಸ್ಎಫ್ಐ ಮುಖಂಡ ವಸಂತ್, ಮೈಸೂರು ವಿ.ವಿ. ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವರು, ಮುಖಂಡ ಸೋಸ್ಲೆ ಮಹೇಶ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯಲ್ಲಿ ಮಂಗಳವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು.</p>.<p>ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್ಒ), ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ) ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘದ ನೇತೃತ್ವದಲ್ಲಿ ಸುಮಾರು 500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯ ‘ಕ್ಲಾಕ್ ಟವರ್’ನಿಂದ ಕುವೆಂಪು ಪ್ರತಿಮೆವರೆಗೆ ಪ್ರತಿಭಟನಾ ಜಾಥಾ ನಡೆಸಿದರು.</p>.<p>ಜಾಮೀಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ನಡೆಸಿದ ಲಾಠಿಪ್ರಹಾರವನ್ನು ಇದೇ ವೇಳೆ ವಿದ್ಯಾರ್ಥಿಗಳು ಖಂಡಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ‘ನಿಜಕ್ಕೂ ನಾವೀಗ ದುರ್ಬರ ಪರಿಸ್ಥಿತಿಯಲ್ಲಿದ್ದೇವೆ. ತಪ್ಪನ್ನು ತಪ್ಪು ಎಂದು ಹೇಳಿದರೆ ಲಾಠಿ ಏಟು ತಿನ್ನುವ ಸ್ಥಿತಿ ನಮ್ಮದಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಜಾಮಿಯ ವಿ.ವಿ ವಿದ್ಯಾರ್ಥಿಗಳು ಮಾಡಿದ ತಪ್ಪಾದರೂ ಏನು’ ಎಂದು ಪ್ರಶ್ನಿಸಿದ ಅವರು, ‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಲಾಯಿತು. ಗ್ರಂಥಾಲಯಗಳಲ್ಲಿ, ಹಾಸ್ಟೆಲ್ಗಳಲ್ಲಿ ಇದ್ದ ವಿದ್ಯಾರ್ಥಿಗಳನ್ನೂ ಹೊರಗೆ ಎಳೆದುಕೊಂಡು ಬಂದು ಥಳಿಸಲಾಯಿತು’ ಎಂದು ಕಿಡಿಕಾರಿದರು.</p>.<p>ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯಬೇಡಿ ಎಂದು ಹೇಳುವುದು ತಪ್ಪು ಎನ್ನುವುದಾದರೇ ಬೇರೆ ಇನ್ನೇನು ಮಾಡಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಕೂಡಲೇ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳಬೇಕು. ಧರ್ಮ ಆಧಾರದ ಮೇಲೆ ಪೌರತ್ವವನ್ನು ನಿರ್ಣಯಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.</p>.<p>ಎಸ್ಎಫ್ಐ ಮುಖಂಡ ವಸಂತ್, ಮೈಸೂರು ವಿ.ವಿ. ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವರು, ಮುಖಂಡ ಸೋಸ್ಲೆ ಮಹೇಶ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>