<p><strong>ಮೈಸೂರು:</strong> ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 39ನೇ ಪುಣ್ಯಾರಾಧನೆ ಕಾರ್ಯಕ್ರಮ ಮಂಗಳವಾರ ನಡೆಯಿತು.</p>.<p>ಶಿವರಾತ್ರೀಶ್ವರ ಶಿವಯೋಗಿಗಳ ಕರ್ತೃಗದ್ದುಗೆ ಹಾಗೂ ರಾಜೇಂದ್ರ ಶ್ರೀ ಗದ್ದುಗೆಗೆ ರುದ್ರಾಭಿಷೇಕ, ಅಷ್ಟೋತ್ತರ ಮೊದಲಾದ ವಿಶೇಷ ಪೂಜೆಗಳು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನೆರವೇರಿದವು. </p>.<p>ಮುಂದಿನ ವರ್ಷದ ಜ.15ರಿಂದ 20ರವರೆಗೆ ಶ್ರೀಕ್ಷೇತ್ರದಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಮಂಟಪಗಳ ಭೂಮಿಪೂಜೆಯನ್ನೂ ನೆರವೇರಿಸಲಾಯಿತು. ಜಾತ್ರೆಯ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.</p>.<p>ವಾಟಾಳು, ಹೊಸಮಠ, ಹುಲಿಯೂರುದುರ್ಗ, ಕುದೇರು, ನೀಲಕಂಠಸ್ವಾಮಿಮಠ, ಪಡುಗೂರು, ನಂಜನಗೂಡು, ಹುಲ್ಲಹಳ್ಳಿ, ಆಲಮಟ್ಟಿ, ಮಾದಾಪುರ, ಶಿರಮಹಳ್ಳಿ, ಚಿಲಕವಾಡಿ, ಬೆಟ್ಟದಪುರ, ದಂಡಿಕೆರೆ, ಸಾಲೂರು, ಹಲಗೂರು, ಹರವೆ, ಚಿಕ್ಕತುಪ್ಪೂರು, ಚುಂಚನಹಳ್ಳಿ, ಕುಂದೂರು, ಮುಡಿಗುಂಡ, ದೊಡ್ಡಬಳ್ಳಾಪುರ, ಅರಕೆರೆ, ಮಾದಳ್ಳಿ, ರಾಗಿಬೊಮ್ಮನಹಳ್ಳಿ, ಕಸುವಿನಹಳ್ಳಿ, ಬಸವೇಶ್ವರ ಮಠದ ಶ್ರೀಗಳು, ಮುಖಂಡರು ಪಾಲ್ಗೊಂಡಿದ್ದರು.</p>.<p>ಪ್ರೊ.ಸುಬ್ಬಪ್ಪ ಸ್ವಾಗತಿಸಿದರು. ಸಿ.ವಿ. ಬಸವರಾಜು ವಂದಿಸಿದರು. ಎಚ್.ಎಲ್. ಪ್ರಕಾಶ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 39ನೇ ಪುಣ್ಯಾರಾಧನೆ ಕಾರ್ಯಕ್ರಮ ಮಂಗಳವಾರ ನಡೆಯಿತು.</p>.<p>ಶಿವರಾತ್ರೀಶ್ವರ ಶಿವಯೋಗಿಗಳ ಕರ್ತೃಗದ್ದುಗೆ ಹಾಗೂ ರಾಜೇಂದ್ರ ಶ್ರೀ ಗದ್ದುಗೆಗೆ ರುದ್ರಾಭಿಷೇಕ, ಅಷ್ಟೋತ್ತರ ಮೊದಲಾದ ವಿಶೇಷ ಪೂಜೆಗಳು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನೆರವೇರಿದವು. </p>.<p>ಮುಂದಿನ ವರ್ಷದ ಜ.15ರಿಂದ 20ರವರೆಗೆ ಶ್ರೀಕ್ಷೇತ್ರದಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಮಂಟಪಗಳ ಭೂಮಿಪೂಜೆಯನ್ನೂ ನೆರವೇರಿಸಲಾಯಿತು. ಜಾತ್ರೆಯ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.</p>.<p>ವಾಟಾಳು, ಹೊಸಮಠ, ಹುಲಿಯೂರುದುರ್ಗ, ಕುದೇರು, ನೀಲಕಂಠಸ್ವಾಮಿಮಠ, ಪಡುಗೂರು, ನಂಜನಗೂಡು, ಹುಲ್ಲಹಳ್ಳಿ, ಆಲಮಟ್ಟಿ, ಮಾದಾಪುರ, ಶಿರಮಹಳ್ಳಿ, ಚಿಲಕವಾಡಿ, ಬೆಟ್ಟದಪುರ, ದಂಡಿಕೆರೆ, ಸಾಲೂರು, ಹಲಗೂರು, ಹರವೆ, ಚಿಕ್ಕತುಪ್ಪೂರು, ಚುಂಚನಹಳ್ಳಿ, ಕುಂದೂರು, ಮುಡಿಗುಂಡ, ದೊಡ್ಡಬಳ್ಳಾಪುರ, ಅರಕೆರೆ, ಮಾದಳ್ಳಿ, ರಾಗಿಬೊಮ್ಮನಹಳ್ಳಿ, ಕಸುವಿನಹಳ್ಳಿ, ಬಸವೇಶ್ವರ ಮಠದ ಶ್ರೀಗಳು, ಮುಖಂಡರು ಪಾಲ್ಗೊಂಡಿದ್ದರು.</p>.<p>ಪ್ರೊ.ಸುಬ್ಬಪ್ಪ ಸ್ವಾಗತಿಸಿದರು. ಸಿ.ವಿ. ಬಸವರಾಜು ವಂದಿಸಿದರು. ಎಚ್.ಎಲ್. ಪ್ರಕಾಶ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>