ಮೈಸೂರು: ‘ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ ಲೈಂಗಿಕ ದೌರ್ಜನ್ಯ ವಿರೋಧಿಸಿ, ಸಂತ್ರಸ್ತೆಯರಿಗೆ ನೈತಿಕ ಬೆಂಬಲ ಘೋಷಿಸಿ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಮ್ಮಿಕೊಂಡಿರುವ ಹಾಸನ ಚಲೋಗೆ ಜಿಲ್ಲಾ ಸಿಐಟಿಯು ಸಹಕಾರ ನೀಡುತ್ತಿದ್ದು, ಕಾರ್ಮಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ರಾಜ್ಯ ಕಾರ್ಯದರ್ಶಿ ಎಚ್.ಎಸ್.ಸುನಂದಾ ತಿಳಿಸಿದರು.