<p><strong>ಮೈಸೂರು:</strong> ‘ಮಂಡ್ಯ ಜಿಲ್ಲೆಯಲ್ಲಿನ ಗಣಿಗಾರಿಕೆ ಪ್ರದೇಶಕ್ಕೆ ಗಣಿ ಸಚಿವ ಮುರುಗೇಶ ನಿರಾಣಿ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ. ಸಚಿವರ ಪರಿಶೀಲನೆ ಸಂದರ್ಭದಲ್ಲೇ ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ವಹಿಸುವಂತೆ ಆಗ್ರಹಿಸುವೆ’ ಎಂದು ಸಂಸದರಾದ ಸುಮಲತಾ ಬುಧವಾರ ಇಲ್ಲಿ ತಿಳಿಸಿದರು.</p>.<p>ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೆಆರ್ಎಸ್ ರಕ್ಷಣೆಗಾಗಿ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿರುವೆ. ನನ್ನ ಈ ಹೋರಾಟಕ್ಕೆ ಜಲಾಶಯದ ಬಗ್ಗೆ ಕಾಳಜಿ ಇರುವ ಎಲ್ಲರೂ ಕೈಜೋಡಿಸಬೇಕು. ವಿರೋಧ ಪಕ್ಷದವರ ಬೆಂಬಲ ಕೇಳುವ ಮೂಲಕ ಇದನ್ನು ರಾಜಕೀಯಗೊಳಿಸಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಕೆಆರ್ಎಸ್ ಜಲಾಶಯ ಬಿರುಕು ಬಿಟ್ಟಿದೆ ಎಂದು ನಾನು ಎಲ್ಲಿಯೂ ಹೇಳಿಲ್ಲ’ ಎಂದು ಸ್ಪಷ್ಟಪಡಿಸಿದ ಸುಮಲತಾ, ‘ಸಂಸದರ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆಯಲ್ಲಿ ಅಧಿಕಾರಿಗೆ ಕೇಳಿದ ಪ್ರಶ್ನೆಯನ್ನೇ ರಾಜಕೀಯವಾಗಿ ತಿರುಚಲಾಗಿದೆ’ ಎಂದು ಕಿಡಿಕಾರಿದರು.</p>.<p>‘ಜಲಾಶಯದ ಸುತ್ತಮುತ್ತ ನಡೆದಿರುವ ಕಲ್ಲು ಗಣಿಗಾರಿಕೆಯಿಂದ ಕೆಆರ್ಎಸ್ಗೆ ಅಪಾಯವಿದೆ ಎಂದು ತಜ್ಞರು ವರದಿ ನೀಡಿದ್ದಾರೆ. 11 ಬಾರಿ ಜಲಾಶಯದ ಪರಿಸರದಲ್ಲಿ ಲಘುವಾಗಿ ಭೂಮಿ ಕಂಪಿಸಿರುವುದು ದಾಖಲಾಗಿದೆ. ಈ ಬಗ್ಗೆ ರೈತರು ನನ್ನ ಬಳಿ ವ್ಯಕ್ತಪಡಿಸಿದ್ದ ಆತಂಕ, ಕಲ್ಲು ಗಣಿಗಾರಿಕೆ ವಿರುದ್ಧ ಸ್ಥಳೀಯರು ನೀಡಿದ್ದ ದೂರನ್ನು ಆಧರಿಸಿ ದಿಶಾ ಸಭೆಯಲ್ಲಿ ಪ್ರಶ್ನಿಸಿದ್ದೆ’ ಎಂದು ಸಂಸದರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ನಾನು ಎಲ್ಲಿಯೂ ಬೇಜವಾಬ್ದಾರಿಯಿಂದ ಮಾತನಾಡಿಲ್ಲ. ದಿಶಾ ಸಭೆಯಲ್ಲೇ ಪ್ರಶ್ನಿಸಿದ್ದೆ. ರಾಜಕೀಯ ಮಾಡುವುದಾಗಿದ್ದರೆ ಸಾರ್ವಜನಿಕವಾಗಿ ಜನರು ಸೇರಿದ್ದ ಸಭೆಗಳಲ್ಲೇ ಈ ಬಗ್ಗೆ ಮಾತನಾಡುತ್ತಿದ್ದೆ. ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದೆ. ನನ್ನ ಪ್ರಶ್ನೆಯ ಆಶಯವನ್ನೇ ತಿರುಚಿ ರಾಜಕೀಯಗೊಳಿಸಿದ್ದಾರೆ’ ಎಂದು ಸುಮಲತಾ ಹರಿಹಾಯ್ದರು.</p>.<p>‘ಮಂಡ್ಯ, ಶ್ರೀರಂಗಪಟ್ಟಣದ ಕೆಲವೆಡೆ, ಕೆಲವರು ನನ್ನ ಕಾರಿಗೆ ಅಡ್ಡ ಹಾಕುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳ ಮೂಲಕ ಅಡ್ಡಿಪಡಿಸುತ್ತಿದ್ದಾರೆ. ಈ ಕುರಿತಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸುವೆ’ ಎಂದು ಸಂಸದರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮಂಡ್ಯ ಜಿಲ್ಲೆಯಲ್ಲಿನ ಗಣಿಗಾರಿಕೆ ಪ್ರದೇಶಕ್ಕೆ ಗಣಿ ಸಚಿವ ಮುರುಗೇಶ ನಿರಾಣಿ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ. ಸಚಿವರ ಪರಿಶೀಲನೆ ಸಂದರ್ಭದಲ್ಲೇ ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ವಹಿಸುವಂತೆ ಆಗ್ರಹಿಸುವೆ’ ಎಂದು ಸಂಸದರಾದ ಸುಮಲತಾ ಬುಧವಾರ ಇಲ್ಲಿ ತಿಳಿಸಿದರು.</p>.<p>ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೆಆರ್ಎಸ್ ರಕ್ಷಣೆಗಾಗಿ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿರುವೆ. ನನ್ನ ಈ ಹೋರಾಟಕ್ಕೆ ಜಲಾಶಯದ ಬಗ್ಗೆ ಕಾಳಜಿ ಇರುವ ಎಲ್ಲರೂ ಕೈಜೋಡಿಸಬೇಕು. ವಿರೋಧ ಪಕ್ಷದವರ ಬೆಂಬಲ ಕೇಳುವ ಮೂಲಕ ಇದನ್ನು ರಾಜಕೀಯಗೊಳಿಸಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಕೆಆರ್ಎಸ್ ಜಲಾಶಯ ಬಿರುಕು ಬಿಟ್ಟಿದೆ ಎಂದು ನಾನು ಎಲ್ಲಿಯೂ ಹೇಳಿಲ್ಲ’ ಎಂದು ಸ್ಪಷ್ಟಪಡಿಸಿದ ಸುಮಲತಾ, ‘ಸಂಸದರ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆಯಲ್ಲಿ ಅಧಿಕಾರಿಗೆ ಕೇಳಿದ ಪ್ರಶ್ನೆಯನ್ನೇ ರಾಜಕೀಯವಾಗಿ ತಿರುಚಲಾಗಿದೆ’ ಎಂದು ಕಿಡಿಕಾರಿದರು.</p>.<p>‘ಜಲಾಶಯದ ಸುತ್ತಮುತ್ತ ನಡೆದಿರುವ ಕಲ್ಲು ಗಣಿಗಾರಿಕೆಯಿಂದ ಕೆಆರ್ಎಸ್ಗೆ ಅಪಾಯವಿದೆ ಎಂದು ತಜ್ಞರು ವರದಿ ನೀಡಿದ್ದಾರೆ. 11 ಬಾರಿ ಜಲಾಶಯದ ಪರಿಸರದಲ್ಲಿ ಲಘುವಾಗಿ ಭೂಮಿ ಕಂಪಿಸಿರುವುದು ದಾಖಲಾಗಿದೆ. ಈ ಬಗ್ಗೆ ರೈತರು ನನ್ನ ಬಳಿ ವ್ಯಕ್ತಪಡಿಸಿದ್ದ ಆತಂಕ, ಕಲ್ಲು ಗಣಿಗಾರಿಕೆ ವಿರುದ್ಧ ಸ್ಥಳೀಯರು ನೀಡಿದ್ದ ದೂರನ್ನು ಆಧರಿಸಿ ದಿಶಾ ಸಭೆಯಲ್ಲಿ ಪ್ರಶ್ನಿಸಿದ್ದೆ’ ಎಂದು ಸಂಸದರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ನಾನು ಎಲ್ಲಿಯೂ ಬೇಜವಾಬ್ದಾರಿಯಿಂದ ಮಾತನಾಡಿಲ್ಲ. ದಿಶಾ ಸಭೆಯಲ್ಲೇ ಪ್ರಶ್ನಿಸಿದ್ದೆ. ರಾಜಕೀಯ ಮಾಡುವುದಾಗಿದ್ದರೆ ಸಾರ್ವಜನಿಕವಾಗಿ ಜನರು ಸೇರಿದ್ದ ಸಭೆಗಳಲ್ಲೇ ಈ ಬಗ್ಗೆ ಮಾತನಾಡುತ್ತಿದ್ದೆ. ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದೆ. ನನ್ನ ಪ್ರಶ್ನೆಯ ಆಶಯವನ್ನೇ ತಿರುಚಿ ರಾಜಕೀಯಗೊಳಿಸಿದ್ದಾರೆ’ ಎಂದು ಸುಮಲತಾ ಹರಿಹಾಯ್ದರು.</p>.<p>‘ಮಂಡ್ಯ, ಶ್ರೀರಂಗಪಟ್ಟಣದ ಕೆಲವೆಡೆ, ಕೆಲವರು ನನ್ನ ಕಾರಿಗೆ ಅಡ್ಡ ಹಾಕುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳ ಮೂಲಕ ಅಡ್ಡಿಪಡಿಸುತ್ತಿದ್ದಾರೆ. ಈ ಕುರಿತಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸುವೆ’ ಎಂದು ಸಂಸದರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>