ಶುಕ್ರವಾರ ರಾತ್ರಿ 8.30ರ ಸಮಯದಲ್ಲಿ ಬೆಂಕಿ ಬಿದ್ದಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಗ್ರಾಮಸ್ಥರು ಬರುವಷ್ಟರಲ್ಲಿ ಜಮೀನಿನ ಎಲ್ಲಾ ಭಾಗಕ್ಕೂ ಬೆಂಕಿ ಹರಡಿದ್ದರಿಂದ ನಂದಿಸಲು ಸಾಧ್ಯವಾಗಿಲ್ಲ. 15 ದಿನದ ಹಿಂದಷ್ಟೇ 50 ಟನ್ ಕಬ್ಬು ಕಟಾವು ಮಾಡಿ ಮಾರಲಾಗಿತ್ತು. ಉಳಿದ 60 ಟನ್ ಕಬ್ಬನ್ನು ಕೊರೊನಾ ವೈರಸ್ ಹರಡುತ್ತಿರುವುದರಿಂದ ಕಟಾವು ಮಾಡಲಾಗಿರಲಿಲ್ಲ ಎಂಬುದು ತಿಳಿದು ಬಂದಿದೆ.