<p><strong>ಮೈಸೂರು:</strong> ‘ಪ್ರತಿ ಟನ್ ಕಬ್ಬಿಗೆ ₹ 100 ಹೆಚ್ಚುವರಿ ದರ ನಿಗದಿ ಮಾಡಿರುವ ಆದೇಶವನ್ನು ಇಡೀ ರಾಜ್ಯಕ್ಕೆ ಅನ್ವಯ ಆಗುವಂತೆ ತಿದ್ದುಪಡಿ ತರಬೇಕು’ ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. </p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಮುಖ್ಯಮಂತ್ರಿ ಅವರಿಗೆ ಮನವಿ ನೀಡಿದ ಮುಖಂಡರು, ‘ಬೆಳಗಾವಿಯ ರೈತ ಚಳವಳಿ ಗಂಭೀರತೆಯನ್ನು ಮನಗಂಡು ಎಫ್ಆರ್ಪಿ ದರದ ಮೇಲೆ ಸಕ್ಕರೆ ಕಾರ್ಖಾನೆಗಳಿಂದ ₹ 50 ಹಾಗೂ ಸರ್ಕಾರದಿಂದ ₹ 50 ನೀಡುವುದಾಗಿ ಘೋಷಣೆ ಮಾಡಲಾಗಿದೆ. ಎಫ್ಆರ್ಪಿ ಹಣ ಪಾವತಿ ವೇಳೆಯಿಂದಲೇ ಈ ನಿಯಮ ಅನ್ವಯ ಆಗುವಂತೆ ಮಾಡಬೇಕು’ ಎಂದು ಕೋರಿದರು. </p>.<p>‘20 ದಿನದಲ್ಲಿ ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮೂವರು ರೈತರು ಮೃತಪಟ್ಟಿದ್ದು, ಮತ್ತೊಬ್ಬರು ಸಾವು– ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲೇ ಮಾನವ– ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು. </p>.<p>ಮುಖಂಡರಾದ ಕಿರಗಸೂರು ಶಂಕರ್, ವರಕೋಡು ಎಂ.ನಾಗೇಶ್, ಲಕ್ಷ್ಮಿಪುರ ವೆಂಕಟೇಶ್, ವಾಜಮಂಗಲ ಮಹದೇವು, ಬಿ.ಜಯರಾಮ ವರಕೋಡು, ರಂಗರಾಜು, ಪ್ರಭಾಕರ್ ವರುಣ, ಆರ್.ಬಸವರಾಜು, ಸಿದ್ದರಾಮ, ಶಿವಣ್ಣ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಪ್ರತಿ ಟನ್ ಕಬ್ಬಿಗೆ ₹ 100 ಹೆಚ್ಚುವರಿ ದರ ನಿಗದಿ ಮಾಡಿರುವ ಆದೇಶವನ್ನು ಇಡೀ ರಾಜ್ಯಕ್ಕೆ ಅನ್ವಯ ಆಗುವಂತೆ ತಿದ್ದುಪಡಿ ತರಬೇಕು’ ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. </p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಮುಖ್ಯಮಂತ್ರಿ ಅವರಿಗೆ ಮನವಿ ನೀಡಿದ ಮುಖಂಡರು, ‘ಬೆಳಗಾವಿಯ ರೈತ ಚಳವಳಿ ಗಂಭೀರತೆಯನ್ನು ಮನಗಂಡು ಎಫ್ಆರ್ಪಿ ದರದ ಮೇಲೆ ಸಕ್ಕರೆ ಕಾರ್ಖಾನೆಗಳಿಂದ ₹ 50 ಹಾಗೂ ಸರ್ಕಾರದಿಂದ ₹ 50 ನೀಡುವುದಾಗಿ ಘೋಷಣೆ ಮಾಡಲಾಗಿದೆ. ಎಫ್ಆರ್ಪಿ ಹಣ ಪಾವತಿ ವೇಳೆಯಿಂದಲೇ ಈ ನಿಯಮ ಅನ್ವಯ ಆಗುವಂತೆ ಮಾಡಬೇಕು’ ಎಂದು ಕೋರಿದರು. </p>.<p>‘20 ದಿನದಲ್ಲಿ ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮೂವರು ರೈತರು ಮೃತಪಟ್ಟಿದ್ದು, ಮತ್ತೊಬ್ಬರು ಸಾವು– ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲೇ ಮಾನವ– ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು. </p>.<p>ಮುಖಂಡರಾದ ಕಿರಗಸೂರು ಶಂಕರ್, ವರಕೋಡು ಎಂ.ನಾಗೇಶ್, ಲಕ್ಷ್ಮಿಪುರ ವೆಂಕಟೇಶ್, ವಾಜಮಂಗಲ ಮಹದೇವು, ಬಿ.ಜಯರಾಮ ವರಕೋಡು, ರಂಗರಾಜು, ಪ್ರಭಾಕರ್ ವರುಣ, ಆರ್.ಬಸವರಾಜು, ಸಿದ್ದರಾಮ, ಶಿವಣ್ಣ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>