<p>ಮೈಸೂರು: ‘ಹದಿಹರೆಯವು ಬದುಕಿನ ಅತ್ಯಂತ ಉಪಯುಕ್ತ ಕಾಲ, ಇದನ್ನು ಸಕ್ರಿಯವಾಗಿ ಬಳಸಿಕೊಂಡು ಭವಿಷ್ಯ ಭದ್ರಗೊಳಿಸಿಕೊಳ್ಳಬೇಕು’ ಎಂದು ಚಲನಚಿತ್ರ ನಟ ಕೆ.ಸುಚೇಂದ್ರ ಪ್ರಸಾದ್ ಹೇಳಿದರು.</p>.<p>ಇಲ್ಲಿನ ಬನ್ನಿಮಂಟಪದ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಲ್ಲಿ ಸೋಮವಾರ ಆರಂಭವಾದ ಐದು ದಿನಗಳ 9ನೇ ಅಂತರ ವಿಶ್ವವಿದ್ಯಾಲಯ ನೈರುತ್ಯ ವಲಯದ ‘ಯುವೋತ್ಸವ’ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲರನ್ನೂ ಸಂಘಟಿತರಾಗಿಸಿ ಒಂದೇ ಸೂರಿನಡಿ ತರುವ ಉತ್ಸವಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸ ಮಾಡುತ್ತಿವೆ. ಯುವೋತ್ಸವವು ಯುವಜನರನ್ನು ಸಹಬಾಳ್ವೆಗೆ, ಎಲ್ಲರೂ ಒಂದೇ ಎಂಬ ಭಾವನೆಯನ್ನು ಜಾಗೃತಗೊಳಿಸಲು ಸಾಧ್ಯವಾಗುತ್ತದೆ’ ಎಂದರು.</p>.<p>‘ದೇಶವೆಂದರೆ ಬಾವುಟ, ಗಡಿ, ಭಾಷೆಗಳಲ್ಲ. ವಿಶ್ವಕ್ಕೆ ಉತ್ತಮ ಆಲೋಚನೆಗಳನ್ನು ಪಸರಿಸುವ ಸ್ಥಳ. ವಿಶ್ವವಿದ್ಯಾಲಯಗಳ ಮೂಲಕ ಜಗತ್ತಿನ ಉತ್ತಮ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು. ನಮ್ಮನ್ನು ನಾವು ಅರಿತು ಜನ್ಮ ಸಾರ್ಥಕದ ಮಾರ್ಗವನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು. </p>.<p>ಕುಲಪತಿ ಎಚ್.ಬಸವನಗೌಡಪ್ಪ, ಸಮಕುಲಾಧಿಪತಿ ಬಿ.ಸುರೇಶ್, ಸಂಘಟನಾ ಕಾರ್ಯದರ್ಶಿ ವಿಶಾಲ್ ಕುಮಾರ್ ಗುಪ್ತ ಹಾಗೂ ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಮಾತನಾಡಿದರು. </p>.<p>ಕುಲಸಚಿವ ಬಿ.ಮಂಜುನಾಥ್, ನವದೆಹಲಿಯ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ವೀಕ್ಷಕರಾದ, ಉತ್ತರಪ್ರದೇಶದ ಸುಭಾರ್ತಿ ವಿಶ್ವವಿದ್ಯಾಲಯದ ಲಲಿತಕಲೆ ವಿಭಾಗದ ಮುಖ್ಯಸ್ಥೆ ಪ್ರೊ.ಭಾವನಾ ಗ್ರೊವರ್, ಬನಾರಸ್ ಹಿಂದೂ ವಿಶ್ವವಿದ್ಯಾಲಯ ಸಹ ಪ್ರಾಧ್ಯಾಪಕ ಬಾಲ ಲಖೇಂದ್ರ ಹಾಜರಿದ್ದರು.</p>.<p>ವಲಯದ ಒಟ್ಟು 33 ವಿಶ್ವವಿದ್ಯಾಲಯಗಳಿಂದ 1,500 ವಿದ್ಯಾರ್ಥಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ. ದೇಶದ ವಿವಿಧ ಭಾಗಗಳ ಸಂಸ್ಕೃತಿಯನ್ನು ಪರಿಚಯಿಸುವ ನೃತ್ಯ ಪ್ರದರ್ಶನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಹದಿಹರೆಯವು ಬದುಕಿನ ಅತ್ಯಂತ ಉಪಯುಕ್ತ ಕಾಲ, ಇದನ್ನು ಸಕ್ರಿಯವಾಗಿ ಬಳಸಿಕೊಂಡು ಭವಿಷ್ಯ ಭದ್ರಗೊಳಿಸಿಕೊಳ್ಳಬೇಕು’ ಎಂದು ಚಲನಚಿತ್ರ ನಟ ಕೆ.ಸುಚೇಂದ್ರ ಪ್ರಸಾದ್ ಹೇಳಿದರು.</p>.<p>ಇಲ್ಲಿನ ಬನ್ನಿಮಂಟಪದ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಲ್ಲಿ ಸೋಮವಾರ ಆರಂಭವಾದ ಐದು ದಿನಗಳ 9ನೇ ಅಂತರ ವಿಶ್ವವಿದ್ಯಾಲಯ ನೈರುತ್ಯ ವಲಯದ ‘ಯುವೋತ್ಸವ’ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲರನ್ನೂ ಸಂಘಟಿತರಾಗಿಸಿ ಒಂದೇ ಸೂರಿನಡಿ ತರುವ ಉತ್ಸವಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸ ಮಾಡುತ್ತಿವೆ. ಯುವೋತ್ಸವವು ಯುವಜನರನ್ನು ಸಹಬಾಳ್ವೆಗೆ, ಎಲ್ಲರೂ ಒಂದೇ ಎಂಬ ಭಾವನೆಯನ್ನು ಜಾಗೃತಗೊಳಿಸಲು ಸಾಧ್ಯವಾಗುತ್ತದೆ’ ಎಂದರು.</p>.<p>‘ದೇಶವೆಂದರೆ ಬಾವುಟ, ಗಡಿ, ಭಾಷೆಗಳಲ್ಲ. ವಿಶ್ವಕ್ಕೆ ಉತ್ತಮ ಆಲೋಚನೆಗಳನ್ನು ಪಸರಿಸುವ ಸ್ಥಳ. ವಿಶ್ವವಿದ್ಯಾಲಯಗಳ ಮೂಲಕ ಜಗತ್ತಿನ ಉತ್ತಮ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು. ನಮ್ಮನ್ನು ನಾವು ಅರಿತು ಜನ್ಮ ಸಾರ್ಥಕದ ಮಾರ್ಗವನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು. </p>.<p>ಕುಲಪತಿ ಎಚ್.ಬಸವನಗೌಡಪ್ಪ, ಸಮಕುಲಾಧಿಪತಿ ಬಿ.ಸುರೇಶ್, ಸಂಘಟನಾ ಕಾರ್ಯದರ್ಶಿ ವಿಶಾಲ್ ಕುಮಾರ್ ಗುಪ್ತ ಹಾಗೂ ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಮಾತನಾಡಿದರು. </p>.<p>ಕುಲಸಚಿವ ಬಿ.ಮಂಜುನಾಥ್, ನವದೆಹಲಿಯ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ವೀಕ್ಷಕರಾದ, ಉತ್ತರಪ್ರದೇಶದ ಸುಭಾರ್ತಿ ವಿಶ್ವವಿದ್ಯಾಲಯದ ಲಲಿತಕಲೆ ವಿಭಾಗದ ಮುಖ್ಯಸ್ಥೆ ಪ್ರೊ.ಭಾವನಾ ಗ್ರೊವರ್, ಬನಾರಸ್ ಹಿಂದೂ ವಿಶ್ವವಿದ್ಯಾಲಯ ಸಹ ಪ್ರಾಧ್ಯಾಪಕ ಬಾಲ ಲಖೇಂದ್ರ ಹಾಜರಿದ್ದರು.</p>.<p>ವಲಯದ ಒಟ್ಟು 33 ವಿಶ್ವವಿದ್ಯಾಲಯಗಳಿಂದ 1,500 ವಿದ್ಯಾರ್ಥಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ. ದೇಶದ ವಿವಿಧ ಭಾಗಗಳ ಸಂಸ್ಕೃತಿಯನ್ನು ಪರಿಚಯಿಸುವ ನೃತ್ಯ ಪ್ರದರ್ಶನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>