<p><strong>ಮೈಸೂರು:</strong> ‘ಕೇಂದ್ರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗೃಹ<br>ಬಳಕೆಯ ಅನಿಲ ಸಿಲಿಂಡರ್ಗೆ ₹ 60<br>ಮತ್ತು ವಾಣಿಜ್ಯ ಬಳಕೆಯ ಸಿಲಿಂಡ<br>ರ್ಗೆ ₹ 114 ಹೆಚ್ಚಿಸಿ<br>ರುವ ಕ್ರಮ ಖಂಡ<br>ನೀಯ’ ಎಂದು ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ ತಿಳಿಸಿದ್ದಾರೆ.</p>.<p>‘ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿಸುತ್ತಿದ್ದಾಗ, ಅದರ <br>ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿ<br>ಸಲಿಲ್ಲವೇಕೆ? ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವಂತೆ ಅಮೆರಿಕ ಹಾಕಿದ ಒತ್ತಡಕ್ಕೆ ಮಣಿದಿರುವುದು ಯಾರ ಹಿತಾಸಕ್ತಿಗಾಗಿ? ಇನ್ನು 50 ದಿನಗಳಿಗೆ ಬೇಕಾದಷ್ಟು ಕಚ್ಚಾತೈಲ ಇದೆ ಎಂಬ ವರದಿ ಇರುವಾಗ ಹಳೆಯ ದರದಲ್ಲಿ ಖರೀದಿಸಿದುದರ ಬೆಲೆ ಈಗಲೇ ಏರಿಸಿರುವುದು ಏಕೆ? ಎಂದು ಕೇಳಿದ್ದಾರೆ.</p>.<p>‘ಈಗಾಗಲೇ ಜನರ ಜೀವನ ವೆಚ್ಚ ಅತಿಯಾಗಿದೆ. ಅದಕ್ಕೆ ತಕ್ಕಂತೆ ವೇತನ ಹೆಚ್ಚಳ ಅಥವಾ ಉದ್ಯೋಗ ಸೃಷ್ಟಿ ಆಗಿಲ್ಲ. ದುಡಿಯುವ ಜನ ಸಾಲ ಮಾಡಿಯೇ ಬದುಕಬೇಕಾದ ಪರಿಸ್ಥಿತಿ ಇದೆ. ಹೀಗಿರುವಾಗ, ಇಂಧನ ದರ ಹೆಚ್ಚಳ ಇನ್ನಷ್ಟು ಹಣದುಬ್ಬರಕ್ಕೆ ಕಾರಣವಾಗಲಿದೆ ಎಂಬ ಕನಿಷ್ಠ ತಿಳಿವಳಿಕೆ ಈ ಸರ್ಕಾರಕ್ಕೆ ಇರಬೇಕಿತ್ತು. ಕೇಂದ್ರ ಸರ್ಕಾರದ ಈ ಅಮಾನವೀಯ ಧೋರಣೆಯನ್ನು ಪಕ್ಷ ಕಟುವಾಗಿ ವಿರೋಧಿಸುತ್ತದೆ’ ಎಂದು<br /> ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕೇಂದ್ರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗೃಹ<br>ಬಳಕೆಯ ಅನಿಲ ಸಿಲಿಂಡರ್ಗೆ ₹ 60<br>ಮತ್ತು ವಾಣಿಜ್ಯ ಬಳಕೆಯ ಸಿಲಿಂಡ<br>ರ್ಗೆ ₹ 114 ಹೆಚ್ಚಿಸಿ<br>ರುವ ಕ್ರಮ ಖಂಡ<br>ನೀಯ’ ಎಂದು ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ ತಿಳಿಸಿದ್ದಾರೆ.</p>.<p>‘ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿಸುತ್ತಿದ್ದಾಗ, ಅದರ <br>ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿ<br>ಸಲಿಲ್ಲವೇಕೆ? ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವಂತೆ ಅಮೆರಿಕ ಹಾಕಿದ ಒತ್ತಡಕ್ಕೆ ಮಣಿದಿರುವುದು ಯಾರ ಹಿತಾಸಕ್ತಿಗಾಗಿ? ಇನ್ನು 50 ದಿನಗಳಿಗೆ ಬೇಕಾದಷ್ಟು ಕಚ್ಚಾತೈಲ ಇದೆ ಎಂಬ ವರದಿ ಇರುವಾಗ ಹಳೆಯ ದರದಲ್ಲಿ ಖರೀದಿಸಿದುದರ ಬೆಲೆ ಈಗಲೇ ಏರಿಸಿರುವುದು ಏಕೆ? ಎಂದು ಕೇಳಿದ್ದಾರೆ.</p>.<p>‘ಈಗಾಗಲೇ ಜನರ ಜೀವನ ವೆಚ್ಚ ಅತಿಯಾಗಿದೆ. ಅದಕ್ಕೆ ತಕ್ಕಂತೆ ವೇತನ ಹೆಚ್ಚಳ ಅಥವಾ ಉದ್ಯೋಗ ಸೃಷ್ಟಿ ಆಗಿಲ್ಲ. ದುಡಿಯುವ ಜನ ಸಾಲ ಮಾಡಿಯೇ ಬದುಕಬೇಕಾದ ಪರಿಸ್ಥಿತಿ ಇದೆ. ಹೀಗಿರುವಾಗ, ಇಂಧನ ದರ ಹೆಚ್ಚಳ ಇನ್ನಷ್ಟು ಹಣದುಬ್ಬರಕ್ಕೆ ಕಾರಣವಾಗಲಿದೆ ಎಂಬ ಕನಿಷ್ಠ ತಿಳಿವಳಿಕೆ ಈ ಸರ್ಕಾರಕ್ಕೆ ಇರಬೇಕಿತ್ತು. ಕೇಂದ್ರ ಸರ್ಕಾರದ ಈ ಅಮಾನವೀಯ ಧೋರಣೆಯನ್ನು ಪಕ್ಷ ಕಟುವಾಗಿ ವಿರೋಧಿಸುತ್ತದೆ’ ಎಂದು<br /> ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>