<p><strong>ಮೈಸೂರು:</strong> ‘ಕೇಂದ್ರ ಸರ್ಕಾರ ಎರಡು ವರ್ಷದಿಂದ ಕಬ್ಬಿನ ಎಫ್ಆರ್ಪಿ ದರ ಏರಿಕೆ ಮಾಡದಿರುವುದು ಅವೈಜ್ಞಾನಿಕವಾಗಿದೆ’ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ.</p>.<p>‘ಶೇ 10 ಸಕ್ಕರೆ ಇಳುವರಿ ಬರುವ ಪ್ರತಿ ಟನ್ ಕಬ್ಬಿಗೆ ₹ 100 ಹೆಚ್ಚಿಸಿ, ₹ 2850 ನಿಗದಿ ಪಡಿಸಲಾಗಿದೆ. ಇದು ಕಬ್ಬು ಬೆಳೆಗಾರರಿಗೆ ಹೊಡೆತವಾಗಿದೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಪ್ರತಿ ಟನ್ ಕಬ್ಬಿನ ಉತ್ಪಾದನಾ ವೆಚ್ಚ ₹ 3200 ಆಗಲಿದೆ. ಇದನ್ನು ಪರಿಗಣಿಸದೆ, ಕಬ್ಬಿಗೆ ನ್ಯಾಯೋಚಿತ ಬೆಲೆ ನಿಗದಿ ಮಾಡಿರುವುದು ಅನ್ಯಾಯವಾಗಿದೆ. ರಾಜ್ಯ ಸರ್ಕಾರ ಕೂಡಲೇ ಈ ದರವನ್ನು ಪುನರ್ ಪರಿಶೀಲಿಸಿ, ಎಸ್ಎಪಿ ಕಾಯ್ದೆಯಡಿ ಹೆಚ್ಚುವರಿ ಬೆಲೆ ನಿಗದಿ ಪಡಿಸಿ, ಕಬ್ಬಿನ ಬೆಳೆಗಾರರನ್ನು ರಕ್ಷಿಸಬೇಕು’ ಎಂದು ಕುರಬೂರು ಆಗ್ರಹಿಸಿದ್ದಾರೆ.</p>.<p>‘ಹಲವು ಕಾರ್ಖಾನೆಗಳು ಬೆಳೆಗಾರರಿಗೆ ಇನ್ನೂ ಕಬ್ಬಿನ ಬಾಕಿ ಪಾವತಿಸಿಲ್ಲ. ಸಕ್ಕರೆ ಸಚಿವರು ಇತ್ತ ಗಮನ ಹರಿಸಬೇಕು. ಜೊತೆಗೆ ಕಬ್ಬಿನ ಬೆಳೆಯನ್ನು ಫಸಲ್ ಬೀಮಾ ಬೆಳೆ ವ್ಯಾಪ್ತಿಗೆ ಸೇರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕೇಂದ್ರ ಸರ್ಕಾರ ಎರಡು ವರ್ಷದಿಂದ ಕಬ್ಬಿನ ಎಫ್ಆರ್ಪಿ ದರ ಏರಿಕೆ ಮಾಡದಿರುವುದು ಅವೈಜ್ಞಾನಿಕವಾಗಿದೆ’ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ.</p>.<p>‘ಶೇ 10 ಸಕ್ಕರೆ ಇಳುವರಿ ಬರುವ ಪ್ರತಿ ಟನ್ ಕಬ್ಬಿಗೆ ₹ 100 ಹೆಚ್ಚಿಸಿ, ₹ 2850 ನಿಗದಿ ಪಡಿಸಲಾಗಿದೆ. ಇದು ಕಬ್ಬು ಬೆಳೆಗಾರರಿಗೆ ಹೊಡೆತವಾಗಿದೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಪ್ರತಿ ಟನ್ ಕಬ್ಬಿನ ಉತ್ಪಾದನಾ ವೆಚ್ಚ ₹ 3200 ಆಗಲಿದೆ. ಇದನ್ನು ಪರಿಗಣಿಸದೆ, ಕಬ್ಬಿಗೆ ನ್ಯಾಯೋಚಿತ ಬೆಲೆ ನಿಗದಿ ಮಾಡಿರುವುದು ಅನ್ಯಾಯವಾಗಿದೆ. ರಾಜ್ಯ ಸರ್ಕಾರ ಕೂಡಲೇ ಈ ದರವನ್ನು ಪುನರ್ ಪರಿಶೀಲಿಸಿ, ಎಸ್ಎಪಿ ಕಾಯ್ದೆಯಡಿ ಹೆಚ್ಚುವರಿ ಬೆಲೆ ನಿಗದಿ ಪಡಿಸಿ, ಕಬ್ಬಿನ ಬೆಳೆಗಾರರನ್ನು ರಕ್ಷಿಸಬೇಕು’ ಎಂದು ಕುರಬೂರು ಆಗ್ರಹಿಸಿದ್ದಾರೆ.</p>.<p>‘ಹಲವು ಕಾರ್ಖಾನೆಗಳು ಬೆಳೆಗಾರರಿಗೆ ಇನ್ನೂ ಕಬ್ಬಿನ ಬಾಕಿ ಪಾವತಿಸಿಲ್ಲ. ಸಕ್ಕರೆ ಸಚಿವರು ಇತ್ತ ಗಮನ ಹರಿಸಬೇಕು. ಜೊತೆಗೆ ಕಬ್ಬಿನ ಬೆಳೆಯನ್ನು ಫಸಲ್ ಬೀಮಾ ಬೆಳೆ ವ್ಯಾಪ್ತಿಗೆ ಸೇರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>