<p><strong>ಸುತ್ತೂರು (ಮೈಸೂರು ಜಿಲ್ಲೆ):</strong> ಇಲ್ಲಿ ಸುತ್ತೂರು ಮಠದಿಂದ ನಡೆದಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ರಾತ್ರಿ ಕಪಿನಾ ನದಿಯಲ್ಲಿ ಜರುಗಿದ ತೆಪ್ಪೋತ್ಸವ ಸಾರ್ವಜನಿರನ್ನು ಆಕರ್ಷಿಸಿತು.</p><p>ಈ ವರ್ಷದ ಜಾತ್ರೆಯಲ್ಲಿ ವಿಶೇಷವಾಗಿ ಸಿದ್ಧಪಡಿಸಲಾದ ತೆಪ್ಪ ನೆರೆದಿದ್ದವರ ಗಮನಸೆಳೆಯಿತು. ತೆಪ್ಪದ ಸುತ್ತಲೂ 16 ನಂದಿಗಳನ್ನು ಸ್ಥಾಪಿಸಿದ್ದ ಆಕರ್ಷಕ ವಿನ್ಯಾಸದ 8 ಕಂಬಗಳು ಹಾಗೂ ಚಿತ್ರಗಳನ್ನು ಒಳಗೊಂಡ ಭವ್ಯವಾದ ಮಂಟಪವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮೋಟಾರ್ಚಾಲಿತ ಈ ತೆಪ್ಪಕ್ಕೆ ವಿಶೇಷವಾದ ದೀಪಾಲಂಕಾರ ಮಾಡಲಾಗಿತ್ತು. ಬಾಣಬಿರುಸುಗಳ ಹಿನ್ನೆಲೆಯಲ್ಲಿ ತೆಪ್ಪೋತ್ಸವವು ನೋಡುಗರ ಕಣ್ಮನಸೆಳೆಯಿತು.</p><p>ತೆಪ್ಪೋತ್ಸವ ಜೊತೆಗೆ ಕಪಿಲಾ ಆರತಿಯೂ ನಡೆಯಿತು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕರಾದ ಅನಿಲ್ ಚಿಕ್ಕಮಾದು, ಎಂ.ಆರ್. ಮಂಜುನಾಥ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುತ್ತೂರು (ಮೈಸೂರು ಜಿಲ್ಲೆ):</strong> ಇಲ್ಲಿ ಸುತ್ತೂರು ಮಠದಿಂದ ನಡೆದಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ರಾತ್ರಿ ಕಪಿನಾ ನದಿಯಲ್ಲಿ ಜರುಗಿದ ತೆಪ್ಪೋತ್ಸವ ಸಾರ್ವಜನಿರನ್ನು ಆಕರ್ಷಿಸಿತು.</p><p>ಈ ವರ್ಷದ ಜಾತ್ರೆಯಲ್ಲಿ ವಿಶೇಷವಾಗಿ ಸಿದ್ಧಪಡಿಸಲಾದ ತೆಪ್ಪ ನೆರೆದಿದ್ದವರ ಗಮನಸೆಳೆಯಿತು. ತೆಪ್ಪದ ಸುತ್ತಲೂ 16 ನಂದಿಗಳನ್ನು ಸ್ಥಾಪಿಸಿದ್ದ ಆಕರ್ಷಕ ವಿನ್ಯಾಸದ 8 ಕಂಬಗಳು ಹಾಗೂ ಚಿತ್ರಗಳನ್ನು ಒಳಗೊಂಡ ಭವ್ಯವಾದ ಮಂಟಪವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮೋಟಾರ್ಚಾಲಿತ ಈ ತೆಪ್ಪಕ್ಕೆ ವಿಶೇಷವಾದ ದೀಪಾಲಂಕಾರ ಮಾಡಲಾಗಿತ್ತು. ಬಾಣಬಿರುಸುಗಳ ಹಿನ್ನೆಲೆಯಲ್ಲಿ ತೆಪ್ಪೋತ್ಸವವು ನೋಡುಗರ ಕಣ್ಮನಸೆಳೆಯಿತು.</p><p>ತೆಪ್ಪೋತ್ಸವ ಜೊತೆಗೆ ಕಪಿಲಾ ಆರತಿಯೂ ನಡೆಯಿತು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕರಾದ ಅನಿಲ್ ಚಿಕ್ಕಮಾದು, ಎಂ.ಆರ್. ಮಂಜುನಾಥ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>