<p><strong>ನಂಜನಗೂಡು: ‘ಸು</strong>ತ್ತೂರು ಶ್ರೀಮಠ ರೈತರಿಗೆ ಆಧುನಿಕ ಕೃಷಿ, ಸಸ್ಯ ಸಂರಕ್ಷಣೆ, ಹೈನುಗಾರಿಕೆ ತರಬೇತಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸೇವೆ ನೀಡುವ ಮೂಲಕ ಈ ಭಾಗದ ರೈತರ ಬದುಕಿನ ಭಾಗವಾಗಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ತಾಲ್ಲೂಕಿನ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಸೋಮವಾರ ಕೃಷಿ ಮೇಳ ಹಾಗೂ ದನಗಳ ಜಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ದೇಶ ಸ್ವಾತಂತ್ರ್ಯಾನಂತರ ಆಹಾರೋತ್ಪಾದನೆಯಲ್ಲಿ ಸ್ವಾವಲಂಭನೆ ಸಾಧಿಸಿದ್ದರೂ ಬದಲಾದ ಸನ್ನಿವೇಶದಲ್ಲಿ ಆಹಾರೋತ್ಪಾದನೆಯಲ್ಲಿ ಹೊಸ ಸವಾಲುಗಳು ಎದುರಾಗುತ್ತಿವೆ. ಅವುಗಳನ್ನು ಸರ್ಮಥವಾಗಿ ಎದುರಿಸಲು ಕೃಷಿ ಕ್ಷೇತ್ರವನ್ನು ಶಕ್ತಿಯುತಗೊಳಿಸಬೇಕಿದೆ’ ಎಂದರು.</p>.<p>‘ಮಿತಿಮೀರಿದ ರಾಸಾಯನಿಕ ಬಳಕೆಯಿಂದಾಗಿ ಕೃಷಿ ಭೂಮಿ ವಿಷಯುಕ್ತವಾಗುತ್ತಿದೆ. ಹೀಗಾಗಿ ಭವಿಷ್ಯದಲ್ಲಿ ಸಾವಯವ ಕೃಷಿಗೆ ಒತ್ತು ನೀಡಬೇಕು. ಆ ಮೂಲಕ ಸುಸ್ಥಿರ ಕೃಷಿಯೊಂದಿಗೆ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಬೇಕು’ ಎಂದು ಹೇಳಿದರು.</p>.<p>ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಶಾಸಕಿ ಲತಾ ಮಲ್ಲಿಕಾರ್ಜುನ್ ಮಾತನಾಡಿದರು.</p>.<p>ಮಾಜಿ ಶಾಸಕ ನಿರಂಜನ್ ಕುಮಾರ್, ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್, ಮೂಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ವೇಲುಸ್ವಾಮಿ, ಶರವಣನ್, ಉಪಾಧ್ಯಕ್ಷ ಸತೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು: ‘ಸು</strong>ತ್ತೂರು ಶ್ರೀಮಠ ರೈತರಿಗೆ ಆಧುನಿಕ ಕೃಷಿ, ಸಸ್ಯ ಸಂರಕ್ಷಣೆ, ಹೈನುಗಾರಿಕೆ ತರಬೇತಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸೇವೆ ನೀಡುವ ಮೂಲಕ ಈ ಭಾಗದ ರೈತರ ಬದುಕಿನ ಭಾಗವಾಗಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ತಾಲ್ಲೂಕಿನ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಸೋಮವಾರ ಕೃಷಿ ಮೇಳ ಹಾಗೂ ದನಗಳ ಜಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ದೇಶ ಸ್ವಾತಂತ್ರ್ಯಾನಂತರ ಆಹಾರೋತ್ಪಾದನೆಯಲ್ಲಿ ಸ್ವಾವಲಂಭನೆ ಸಾಧಿಸಿದ್ದರೂ ಬದಲಾದ ಸನ್ನಿವೇಶದಲ್ಲಿ ಆಹಾರೋತ್ಪಾದನೆಯಲ್ಲಿ ಹೊಸ ಸವಾಲುಗಳು ಎದುರಾಗುತ್ತಿವೆ. ಅವುಗಳನ್ನು ಸರ್ಮಥವಾಗಿ ಎದುರಿಸಲು ಕೃಷಿ ಕ್ಷೇತ್ರವನ್ನು ಶಕ್ತಿಯುತಗೊಳಿಸಬೇಕಿದೆ’ ಎಂದರು.</p>.<p>‘ಮಿತಿಮೀರಿದ ರಾಸಾಯನಿಕ ಬಳಕೆಯಿಂದಾಗಿ ಕೃಷಿ ಭೂಮಿ ವಿಷಯುಕ್ತವಾಗುತ್ತಿದೆ. ಹೀಗಾಗಿ ಭವಿಷ್ಯದಲ್ಲಿ ಸಾವಯವ ಕೃಷಿಗೆ ಒತ್ತು ನೀಡಬೇಕು. ಆ ಮೂಲಕ ಸುಸ್ಥಿರ ಕೃಷಿಯೊಂದಿಗೆ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಬೇಕು’ ಎಂದು ಹೇಳಿದರು.</p>.<p>ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಶಾಸಕಿ ಲತಾ ಮಲ್ಲಿಕಾರ್ಜುನ್ ಮಾತನಾಡಿದರು.</p>.<p>ಮಾಜಿ ಶಾಸಕ ನಿರಂಜನ್ ಕುಮಾರ್, ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್, ಮೂಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ವೇಲುಸ್ವಾಮಿ, ಶರವಣನ್, ಉಪಾಧ್ಯಕ್ಷ ಸತೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>