<p>ಮೈಸೂರು: ‘ಸುಸ್ಥಿರ ಅಭಿವೃದ್ಧಿಯ ಮೂಲಕ ಜಗತ್ತು ಬದಲಾಯಿಸುವ ಶಕ್ತಿಯಿದ್ದು, ಆ ನಿಟ್ಟಿನಲ್ಲಿ ಯುವ ಸಮುದಾಯವು ಮುಂದಾಗಬೇಕು’ ಎಂದು ಕನಾಸ್ ಸ್ಟೇಟ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ರಾಜು ದಂಡು ತಿಳಿಸಿದರು.</p>.<p>ಇಲ್ಲಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು ವೇದಿಕೆ ಹಾಗೂ ಇಂಡೊ ಯುನಿವರ್ಸಲ್ ಎಂಜಿನಿಯರಿಂಗ್ ಶಿಕ್ಷಣ (ಐಯುಸಿಇಇ) ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳ ವೇದಿಕೆಯಿಂದ ಬುಧವಾರ ಹಮ್ಮಿಕೊಂಡಿದ್ದ ‘ಸುಸ್ಥಿರ ಅಭಿವೃದ್ಧಿ– ಜಗತ್ತಿನ ಬದಲಾವಣೆ’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಜಾಗತಿಕ ತಾಪಮಾನದ ನಿಯಂತ್ರಣದ ನಿಟ್ಟಿನಲ್ಲಿ ಸುಸ್ಥಿರ ಅಭಿವೃದ್ಧಿ ಹಿಂದೆಂದಿಗಿಂತಲೂ ಹೆಚ್ಚಿನ ಅಗತ್ಯವಿದ್ದು, ಗುರಿ ಸಾಧಿಸುವ ನಿಟ್ಟಿನಲ್ಲಿ ವಿಶ್ವಾಸ ಮೂಡಿಸಲು ಪ್ರಾಮಾಣಿಕ, ದಯೆ, ಗೌರವದ ಕಡೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಒಕ್ಲೊಹಾಮಾ ಸ್ಟೇಟ್ ಯೂನಿವರ್ಸಿಟಿಯ ಪ್ರಾಧ್ಯಾಪಕ ಡಾ.ರಂಜಿ ವೈದ್ಯನಾಥನ್ ಮಾತನಾಡಿ, ‘ವಿದ್ಯಾರ್ಥಿಗಳು ಜಾಗತಿಕ ಬದಲಾವಣೆಗಳನ್ನು ಗುರುತಿಸಿ, ಸ್ಥಳೀಯವಾಗಿ ಮನೆ, ಕಾಲೇಜು, ನಗರ ಹಾಗೂ ತಮ್ಮ ರಾಜ್ಯದಲ್ಲಿ ಸುಸ್ಥಿರ ಯೋಜನೆಗಳನ್ನು ಜಾರಿಗೊಳಿಸಬೇಕು’ ಎಂದರು.</p>.<p>ವಿವಿಸಿಇ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಸದಾಶಿವೇಗೌಡ, ವಿ.ವಿ. ಸಂಘದ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್, ಗೌರವ ಉಪಾಧ್ಯಕ್ಷ ಬಿ.ಶಿವಲಿಂಗಪ್ಪ, ಐಯುಸಿಸಿಐನ ನಿರ್ದೇಶಕಿ ಸಂಪದ ಪಚೌರಿ ಇದ್ದರು.</p>.<p>ಸ್ಮಾರ್ಟರ್ ಧರ್ಮದ ಸಹಸಂಸ್ಥಾಪಕ ಕಾರ್ತಿಕ್ ಪೊನ್ನಪ್ಪ, ಯುಎನ್ಇಪಿ ರಾಯಭಾರಿ ಸ್ನೇಹ ಸಾಹಿ, ಎಸ್ಡಿಜಿ–13 ಪ್ರಾಜೆಕ್ಟ್ ರೀಸರ್ಜ್ ಅಸೋಸಿಯೇಟ್ ಬೆರ್ಜಿಸ್, ಕ್ಲೈಮೆಟ್ ಆ್ಯಕ್ಟ್ ಫೌಂಡೇಶನ್ನನ ಹೀತಾ ಲಖಾನಿ, ಬ್ರಿಂಗ್ ಬ್ಯಾಕ್ ಗ್ರೀನ್ ಫೌಂಡೇಶನ್ನ ಅಖಿಲೇಶ್ ಅನಿಲ್ ಕುಮಾರ್ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಸುಸ್ಥಿರ ಅಭಿವೃದ್ಧಿಯ ಮೂಲಕ ಜಗತ್ತು ಬದಲಾಯಿಸುವ ಶಕ್ತಿಯಿದ್ದು, ಆ ನಿಟ್ಟಿನಲ್ಲಿ ಯುವ ಸಮುದಾಯವು ಮುಂದಾಗಬೇಕು’ ಎಂದು ಕನಾಸ್ ಸ್ಟೇಟ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ರಾಜು ದಂಡು ತಿಳಿಸಿದರು.</p>.<p>ಇಲ್ಲಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು ವೇದಿಕೆ ಹಾಗೂ ಇಂಡೊ ಯುನಿವರ್ಸಲ್ ಎಂಜಿನಿಯರಿಂಗ್ ಶಿಕ್ಷಣ (ಐಯುಸಿಇಇ) ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳ ವೇದಿಕೆಯಿಂದ ಬುಧವಾರ ಹಮ್ಮಿಕೊಂಡಿದ್ದ ‘ಸುಸ್ಥಿರ ಅಭಿವೃದ್ಧಿ– ಜಗತ್ತಿನ ಬದಲಾವಣೆ’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಜಾಗತಿಕ ತಾಪಮಾನದ ನಿಯಂತ್ರಣದ ನಿಟ್ಟಿನಲ್ಲಿ ಸುಸ್ಥಿರ ಅಭಿವೃದ್ಧಿ ಹಿಂದೆಂದಿಗಿಂತಲೂ ಹೆಚ್ಚಿನ ಅಗತ್ಯವಿದ್ದು, ಗುರಿ ಸಾಧಿಸುವ ನಿಟ್ಟಿನಲ್ಲಿ ವಿಶ್ವಾಸ ಮೂಡಿಸಲು ಪ್ರಾಮಾಣಿಕ, ದಯೆ, ಗೌರವದ ಕಡೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಒಕ್ಲೊಹಾಮಾ ಸ್ಟೇಟ್ ಯೂನಿವರ್ಸಿಟಿಯ ಪ್ರಾಧ್ಯಾಪಕ ಡಾ.ರಂಜಿ ವೈದ್ಯನಾಥನ್ ಮಾತನಾಡಿ, ‘ವಿದ್ಯಾರ್ಥಿಗಳು ಜಾಗತಿಕ ಬದಲಾವಣೆಗಳನ್ನು ಗುರುತಿಸಿ, ಸ್ಥಳೀಯವಾಗಿ ಮನೆ, ಕಾಲೇಜು, ನಗರ ಹಾಗೂ ತಮ್ಮ ರಾಜ್ಯದಲ್ಲಿ ಸುಸ್ಥಿರ ಯೋಜನೆಗಳನ್ನು ಜಾರಿಗೊಳಿಸಬೇಕು’ ಎಂದರು.</p>.<p>ವಿವಿಸಿಇ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಸದಾಶಿವೇಗೌಡ, ವಿ.ವಿ. ಸಂಘದ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್, ಗೌರವ ಉಪಾಧ್ಯಕ್ಷ ಬಿ.ಶಿವಲಿಂಗಪ್ಪ, ಐಯುಸಿಸಿಐನ ನಿರ್ದೇಶಕಿ ಸಂಪದ ಪಚೌರಿ ಇದ್ದರು.</p>.<p>ಸ್ಮಾರ್ಟರ್ ಧರ್ಮದ ಸಹಸಂಸ್ಥಾಪಕ ಕಾರ್ತಿಕ್ ಪೊನ್ನಪ್ಪ, ಯುಎನ್ಇಪಿ ರಾಯಭಾರಿ ಸ್ನೇಹ ಸಾಹಿ, ಎಸ್ಡಿಜಿ–13 ಪ್ರಾಜೆಕ್ಟ್ ರೀಸರ್ಜ್ ಅಸೋಸಿಯೇಟ್ ಬೆರ್ಜಿಸ್, ಕ್ಲೈಮೆಟ್ ಆ್ಯಕ್ಟ್ ಫೌಂಡೇಶನ್ನನ ಹೀತಾ ಲಖಾನಿ, ಬ್ರಿಂಗ್ ಬ್ಯಾಕ್ ಗ್ರೀನ್ ಫೌಂಡೇಶನ್ನ ಅಖಿಲೇಶ್ ಅನಿಲ್ ಕುಮಾರ್ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>